CWG 2022: ಭಾರತಕ್ಕೆ ಮತ್ತೊಂದು ಪದಕ ಫಿಕ್ಸ್; ಬ್ಯಾಡ್ಮಿಂಟನ್​ನಲ್ಲಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು..!

CWG 2022: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಸಿಂಧು ಅವರು ಸೆಮಿಫೈನಲ್‌ನಲ್ಲಿ ಸಿಂಗಾಪುರದ ಜಿಯಾ ಮಿನ್ ಅವರನ್ನು ಸೋಲಿಸಿ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕ ಖಚಿತಪಡಿಸಿದ್ದಾರೆ.

CWG 2022: ಭಾರತಕ್ಕೆ ಮತ್ತೊಂದು ಪದಕ ಫಿಕ್ಸ್; ಬ್ಯಾಡ್ಮಿಂಟನ್​ನಲ್ಲಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು..!
ಪಿವಿ ಸಿಂಧು
Follow us
| Updated By: ಪೃಥ್ವಿಶಂಕರ

Updated on:Aug 07, 2022 | 5:06 PM

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ (Olympic medalist) ಸಿಂಧು (PV Sindhu) ಅವರು ಸೆಮಿಫೈನಲ್‌ನಲ್ಲಿ ಸಿಂಗಾಪುರದ ಜಿಯಾ ಮಿನ್ ಅವರನ್ನು ಸೋಲಿಸಿ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ (Commonwealth Games 2022) ಭಾರತಕ್ಕೆ ಪದಕ ಖಚಿತಪಡಿಸಿದ್ದಾರೆ. ಮೊದಲ ಗೇಮ್‌ನಲ್ಲಿ ಭಾರತದ ತಾರೆ ಸಿಂಗಾಪುರದ ಆಟಗಾರ್ತಿಯಿಂದ ಕಠಿಣ ಸವಾಲನ್ನು ಎದುರಿಸಿದರೂ, ಸಿಂಧು ತಮ್ಮ ಅನುಭವವನ್ನು ಉತ್ತಮವಾಗಿ ಬಳಸಿಕೊಂಡು ಮೊದಲ ಗೇಮ್ ಅನ್ನು 21-19 ಮತ್ತು ಎರಡನೇ ಗೇಮ್‌ನಲ್ಲಿ 21-17 ರಿಂದ ಗೆದ್ದು ಫೈನಲ್ ಪ್ರವೇಶಿಸಿದರು.

ಸಿಂಧು ಸೆಮಿಫೈನಲ್‌ಗೆ ಪ್ರವೇಶಿಸಲು ಸಾಕಷ್ಟು ಹೋರಾಟ ನಡೆಸಬೇಕಾಯಿತು. ಸಿಂಧು, ಕ್ವಾರ್ಟರ್ ಫೈನಲ್‌ನಲ್ಲಿ 60ನೇ ಶ್ರೇಯಾಂಕದ ಮಲೇಷ್ಯಾದ ಗೋ ವೀ ಜಿನ್ ಅವರನ್ನು ಸೋಲಿಸಲು ಸಾಕಷ್ಟು ಬೆವರು ಹರಿಸಬೇಕಾಯ್ತು. ಕೊನೆಗೂ ಸಿಂಧು 19-21, 21-14, 21-18 ಅಂತರದಲ್ಲಿ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸಿಂಧು ಈ ಹಿಂದೆ 2014ರಲ್ಲಿ ಕಾಮನ್‌ವೆಲ್ತ್‌ನಲ್ಲಿ ಕಂಚು ಹಾಗೂ 2018ರಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

ಇದನ್ನೂ ಓದಿ
Image
CWG 2022: ಭಾರತಕ್ಕೆ ಮತ್ತೊಂದು ಪದಕ ಫಿಕ್ಸ್; ಬ್ಯಾಡ್ಮಿಂಟನ್​ನಲ್ಲಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು..!
Image
CWG 2022: ನೀತು ಪಂಚ್‌ಗೆ ಬೆದರಿದ ಇಂಗ್ಲೆಂಡ್ ಬಾಕ್ಸರ್; ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಬಂಗಾರ
Image
CWG 2022: ಶೂಟೌಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಕಂಚಿನ ಪದಕ ಗೆದ್ದ ಭಾರತ ಮಹಿಳಾ ಹಾಕಿ ತಂಡ

ಸಿಂಧುಗೆ ಇಂಜುರಿ

ಪಂದ್ಯದ ವೇಳೆ, ಸಿಂಧು ತನ್ನ ಎಡಗಾಲಿಗೆ ಬ್ಯಾಂಡೇಜ್‌ ಸುತ್ತಿಕೊಂಡಿರುವುದು ಕಂಡುಬಂತು, ಇದರಿಂದಾಗಿ ಸಿಂಧು ನಡೆದಾಡಲು ಸ್ವಲ್ಪ ತೊಂದರೆ ಅನುಭವಿಸುತ್ತಿದ್ದರು. ಇದರ ಲಾಭ ಪಡೆದ ಸಿಂಗಾಪುರದ ಆಟಗಾರ್ತಿ ಅಮೋಘ ಆರಂಭ ನೀಡಿ 8-4ರ ಮುನ್ನಡೆ ಸಾಧಿಸಿದ್ದರು. ಆದರೆ ಪುನರಾಗಮನದಲ್ಲಿ ಮಿಂಚಿದ ಸಿಂಧು ಸ್ಕೋರ್ ಸಮಬಲಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ. ಡ್ರಾಪ್ ಶಾಟ್ ಮೂಲಕ ಪಾಯಿಂಟ್ಸ್ ಕಲೆಹಾಕಿದ ಅವರು ವಿರಾಮದವರೆಗೂ 11-9 ರಿಂದ ಮುನ್ನಡೆ ಸಾಧಿಸಿದರು.

ಆದರೆ ಸಿಂಗಾಪುರದ ಆಟಗಾರ್ತಿ ಪಂದ್ಯದಲ್ಲಿ ಮತ್ತೆ ಪುನರಾಗಮನವನ್ನು ಮಾಡಿ ಪಾಯಿಂಟ್​ ಅನ್ನು 16-19 ಕ್ಕೆ ತಂದು ನಿಲ್ಲಿಸಿದರು. ಎರಡನೇ ಗೇಮ್‌ನಲ್ಲೂ ಜಿಯಾ ಸಿಂಧುಗೆ ತೀವ್ರ ಪೈಪೋಟಿ ನೀಡಿದರು ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸಿಂಧು ಪ್ರಬಲ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.

Published On - 3:36 pm, Sun, 7 August 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ