AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PV Sindhu: ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿವಿ ಸಿಂಧು

CWG 2022 Badminton: ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

PV Sindhu: ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿವಿ ಸಿಂಧು
ಸಿಂಧು
TV9 Web
| Edited By: |

Updated on: Aug 08, 2022 | 2:49 PM

Share

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

ಕಾಮನ್​ವೆಲ್ತ್ ಗೇಮ್ಸ್​ 2022 ರಲ್ಲಿ ಪಿವಿ ಸಿಂಧು ಅವರ ಫೈನಲ್ ಪಯಣ ಸಂಕ್ಷಿಪ್ತ ನೋಟ: 

  • 64 ರ ಸುತ್ತು – ಬೈ
  • 32 ರ ಸುತ್ತು – ಮಾಲ್ಡೀವ್ಸ್‌ನ ಅಬ್ದುಲ್ ರಜಾಕ್ ಫಾತಿಮತ್ ನಬಾಹಾ ಅವರನ್ನು 21-4, 21-11 ಸೆಟ್​​ಗಳಿಂದ ಸೋಲಿಸಿದ್ದರು.
  • 16 ರ ಸುತ್ತು – ಉಗಾಂಡಾದ ಹುಸಿನಾ ಕೊಬುಗಾಬೆ ಅವರನ್ನು 21-10, 21-9 ಸೆಟ್​​ಗಳಿಂದ ಮಣಿಸಿದ್ದರು.
  • ಕ್ವಾರ್ಟರ್‌ಫೈನಲ್‌ – ಮಲೇಷ್ಯಾದ ಗೊಹ್ ಜಿನ್ ವೀ ವಿರುದ್ಧ 19-21, 21-14, 21-18 ಸೆಟ್​ಗಳಿಂದ ಪರಾಜಯಗೊಳಿಸಿದ್ದರು.
  • ಸೆಮಿಫೈನಲ್ – ಸಿಂಗಾಪುರದ ಯೋ ಜಿಯಾ ಮಿನ್ ಅವರನ್ನು 21-19, 21-17 ನೇರ ಸೆಟ್​ಗಳಿಂದ ಸೋಲಿಸಿದ್ದರು.
Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?