AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಫೈನಲ್​ನಲ್ಲಿ ಪಾಕಿಸ್ತಾನದ ಕುಸ್ತಿಪಟುವನ್ನು ಉಸಿರುಗಟ್ಟಿಸಿ ಭಾರತಕ್ಕೆ ಚಿನ್ನ ಗೆದ್ದ ನವೀನ್..!

CWG 2022: ಭಾರತದ ಪುರುಷ ಕುಸ್ತಿಪಟು ನವೀನ್ ಶನಿವಾರ ಕಾಮನ್‌ವೆಲ್ತ್ ಗೇಮ್ಸ್‌ನ 74 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನವೀನ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ತಾಹಿರ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು.

CWG 2022: ಫೈನಲ್​ನಲ್ಲಿ ಪಾಕಿಸ್ತಾನದ ಕುಸ್ತಿಪಟುವನ್ನು ಉಸಿರುಗಟ್ಟಿಸಿ ಭಾರತಕ್ಕೆ ಚಿನ್ನ ಗೆದ್ದ ನವೀನ್..!
Naveen
TV9 Web
| Edited By: |

Updated on:Aug 06, 2022 | 11:41 PM

Share

ಭಾರತದ ಪುರುಷ ಕುಸ್ತಿಪಟು (male wrestler) ನವೀನ್ ಶನಿವಾರ ಕಾಮನ್‌ವೆಲ್ತ್ ಗೇಮ್ಸ್‌ನ ( Commonwealth Games) 74 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನವೀನ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ತಾಹಿರ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು. ಈ ಕ್ರೀಡಾಕೂಟದಲ್ಲಿ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಇದು ಆರನೇ ಚಿನ್ನದ ಪದಕವಾಗಿದೆ. ನವೀನ್ ಎದುರು ಪಾಕಿಸ್ತಾನದ ಕುಸ್ತಿಪಟು ಎಲ್ಲಿಯೂ ನಿಲ್ಲಲಾರದೆ ಸುಲಭವಾಗಿ ಸೋಲನುಭವಿಸಿದರು.

ತಾಹಿರ್, ನವೀನ್ ವಿರುದ್ಧ ಲೆಗ್ ಅಟ್ಯಾಕ್ ಮಾಡಲು ಪ್ರಯತ್ನಿಸಿದರು. ನವೀನ್ ಕೂಡ ಅದೇ ಪ್ರಯತ್ನ ಮಾಡಿದರು, ಆದರೆ ತಾಹಿರ್ ಜಾಣತನದಿಂದ ನವಿನ್ ಜಾಲಕ್ಕೆ ಬೀಳುವುದರಿಂದ ತಪ್ಪಿಸಿಕೊಂಡರು. ಈ ಮಧ್ಯೆ, ರೆಫರಿ ತಾಹಿರ್‌ಗೆ ನಿಷ್ಕ್ರಿಯತೆಗೆ (passivity) ಸವಾಲು ಹಾಕಿದರು. ಇದಾದ ಬೆನ್ನಲ್ಲೇ ನವೀನ್ ತಾಹಿರ್ ಅವರನ್ನು ಕೆಳಕ್ಕೆ ಕೆಡವಿ ಎರಡು ಪಾಯಿಂಟ್ಸ್ ಪಡೆದರು. ಮೊದಲ ಸುತ್ತಿನ ಅಂತ್ಯಕ್ಕೆ ನವೀನ್ 2-0 ಮುನ್ನಡೆ ಸಾಧಿಸಿದ್ದರು.

ಇದನ್ನೂ ಓದಿ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಬಂಗಾರ; 57 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ರವಿ ದಹಿಯಾ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ; 50 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಪೂಜಾ ಗೆಹ್ಲೋಟ್
Image
CWG 2022 Winner List Day 9: 9ನೇ ದಿನ ಪದಕಗಳ ಭೇಟೆಯಾಡಿದ ಭಾರತ; ಇಲ್ಲಿದೆ ಪೂರ್ಣ ವಿವರ

ಎರಡನೇ ಸುತ್ತಿನಲ್ಲಿ ರಕ್ಷಣಾತ್ಮಕ ಆಟ

ಪಾಕಿಸ್ತಾನಿ ಕುಸ್ತಿಪಟು ಎರಡನೇ ಸುತ್ತಿನಲ್ಲಿ ರಕ್ಷಣಾತ್ಮಕ ಆಟಕ್ಕೆ ಮುಂದಾದರು. ಇಲ್ಲಿ ನವೀನ್ ಮೇಲುಗೈ ಸಾಧಿಸಿ ಮೂರು ಅಂಕಗಳನ್ನು ಗಳಿಸಿದರು ಮತ್ತು ಸ್ಕೋರ್ ಅನ್ನು 5-0 ಮಾಡಿದರು. ನಂತರ ನವೀನ್ ನಾಲ್ಕು ಪಾಯಿಂಟ್ಸ್ ಬೆಟ್ಟಿಂಗ್ ಮಾಡುವ ಮೂಲಕ ಸ್ಕೋರ್ ಅನ್ನು 9-0 ಗೆ ತೆಗೆದುಕೊಂಡು ಹೊದರು. ಇಲ್ಲಿ ನವೀನ್‌ಗೆ ಇನ್ನೂ ಒಂದು ಪಾಯಿಂಟ್ ಅಗತ್ಯವಿತ್ತು, ಅದರಿಂದ ಅವನು ತಾಂತ್ರಿಕ ಪ್ರಾವೀಣ್ಯತೆಯ ಆಧಾರದ ಮೇಲೆ ಪಂದ್ಯವನ್ನು ಗೆದ್ದುಕೊಂಡರು.

Published On - 11:13 pm, Sat, 6 August 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?