AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ; 50 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಪೂಜಾ ಗೆಹ್ಲೋಟ್

CWG 2022: ಭಾರತದ ಮಹಿಳಾ ಕುಸ್ತಿಪಟು ಪೂಜಾ ಗೆಹ್ಲೋಟ್ ಶನಿವಾರ ಮತ್ತೊಂದು ಪದಕವನ್ನು ದೇಶದ ಚೀಲದಲ್ಲಿ ಹಾಕಿದ್ದಾರೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಕಾಟಿಷ್ ಕುಸ್ತಿಪಟುವನ್ನು 12-2 ರಿಂದ ತಾಂತ್ರಿಕ ದಕ್ಷತೆಯಲ್ಲಿ ಸೋಲಿಸುವ ಮೂಲಕ ಕಂಚಿನ ಪದಕವನ್ನು ಗೆದ್ದರು.

CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ; 50 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಪೂಜಾ ಗೆಹ್ಲೋಟ್
TV9 Web
| Edited By: |

Updated on:Aug 06, 2022 | 10:26 PM

Share

ಭಾರತದ ಮಹಿಳಾ ಕುಸ್ತಿಪಟು ಪೂಜಾ ಗೆಹ್ಲೋಟ್ (Pooja Gehlot) ಶನಿವಾರ ಮತ್ತೊಂದು ಪದಕವನ್ನು ದೇಶದ ಚೀಲದಲ್ಲಿ ಹಾಕಿದ್ದಾರೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಕಾಟಿಷ್ ಕುಸ್ತಿಪಟುವನ್ನು 12-2 ರಿಂದ ತಾಂತ್ರಿಕ ದಕ್ಷತೆಯಲ್ಲಿ ಸೋಲಿಸುವ ಮೂಲಕ ಕಂಚಿನ ಪದಕವನ್ನು ಗೆದ್ದರು. ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (Commonwealth Games) ಭಾರತಕ್ಕೆ ಕುಸ್ತಿಯಲ್ಲಿ ಇದು ಏಳನೇ ಪದಕವಾಗಿದೆ. ಇದಕ್ಕೂ ಮುನ್ನ ಶುಕ್ರವಾರ ಆರು ಭಾರತೀಯ ಕುಸ್ತಿ ಆಟಗಾರರು ಮ್ಯಾಟ್‌ಗೆ ಇಳಿದ್ದಿದ್ದು ಎಲ್ಲರೂ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಕಾಟ್ಲೆಂಡ್‌ನ ಕ್ರಿಸ್ಟೆಲ್ಲೆ ಲೆಮೊಫೆಕ್ ಅವರು ಪೂಜಾಗೆ ಆರಂಭದಲ್ಲಿ ಉತ್ತಮ ಹೋರಾಟ ನೀಡಿದರು. ಕೆಳಗೆ ಹಾಕುವ ಮೂಲಕ ಎರಡು ಅಂಕಗಳನ್ನು ಪಡೆದು ಪೂಜಾ ಮೇಲೆ ಒತ್ತಡ ಹೇರಲು ಬಯಸಿದ್ದರು. ಇದರ ನಂತರ, ಪೂಜಾ ಅದ್ಭುತ ಪುನರಾಗಮನವನ್ನು ಮಾಡಿದರು ಮತ್ತು ಎದುರಾಳಿಗೆ ಯಾವುದೇ ಅವಕಾಶವನ್ನು ನೀಡದೆ 10-2 ರಿಂದ ಮುನ್ನಡೆ ಸಾಧಿಸಿದರು. ಇದಾದ ಬಳಿಕ ಇನ್ನೆರಡು ಅಂಕಗಳನ್ನು ಪಡೆದು 10 ಅಂಕಗಳ ವ್ಯತ್ಯಾಸ ಮಾಡಿ ತಾಂತ್ರಿಕ ದಕ್ಷತೆಯ ಆಧಾರದ ಮೇಲೆ ಜಯ ಸಾಧಿಸಿದರು.

ಇದನ್ನೂ ಓದಿ
Image
CWG 2022 Day 9 Schedule: ರಿಲೇ, ಕುಸ್ತಿ, ಬಾಕ್ಸಿಂಗ್‌, ಅಥ್ಲೆಟಿಕ್ಸ್‌; 9ನೇ ದಿನ ಹೀಗಿದೆ ಭಾರತದ ವೇಳಾಪಟ್ಟಿ
Image
CWG 2022 Results: ಕುಸ್ತಿಯಲ್ಲಿ ಸುಲಭವಾಗಿ ಗೆದ್ದ ಬಜರಂಗ್- ದೀಪಕ್; ಇತರೆ ಕ್ರೀಡೆಗಳ ವಿವರ ಹೀಗಿದೆ
Image
CWG 2022: ಮೈದಾನದಲ್ಲೇ ಪರಸ್ಪರ ಕುತ್ತಿಗೆ ಪಟ್ಟಿ ಹಿಡಿದು ಜಗಳಕ್ಕಿಳಿದ ಹಾಕಿ ಆಟಗಾರರು! ವಿಡಿಯೋ ನೋಡಿ

ಸೆಮಿಫೈನಲ್‌ನಲ್ಲಿ ಸೋಲು

ಮಹಿಳೆಯರ 50ಕೆಜಿ ವಿಭಾಗದಲ್ಲಿ ಪೂಜಾ ತಾಂತ್ರಿಕ ಶ್ರೇಷ್ಠತೆಯಿಂದ ಸ್ಕಾಟ್ಲೆಂಡ್‌ನ ಕ್ರಿಸ್ಟೆಲ್ಲೆ ಎಲ್ ಅವರನ್ನು ಸೋಲಿಸಿದರು. ಇದರ ನಂತರ ಕ್ಯಾಮರೂನ್‌ನ ರೆಬೆಕಾ ಆಂಡೊಲೊ ಮುವಾಂಬೊ ಮೇಲೆ ವಾಕ್‌ಓವರ್ ನೀಡಲಾಯಿತು. ಆದರೆ ಸೆಮಿ-ಫೈನಲ್‌ನಲ್ಲಿ ಕೆನಡಾದ ಮ್ಯಾಡಿಸನ್ ಬಿಯಾಂಕಾ ಪಾರ್ಕ್ಸ್‌ ಎದುರು ಪೂಜಾ ಸೋಲನುಭವಿಸಿದರು. ಮ್ಯಾಡಿಸನ್ ಫೈನಲ್‌ಗೆ ಪ್ರವೇಶಿಸಿದ್ದರಿಂದ ಪೂಜಾ ಅವರು ಗೆದ್ದ ಕಂಚಿನ ಪದಕದ ಪಂದ್ಯವನ್ನು ಆಡುವ ಅವಕಾಶವನ್ನು ಪಡೆದರು.

Published On - 9:54 pm, Sat, 6 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?