AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕೊರೋನಾ ಲಕ್ಷಣ: ಐಸೋಲೇಷನ್​ಗೆ ಒಳಗಾದ ಪಿವಿ ಸಿಂಧು

PV Sindhu: ಜುಲೈ 28 ರಿಂದ ಶುರುವಾಗಲಿರುವ ಕಾಮನ್​ವೆಲ್ತ್​ ಗೇಮ್ಸ್​ಗೆ ಆಗಸ್ಟ್ 8 ರಂದು ತೆರೆಬೀಳಲಿದೆ. 2018 ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಒಟ್ಟು 66 ಪದಕ ಗೆದ್ದಿದ್ದ ಭಾರತವು ಈ ಬಾರಿ ಕೂಡ ಪದಕ ಪಟ್ಟಿಯಲ್ಲಿ ಟಾಪ್- 5 ನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

CWG 2022: ಕೊರೋನಾ ಲಕ್ಷಣ: ಐಸೋಲೇಷನ್​ಗೆ ಒಳಗಾದ ಪಿವಿ ಸಿಂಧು
PV Sindhu
TV9 Web
| Updated By: ಝಾಹಿರ್ ಯೂಸುಫ್|

Updated on: Jul 28, 2022 | 1:39 PM

Share

ಕಾಮನ್‌ವೆಲ್ತ್ ಗೇಮ್ಸ್ ಆರಂಭಕ್ಕೂ ಮುನ್ನವೇ ಭಾರತ ಭಾರೀ ಹಿನ್ನಡೆ ಅನುಭವಿಸಿದೆ. ವರದಿಗಳ ಪ್ರಕಾರ, ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಅವರು ಐಸೋಲೇಷನ್​ಗೆ ಒಳಗಾಗಿದ್ದಾರೆ. ಇದರ ಬೆನ್ನಲ್ಲೇ ಇಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡದ ಧ್ವಜಧಾರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ ನೀರಜ್ ಚೋಪ್ರಾ ಗಾಯಗೊಂಡು ಕಾಮನ್​ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಕಾರಣ ಪಿವಿ ಸಿಂಧು ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಸಿಂಧು ಸಹ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಅವರು ಕಾಣಿಸಿಕೊಳ್ಳುವುದು ಅನುಮಾನ.

ಇನ್ನೊಂದೆಡೆ ಧ್ವಜಧಾರಿಯ ಪಟ್ಟಿಯಲ್ಲಿ ಹಾಕಿ ತಂಡದ ನಾಯಕ ಮನ್​ಪ್ರೀತ್ ಸಿಂಗ್ ಹೆಸರು ಕೂಡ ಇದೆ. ಆದರೆ ಸಾಮಾನ್ಯವಾಗಿ ಮಹಿಳಾ ಹಾಗೂ ಪರುಷ ಸ್ಪರ್ಧಿಗಳು ಜೊತೆಯಾಗಿ ಧ್ವಜಧಾರಿಯಾಗಿ ಕಾಣಿಸಿಕೊಳ್ಳುತ್ತಾರೆ. ಹೀಗಾಗಿ ಪಿವಿ ಸಿಂಧು ಅವರ ಸ್ಥಾನದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಕಾಮನ್​ವೆಲ್ತ್ ಗೇಮ್ಸ್​ ನಿಯಮಗಳ ಪ್ರಕಾರ, ಎಲ್ಲಾ ಕ್ರೀಡಾಪಟುಗಳು ಯುಕೆಗೆ ಆಗಮಿಸುವ 72 ಗಂಟೆಗಳ ಮೊದಲು ಕೋವಿಡ್-19 ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಅಲ್ಲದೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಮತ್ತೊಂದು ಪರೀಕ್ಷೆ ಮಾಡಿಸಬೇಕು. ಏತನ್ಮಧ್ಯೆ, ಕಳೆದ ಕೆಲವು ದಿನಗಳಲ್ಲಿ ಪ್ರತಿದಿನ ಒಂದು ಡಜನ್‌ಗಿಂತಲೂ ಹೆಚ್ಚು ಸಕಾರಾತ್ಮಕ ಪ್ರಕರಣಗಳು ಕಂಡು ಬರುತ್ತಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದೀಗ ಪಿವಿ ಸಿಂಧು ಕೊರೋನಾ ಸೋಂಕಿಗೆ ಒಳಗಾಗಿರುವುದು ಪತ್ತೆಯಾಗಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರ್ತಿ ಪೂಜಾ ವಸ್ತ್ರಕರ್ ಸೇರಿದಂತೆ ಇಬ್ಬರು ಮಹಿಳಾ ಕ್ರಿಕೆಟಿಗರಲ್ಲೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಈ ಇಬ್ಬರು ಐಸೋಲೇಷನ್​ನಲ್ಲಿರಿಸಲಾಗಿದೆ.

ಜುಲೈ 28 ರಿಂದ ಶುರುವಾಗಲಿರುವ ಕಾಮನ್​ವೆಲ್ತ್​ ಗೇಮ್ಸ್​ಗೆ ಆಗಸ್ಟ್ 8 ರಂದು ತೆರೆಬೀಳಲಿದೆ. 2018 ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಒಟ್ಟು 66 ಪದಕ ಗೆದ್ದಿದ್ದ ಭಾರತವು ಈ ಬಾರಿ ಕೂಡ ಪದಕ ಪಟ್ಟಿಯಲ್ಲಿ ಟಾಪ್- 5 ನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಬಾರಿ ಭಾರತದಿಂದ ಒಟ್ಟು 214 ಸ್ಫರ್ಧಿಗಳು ಕಣದಲ್ಲಿದ್ದು, ಹೀಗಾಗಿ ಹೆಚ್ಚಿನ ಪದಕಗಳನ್ನು ಎದುರು ನೋಡಬಹುದು.

ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ