AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕುಸ್ತಿಯಲ್ಲಿ ಭಾರತಕ್ಕೆ 5ನೇ ಚಿನ್ನ; 53 ಕೆಜಿ ವಿಭಾಗದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ವಿನೇಶ್ ಫೋಗಟ್

CWG 2022: ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತವು ಕುಸ್ತಿಯಲ್ಲಿ ತನ್ನ ಐದನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಭಾರತದ ದೊಡ್ಡ ಭರವಸೆಗಳಲ್ಲಿ ಒಬ್ಬರಾದ ಸೂಪರ್ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ.

CWG 2022: ಕುಸ್ತಿಯಲ್ಲಿ ಭಾರತಕ್ಕೆ 5ನೇ ಚಿನ್ನ; 53 ಕೆಜಿ ವಿಭಾಗದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ವಿನೇಶ್ ಫೋಗಟ್
TV9 Web
| Edited By: |

Updated on:Aug 06, 2022 | 11:19 PM

Share

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 (Birmingham Commonwealth Games 2022)ರಲ್ಲಿ ಭಾರತವು ಕುಸ್ತಿಯಲ್ಲಿ ತನ್ನ ಐದನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಭಾರತದ ದೊಡ್ಡ ಭರವಸೆಗಳಲ್ಲಿ ಒಬ್ಬರಾದ ಸೂಪರ್ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಅನುಭವಿ ಕುಸ್ತಿಪಟು ವಿನೇಶ್ ಅವರು ನಾರ್ಡಿಕ್ ಮಾದರಿಯಿಂದ ಈ ವಿಭಾಗದ ಪಂದ್ಯಗಳ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರು. ಈ ಮೂಲಕ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ವಿನೇಶ್ ಸತತ ಮೂರನೇ ಬಾರಿಗೆ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು.

ವಿನೇಶ್ ಈ ಹಿಂದೆ 2014ರ ಗ್ಲಾಸ್ಗೋ ಗೇಮ್ಸ್‌ನಲ್ಲಿ 48 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದಿದ್ದರೆ, 2018ರ ಗೋಲ್ಡ್ ಕೋಸ್ಟ್ ಗೇಮ್ಸ್‌ನಲ್ಲಿ 50 ಕೆಜಿಯಲ್ಲಿ ಚಿನ್ನ ಗೆದ್ದಿದ್ದರು. ಇದರ ನಂತರ, ಈಗ CWG ನಲ್ಲಿ ಮೂರನೇ ಬಾರಿಗೆ 53 ಕೆಜಿಯಲ್ಲಿ ಚಿನ್ನ ಗೆದ್ದಿದ್ದಾರೆ. ಇಷ್ಟೇ ಅಲ್ಲ, ಈ ಪದಕದಿಂದ ವಿನೇಶ್ ಕಳೆದ ವರ್ಷದ ಟೋಕಿಯೊ ಒಲಿಂಪಿಕ್ಸ್‌ನ ನಿರಾಸೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಿದ್ದಾರೆ. ಟೋಕಿಯೊದಲ್ಲಿ ವಿನೇಶ್ ಪದಕ ಗೆಲ್ಲುತ್ತಾರೆ ಎಂದು ಎಲ್ಲರು ನಿರೀಕ್ಷಿಸಿದ್ದರು ಆದರೆ ಗೆಲ್ಲಲು ಸಾಧ್ಯವಾಗಲಿಲ್ಲ. ಇದೀಗ ಒಂದು ವರ್ಷದ ಬಳಿಕ ಮಹತ್ವದ ಪದಕ ಗೆದ್ದಿದ್ದಾರೆ.

ಇದನ್ನೂ ಓದಿ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಬಂಗಾರ; 57 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ರವಿ ದಹಿಯಾ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ; 50 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಪೂಜಾ ಗೆಹ್ಲೋಟ್
Image
CWG 2022 Winner List Day 9: 9ನೇ ದಿನ ಪದಕಗಳ ಭೇಟೆಯಾಡಿದ ಭಾರತ; ಇಲ್ಲಿದೆ ಪೂರ್ಣ ವಿವರ

ನಾರ್ಡಿಕ್ ಫಾರ್ಮ್ಯಾಟ್ ಎಂದರೇನು?

ವಿನೇಶ್ ಅವರಿಗೆ ಈ ಪಂದ್ಯ ಅಷ್ಟು ಸುಲಭವಾಗಿ ಇರಲಿಲ್ಲ, ಇದರಲ್ಲಿ ಕುಸ್ತಿಪಟುಗಳನ್ನು ಎರಡು ವಿಭಿನ್ನ ಗುಂಪುಗಳಾಗಿ ವಿಂಗಡಿ, ನಂತರ ಫೈನಲ್ ನಡೆಯುತ್ತದೆ. ಈ ಪಂದ್ಯವನ್ನು ನಾರ್ಡಿಕ್ ಮಾದರಿಯಲ್ಲಿ ಆಡಲಾಯಿತು. ಮೂಲಭೂತವಾಗಿ, ತೂಕ ವಿಭಾಗದಲ್ಲಿ 6 ಕ್ಕಿಂತ ಹೆಚ್ಚು ಸ್ಪರ್ಧಿಗಳು ಇಲ್ಲದಿದ್ದಾಗ ನಾರ್ಡಿಕ್ ಸ್ವರೂಪವನ್ನು ಬಳಸಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಾ ಕುಸ್ತಿಪಟುಗಳು ‘ರೌಂಡ್ ರಾಬಿನ್’ ಅಡಿಯಲ್ಲಿ ಪರಸ್ಪರ ಪೈಪೋಟಿ ನಡೆಸಬೇಕಾಗಿದೆ. ಅದರ ಆಧಾರದ ಮೇಲೆ, ಹೆಚ್ಚು ಅಂಕಗಳನ್ನು ಹೊಂದಿರುವವರು ಚಿನ್ನವನ್ನು ಪಡೆಯುತ್ತಾರೆ.

ಈ ಮೂಲಕ ವಿನೇಶ್ ಅವರ 53 ಕೆ.ಜಿ ವಿಭಾಗದಲ್ಲಿ ಕೇವಲ 4 ಕುಸ್ತಿಪಟುಗಳಿದ್ದರು. ಭಾರತವಲ್ಲದೆ ಕೆನಡಾ, ನೈಜೀರಿಯಾ ಮತ್ತು ಶ್ರೀಲಂಕಾದ ಕುಸ್ತಿಪಟುಗಳೂ ಇದ್ದರು. ವಿನೇಶ್ ಅವರು ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಹೆಚ್ಚಿನ ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದರು. ವಿನೇಶ್ ಕೊನೆಯ ಬೌಟ್‌ನಲ್ಲಿ ಶ್ರೀಲಂಕಾದ ಕುಸ್ತಿಪಟುವನ್ನು ಸೋಲಿಸಿ ಕ್ಲೀನ್ ಸ್ವೀಪ್ ಮಾಡಿದರು. ಇದರೊಂದಿಗೆ ಕುಸ್ತಿಯಲ್ಲಿ ಭಾರತಕ್ಕೆ ಐದು ಮತ್ತು 11 ನೇ ಚಿನ್ನದ ಪದಕವನ್ನು ನೀಡಿದರು.

ಇನ್ನಷ್ಟು ಕಾಮನ್​ವೆಲ್ತ್ ಗೇಮ್ಸ್  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:40 pm, Sat, 6 August 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು