AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಚಿನ್ನ

CWG 2022 Men's Doubles Badminton: 45 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ 21-15, 21-13 ಅಂತರದಿಂದ ನೇರ ಸೆಟ್​ಗಳಿಂದ ಗೆಲ್ಲುವ ಮೂಲಕ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟರು.

CWG 2022: ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಚಿನ್ನ
Satwiksairaj Rankireddy-Chirag Shetty Clinch
TV9 Web
| Updated By: ಝಾಹಿರ್ ಯೂಸುಫ್|

Updated on:Aug 08, 2022 | 6:49 PM

Share

ಕಾಮನ್‌ವೆಲ್ತ್ ಗೇಮ್ಸ್‌ನ ಕೊನೆಯ ದಿನ ಭಾರತ ಬ್ಯಾಡ್ಮಿಂಟನ್‌ನಲ್ಲಿ ಮೂರು ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮತ್ತು ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಭಾರತದ ನಂಬರ್ ಒನ್ ಜೋಡಿ ಇಂಗ್ಲೆಂಡ್‌ನ ಲೇನ್ ಮತ್ತು ವೆಂಡಿ ಜೋಡಿಯನ್ನು ಸೋಲಿಸಿ ಡಬಲ್ಸ್​ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು. ಮುನ್ನ ಈ ಜೋಡಿ 2018ರಲ್ಲಿ ಬೆಳ್ಳಿ ಪದಕ ಜಯಿಸಿತ್ತು. ಇದೀಗ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಕಾಮನ್​ವೆಲ್ತ್ ಕ್ರೀಡಾಕೂಟದಲ್ಲಿ ಸಾತ್ವಿಕ್-ಚಿರಾಗ್ ಜೋಡಿ ಪಾರುಪತ್ಯ ಮೆರೆದಿದ್ದಾರೆ.

45 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ 21-15, 21-13 ಅಂತರದಿಂದ ನೇರ ಸೆಟ್​ಗಳಿಂದ ಗೆದ್ದರು. ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತ ಬ್ಯಾಡ್ಮಿಂಟನ್‌ನಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು ಎಂಬುದು ವಿಶೇಷ.

ಈ ಬಾರಿಯ ಕ್ರೀಡಾಕೂಟದಲ್ಲಿ ಸಾತ್ವಿಕ್ ಮತ್ತು ಚಿರಾಗ್ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಈ ಜೋಡಿಯಿಂದ ಚಿನ್ನವನ್ನು ನಿರೀಕ್ಷಿಸಲಾಗಿತ್ತು. ಮತ್ತೊಂದೆಡೆ ಸ್ಟಾರ್ ಆಟಗಾರ್ತಿ ಪಿವಿ ಸಿಂಧು ಮಹಿಳಾ ಸಿಂಗಲ್ಸ್​ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದರ ಬೆನ್ನಲ್ಲೇ ಪುರುಷರ ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಸಂಭ್ರಮಿಸಿದ್ದರು. ಈ ಗೆಲುವಿನ ಸಂಭ್ರಮ ಮಾಸುವ ಮುನ್ನವೇ ಇದೀಗ ಸಾತ್ವಿಕ್-ಚಿರಾಗ್ ಜೋಡಿಯು ಪರುಷರ ಡಬಲ್ಸ್​ನಲ್ಲಿ ಚಿನ್ನದ ಪದಕ ಬೇಟೆಯಾಡಿದ್ದಾರೆ. ಈ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿ ಭಾರತದ ಬ್ಯಾಡ್ಮಿಂಟನ್ ತಾರೆಗಳು ಮೂರು ವಿಭಾಗದಲ್ಲೂ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

Published On - 6:17 pm, Mon, 8 August 22

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್