CWG 2022: ಕಾಮನ್‌ವೆಲ್ತ್‌ ಗೇಮ್ಸ್​ನಿಂದ ನೀರಜ್ ಔಟ್, ಭಾರತಕ್ಕೆ ಪದಕ ಮಿಸ್! ಪಾಕಿಸ್ತಾನಕ್ಕೆ ತೆರೆಯಿತು ಭಾಗ್ಯದ ಬಾಗಿಲು

CWG 2022: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಪಾಕಿಸ್ತಾನದ ಅರ್ಷದ್ ನದೀಮ್ ಮುಖಾಮುಖಿಯಾದಾಗಲೆಲ್ಲ ಅವರು, ನೀರಜ್ ಎದುರು ಸೋಲುಂಡು, ನಿರಾಸೆಯಿಂದ ಹೊರಬರಬೇಕಾಗಿತ್ತು. ಆದರೆ ಈ ಬಾರಿ ಪಾಕಿಸ್ತಾನದ ಜಾವೆಲಿನ್ ಎಸೆತಗಾರನಿಗೆ ಉತ್ತಮ ಅವಕಾಶ ಸಿಕ್ಕಿದೆ.

CWG 2022: ಕಾಮನ್‌ವೆಲ್ತ್‌ ಗೇಮ್ಸ್​ನಿಂದ ನೀರಜ್ ಔಟ್, ಭಾರತಕ್ಕೆ ಪದಕ ಮಿಸ್! ಪಾಕಿಸ್ತಾನಕ್ಕೆ ತೆರೆಯಿತು ಭಾಗ್ಯದ ಬಾಗಿಲು
Neeraj Chopra, Arshad Nadeem
Follow us
| Updated By: ಪೃಥ್ವಿಶಂಕರ

Updated on: Jul 26, 2022 | 2:13 PM

ಕಾಮನ್‌ವೆಲ್ತ್‌ ಗೇಮ್ಸ್‌ (Commonwealth Games) ಇನ್ನೂ ಆರಂಭವಾಗಲೇ ಇಲ್ಲ, ಆದರೆ ಅಷ್ಟರಲ್ಲೇ ಭಾರತಕ್ಕೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ. ಜಾವೆಲಿನ್ ಸ್ಟಾರ್ ಹಾಗೂ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಬರ್ಮಿಂಗ್ ಹ್ಯಾಮ್​ನಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಗೇಮ್ಸ್​ನಲ್ಲಿ ಆಡುತ್ತಿಲ್ಲ. ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಅವರು ತೊಡೆಸಂದು ಗಾಯದಿಂದಾಗಿ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ. ಅವರ ನಿರ್ಗಮನದಿಂದಾಗಿ ಭಾರತಕ್ಕೆ ಹಿನ್ನಡೆಯುಂಟಾಗಿದ್ದರೆ, ಪಾಕಿಸ್ತಾನಕ್ಕೆ ಭಾಗ್ಯದ ಬಾಗಿಲು ತೆರೆದಿದೆ. ಏಕೆಂದರೆ, ಈಗ ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ (Arshad Nadeem) ಬರ್ಮಿಂಗ್ ಹ್ಯಾಮ್​ನಲ್ಲಿ ಪದಕ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಪಾಕಿಸ್ತಾನದ ಅರ್ಷದ್ ನದೀಮ್ ನೀರಜ್ ಚೋಪ್ರಾ ಅವರನ್ನು ಎದುರಿಸಿದ್ದರು. ಅಲ್ಲಿ ಭಾರತದ ನೀರಜ್ ಬೆಳ್ಳಿ ಪದಕ ಗೆದ್ದರೆ, ಪಾಕಿಸ್ತಾನದ ಅರ್ಷದ್ ನದೀಮ್ 5 ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇದಕ್ಕೂ ಮೊದಲು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇಬ್ಬರೂ ಮುಖಾಮುಖಿಯಾದಾಗ, ಪಾಕಿಸ್ತಾನದ ಅರ್ಷದ್ ಅಲ್ಲಿಯೂ 5 ನೇ ಸ್ಥಾನ ಗಳಿಸಿದ್ದರು. ಆದರೆ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು.

ಅರ್ಷದ್ ನದೀಮ್​ಗೆ ಸುವರ್ಣವಕಾಶ

ಇದನ್ನೂ ಓದಿ
Image
CWG 2022: ನೀರಜ್ ಅಥವಾ ಸಿಂಧು; ಕಾಮನ್‌ವೆಲ್ತ್‌ ಉದ್ಘಾಟನೆಯಲ್ಲಿ ಭಾರತದ ಧ್ವಜಧಾರಿ ಯಾರು?
Image
CWG 2022: ನೀರಜ್, ಸಿಂಧು ಸೇರಿದಂತೆ ಭಾರತದ ಆಟಗಾರರು ಯಾವಾಗ ಮೈದಾನಕ್ಕಿಳಿಯುತ್ತಾರೆ? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
Image
CWG 2022: ಸ್ಕ್ವಾಷ್‌ ಸ್ಪರ್ಧೆಯಲ್ಲಿ ಭಾರತದ ಪರ ಪದಕ್ಕಾಗಿ ಸೆಣಸಲಿರುವ 9 ಆಟಗಾರರಿವರು!

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಪಾಕಿಸ್ತಾನದ ಅರ್ಷದ್ ನದೀಮ್ ಮುಖಾಮುಖಿಯಾದಾಗಲೆಲ್ಲ ಅವರು, ನೀರಜ್ ಎದುರು ಸೋಲುಂಡು, ನಿರಾಸೆಯಿಂದ ಹೊರಬರಬೇಕಾಗಿತ್ತು. ಆದರೆ ಈ ಬಾರಿ ಪಾಕಿಸ್ತಾನದ ಜಾವೆಲಿನ್ ಎಸೆತಗಾರನಿಗೆ ಉತ್ತಮ ಅವಕಾಶ ಸಿಕ್ಕಿದೆ. ಅದೆನೆಂದರೆ, ನೀರಜ್ ಚೋಪ್ರಾ ಕಾಮನ್‌ವೆಲ್ತ್ ಗೇಮ್ಸ್‌ನಿಂದ ನಿರ್ಗಮಿಸಿದ ಕಾರಣ ಈ ಅವಕಾಶ ಸೃಷ್ಟಿಯಾಗಿದೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಅವರಿಗೆ ತೊಡೆಸಂದು ಗಾಯವಾಗಿತ್ತು, ಈ ಕಾರಣದಿಂದಾಗಿ ಅವರು ಬರ್ಮಿಂಗ್‌ಹ್ಯಾಮ್‌ಗೆ ಹೋಗದಿರಲು ನಿರ್ಧರಿಸಿದ್ದಾರೆ.

ಅರ್ಷದ್​ಗೂ ಇಂಜುರಿ

ನೀರಜ್ ಅವರಂತೆ ಪಾಕಿಸ್ತಾನದ ಅರ್ಷದ್ ನದೀಮ್ ಕೂಡ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಬಹುಶಃ ಅವರು ಕಾಮನ್‌ವೆಲ್ತ್ ಗೇಮ್ಸ್ ನಂತರ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ಏಕೆಂದರೆ ಇದರಲ್ಲಿ ಪದಕ ಗೆಲ್ಲಲು ದಕ್ಷಿಣ ಆಫ್ರಿಕಾಕ್ಕೆ ತೆರಳುವ ಮೂಲಕ ಸಾಟಿಯಿಲ್ಲದ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ತನ್ನ ಸಿದ್ಧತೆಗಳನ್ನು ಕಾರ್ಯಗತಗೊಳಿಸಿ ಪದಕ ಗೆಲ್ಲುವ ಅರ್ಷದ್ ನದೀಮ್ ಆಸೆಗೆ ಈಗ ನೀರಜ್ ಚೋಪ್ರಾ ನಿರ್ಗಮನದ ಮೂಲಕ ರೆಕ್ಕೆ ಬಂದಿದೆ. ಈಗ ಈ ಅದೃಷ್ಟದ ಅವಕಾಶವನ್ನು ಅರ್ಷದ್ ನದೀಮ್ ತನ್ನ ದೇಶಕ್ಕಾಗಿ ಪದಕ ಗೆಲ್ಲಲ್ಲು ಬಳಸಿಕೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ