AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022 Squash: ಸ್ಕ್ವಾಷ್​ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್ ಘೋಷಾಲ್..!

CWG 2022 Squash: ಘೋಷಾಲ್ ಅವರು ಬರ್ಮಿಂಗ್ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ 2022 ರ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಅವರು CWG ಇತಿಹಾಸದಲ್ಲಿ ಸಿಂಗಲ್ಸ್ ಪದಕವನ್ನು ಗೆದ್ದ ಭಾರತದ ಮೊದಲ ಸ್ಕ್ವಾಷ್ ಆಟಗಾರರಾಗಿದ್ದಾರೆ.

CWG 2022 Squash: ಸ್ಕ್ವಾಷ್​ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್ ಘೋಷಾಲ್..!
TV9 Web
| Edited By: |

Updated on:Aug 03, 2022 | 11:28 PM

Share

ಭಾರತದ ಸ್ಟಾರ್ ಸ್ಕ್ವಾಷ್ ಆಟಗಾರ ಸೌರವ್ ಘೋಷಾಲ್ ( squash player Saurav Ghoshal) ಇತಿಹಾಸ ನಿರ್ಮಿಸಿದ್ದಾರೆ. ಭಾರತದ ಅತ್ಯಂತ ಅನುಭವಿ ಆಟಗಾರರಲ್ಲಿ ಒಬ್ಬರಾದ ಘೋಷಾಲ್ ಅವರು ಬರ್ಮಿಂಗ್ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ 2022 (Birmingham Commonwealth Games 2022)ರ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಅವರು CWG ಇತಿಹಾಸದಲ್ಲಿ ಸಿಂಗಲ್ಸ್ ಪದಕವನ್ನು ಗೆದ್ದ ಭಾರತದ ಮೊದಲ ಸ್ಕ್ವಾಷ್ ಆಟಗಾರರಾಗಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸೌರವ್ ಆತಿಥೇಯ ಇಂಗ್ಲೆಂಡ್ ಆಟಗಾರನನ್ನು 3-0 ಅಂತರದಿಂದ ಸೋಲಿಸಿದರು. ಇದರೊಂದಿಗೆ ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

1998 ರಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಬಾರಿಗೆ ಸ್ಕ್ವಾಷ್ ಅನ್ನು ಸೇರಿಸಲಾಯಿತು, ಆದರೆ ಭಾರತ ಅದರಲ್ಲಿ ಕೇವಲ 4 ಪದಕಗಳನ್ನು ಮಾತ್ರ ಪಡೆದುಕೊಂಡಿದೆ. ಇದರಲ್ಲಿ ಕೊನೆಯ ಮೂರು ಪದಕಗಳು ಬಂದಿದ್ದು ಡಬಲ್ಸ್‌ನಲ್ಲಿ ಮಾತ್ರ. ಈ ಮೂಲಕ ಮೊದಲ ಬಾರಿಗೆ ಸಿಂಗಲ್ಸ್‌ನಲ್ಲಿ ಭಾರತದ ಬ್ಯಾಗ್‌ನಲ್ಲಿ ಈ ಪದಕ ಬಂದಿದ್ದು, 35 ವರ್ಷದ ಸೌರವ್ ಘೋಷಾಲ್ ಅವರ ಈ ಗೆಲುವು ವಿಶೇಷವಾಗಿದೆ. ಭಾರತದ ನಂಬರ್ ಒನ್ ಸ್ಕ್ವಾಷ್ ಆಟಗಾರ ಘೋಷಾಲ್ ಈ ಹಿಂದೆಯೂ ಹಲವು ಬಾರಿ ಪದಕದಿಂದ ವಂಚಿತರಾಗಿದ್ದರು.

ಮಂಗಳವಾರದ ಸೆಮಿಫೈನಲ್‌ನಲ್ಲಿ ಘೋಸಲ್ ನ್ಯೂಜಿಲೆಂಡ್ ಆಟಗಾರನ ವಿರುದ್ಧ ಸೋತಿದ್ದರು, ಆ ಮೂಲಕ ಚಿನ್ನದ ಪದಕವನ್ನು ಪಡೆಯುವ ಅವಕಾಶವನ್ನು ಕಳೆದುಕೊಂಡರು. ಆದರೆ ಅನುಭವಿ ಭಾರತೀಯ ಆಟಗಾರ ನಿರಾಸೆಯನ್ನು ತನ್ನಲ್ಲಿ ಮುಳುಗಿಸಲು ಬಿಡಲಿಲ್ಲ. ಆಗಸ್ಟ್ 3 ಬುಧವಾರ, ಅವರು ಇತಿಹಾಸವನ್ನು ರಚಿಸಲು ಮತ್ತೊಂದು ಅವಕಾಶವನ್ನು ಹೊಂದಿದ್ದರು ಮತ್ತು ಈ ಬಾರಿ ಅವರು ಯಾವುದೇ ತಪ್ಪು ಮಾಡಲಿಲ್ಲ. ಇಂಗ್ಲೆಂಡಿನ ಸ್ಟಾರ್ ಆಟಗಾರ ಮತ್ತು 2018ರ ಗೋಲ್ಡ್ ಕೋಸ್ಟ್ ಗೇಮ್ಸ್ ಸಿಂಗಲ್ಸ್ ಚಾಂಪಿಯನ್ ವಿಲ್‌ಸ್ಟ್ರೋಪ್ ಅವರನ್ನು ಘೋಷಾಲ್ 11-6, 11-1, 11-4 ಅಂಕಗಳೊಂದಿಗೆ ಸುಲಭವಾಗಿ ಗೆದ್ದು ಐತಿಹಾಸಿಕ ಕಂಚಿನ ಪದಕವನ್ನು ಪಡೆದರು.

Published On - 10:56 pm, Wed, 3 August 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್