AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ತೆರಳಿದ್ದ ಪಾಕಿಸ್ತಾನದ ಇಬ್ಬರು ಬಾಕ್ಸರ್​ಗಳು ಬರ್ಮಿಂಗ್‌ಹ್ಯಾಮ್‌ನಿಂದ ನಾಪತ್ತೆ..!

CWG 2022: ಈ ಹಿಂದೆ, ದೇಶ್ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಆಟಗಾರರು ಕೂಡ ಬರ್ಮಿಂಗ್ಹ್ಯಾಮ್‌ನಲ್ಲಿ ನಾಪತ್ತೆಯಾಗಿದ್ದರು. ಇದಾದ ಬಳಿಕ ಏಳು ಆಟಗಾರರು ಒಬ್ಬೊಬ್ಬರಾಗಿ ನಾಪತ್ತೆಯಾಗಿದ್ದು ಶ್ರೀಲಂಕಾ ತಂಡದ ಸಂಕಷ್ಟವನ್ನು ಹೆಚ್ಚಿಸಿದೆ.

CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ತೆರಳಿದ್ದ ಪಾಕಿಸ್ತಾನದ ಇಬ್ಬರು ಬಾಕ್ಸರ್​ಗಳು ಬರ್ಮಿಂಗ್‌ಹ್ಯಾಮ್‌ನಿಂದ ನಾಪತ್ತೆ..!
TV9 Web
| Edited By: |

Updated on:Aug 11, 2022 | 4:30 PM

Share

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ (Commonwealth Games) ಅದ್ಧೂರಿ ತೆರೆಬಿದ್ದಿದೆ. ಕ್ರೀಡೆಯಲ್ಲಿ ಭಾಗವಹಿಸಿದ ಸ್ಪರ್ಧಿಗಳು ತಾವು ಗೆದ್ದ ಪದಕಗಳನ್ನು ಹಿಡಿದು ತಮ್ಮ ತಮ್ಮ ದೇಶಗಳತ್ತ ತೆರೆಳುತ್ತಿದ್ದಾರೆ. ಆದರೆ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ಮಾತ್ರ ಕಾಮನ್​ವೆಲ್ತ್​ ಕ್ರೀಡಾ ಗ್ರಾಮದಿಂದ ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಒಕ್ಕೂಟ ಬುಧವಾರ ಈ ಮಾಹಿತಿ ನೀಡಿದೆ. ಪಾಕಿಸ್ತಾನ ಬಾಕ್ಸಿಂಗ್ ಫೆಡರೇಶನ್ (PBF) ಕಾರ್ಯದರ್ಶಿ ನಾಸರ್ ಟಾಂಗ್ ಮಾತನಾಡಿ, ಬಾಕ್ಸರ್​ಗಳಾದ ಸುಲೇಮಾನ್ ಬಲೋಚ್ ಮತ್ತು ನಜೀರುಲ್ಲಾ ಅವರು ಇಸ್ಲಾಮಾಬಾದ್‌ಗೆ ತೆರಳುವ ಗಂಟೆಗಳ ಮೊದಲು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಆಟಗಾರರ ಪಾಸ್‌ಪೋರ್ಟ್‌ಗಳು ಫೆಡರೇಶನ್ ಬಳಿ ಇವೆ

ಬಾಕ್ಸಿಂಗ್ ತಂಡದೊಂದಿಗೆ ಕ್ರೀಡಾಕೂಟಕ್ಕೆ ತೆರಳಿದ್ದ ಫೆಡರೇಶನ್ ಅಧಿಕಾರಿಗಳ ಬಳಿ ಅವರ ಪಾಸ್‌ಪೋರ್ಟ್ ಸೇರಿದಂತೆ ಅವರ ಪ್ರಯಾಣದ ದಾಖಲೆಗಳು ಇನ್ನೂ ಇವೆ ಎಂದು ಫೆಡರೇಶನ್ ಅಧಿಕಾರಿ ಟಾಂಗ್ ಹೇಳಿದರು. ಸುಲೇಮಾನ್ ಮತ್ತು ನಜೀರುಲ್ಲಾ ನಾಪತ್ತೆಯಾಗಿರುವ ಬಗ್ಗೆ ತಂಡದ ಆಡಳಿತ ಮಂಡಳಿ ಯುಕೆಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಮತ್ತು ಲಂಡನ್‌ನಲ್ಲಿರುವ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದೆ ಎಂದು ಅವರು ಹೇಳಿದರು. ಕಾಮನ್‌ವೆಲ್ತ್‌ನ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪಾಕಿಸ್ತಾನಕ್ಕೆ ಯಾವುದೇ ಪದಕ ಗೆಲ್ಲಲಾಗಲಿಲ್ಲ. ವೇಟ್ ಲಿಫ್ಟಿಂಗ್ ಮತ್ತು ಜಾವೆಲಿನ್ ಎಸೆತದಲ್ಲಿ ಎರಡು ಚಿನ್ನ ಸೇರಿದಂತೆ ಈ ಕ್ರೀಡೆಗಳಲ್ಲಿ ದೇಶ ಎಂಟು ಪದಕಗಳನ್ನು ಗೆದ್ದಿದೆ.

ಇದನ್ನೂ ಓದಿ
Image
CWG 2022: ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಮೊದಲ ಬಾರಿಗೆ ಪದಕ ಗೆದ್ದ ಭಾರತದ ಸ್ಪರ್ಧಿಗಳಿವರು
Image
CWG 2022: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್​​ನಲ್ಲಿ ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ ನಗದು ಬಹುಮಾನ ಘೋಷಣೆ
Image
IND vs AUS: ಭಾರತಕ್ಕೆ ವೀರಾವೇಷದ ಸೋಲು; ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟ ಹರ್ಮನ್​ಪ್ರೀತ್ ಪಡೆ

ಬಾಕ್ಸರ್‌ಗಳಿಗಾಗಿ ಹುಡುಕಾಟ ಶುರು

ಕಾಣೆಯಾದ ಬಾಕ್ಸರ್ ದಾಖಲೆಗಳನ್ನು ಪಾಕಿಸ್ತಾನದಿಂದ ಬರುವ ಎಲ್ಲಾ ಆಟಗಾರರಿಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಪ್ರಕಾರ ಇರಿಸಲಾಗಿದೆ ಎಂದು ಟಾಂಗ್ ಹೇಳಿದ್ದಾರೆ. ಕಾಣೆಯಾದ ಬಾಕ್ಸರ್‌ಗಳ ಪ್ರಕರಣದ ತನಿಖೆಗಾಗಿ ಪಾಕಿಸ್ತಾನ ಒಲಿಂಪಿಕ್ ಅಸೋಸಿಯೇಷನ್ ​​(POA) ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ಹಂಗೇರಿಯಲ್ಲಿ ನಡೆದ FINA ವಿಶ್ವ ಚಾಂಪಿಯನ್‌ಶಿಪ್‌ನಿಂದ ರಾಷ್ಟ್ರೀಯ ಈಜುಗಾರ ಫೈಜಾನ್ ಅಕ್ಬರ್ ನಾಪತ್ತೆಯಾದ ಎರಡು ತಿಂಗಳ ನಂತರ ಈ ಘಟನೆ ಮತ್ತೆ ಮರುಕಳಿಸಿದೆ. ಆದರೆ ಈ ಹಿಂದೆ ಕಾಣೆಯಾಗಿದ್ದ ಅಕ್ಬರ್, ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧೆ ಕೂಡ ಮಾಡಲಿಲ್ಲ. ಅಕ್ಬರ್ ಬುಡಾಪೆಸ್ಟ್‌ಗೆ ಬಂದ ಕೆಲವು ಗಂಟೆಗಳ ನಂತರ ತನ್ನ ಪಾಸ್‌ಪೋರ್ಟ್ ಮತ್ತು ಇತರ ದಾಖಲೆಗಳೊಂದಿಗೆ ಕಣ್ಮರೆಯಾಗಿದ್ದರು. ಜೂನ್‌ ತಿಂಗಳಲ್ಲಿ ನಾಪತ್ತೆಯಾಗಿದ್ದ ಅಕ್ಬರ್ ಸುಳಿವು ಇಲ್ಲಿವರೆಗೂ ಪತ್ತೆಯಾಗಿಲ್ಲ.

ಶ್ರೀಲಂಕಾ ಆಟಗಾರರೂ ನಾಪತ್ತೆ

ಈ ಹಿಂದೆ, ದೇಶ್ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಆಟಗಾರರು ಕೂಡ ಬರ್ಮಿಂಗ್ಹ್ಯಾಮ್‌ನಲ್ಲಿ ನಾಪತ್ತೆಯಾಗಿದ್ದರು. ಶ್ರೀಲಂಕಾದ ಮೊದಲ ಜೂಡೋ ಆಟಗಾರ್ತಿ ಚಮಿಲಾ ದಿಲಾನಿ, ಆಕೆಯ ಮ್ಯಾನೇಜರ್ ಅಸೆಲಾ ಡಿ ಸಿಲ್ವಾ ಮತ್ತು ಕುಸ್ತಿಪಟು ಶಾನಿತ್ ಬರ್ಮಿಂಗ್ಹ್ಯಾಮ್‌ನಲ್ಲಿ ನಾಪತ್ತೆಯಾಗಿದ್ದಾರೆ. ಇದಾದ ಬಳಿಕ ಏಳು ಆಟಗಾರರು ಒಬ್ಬೊಬ್ಬರಾಗಿ ನಾಪತ್ತೆಯಾಗಿದ್ದು ಶ್ರೀಲಂಕಾ ತಂಡದ ಸಂಕಷ್ಟವನ್ನು ಹೆಚ್ಚಿಸಿದೆ. ಈ ಎಲ್ಲಾ ಆಟಗಾರರ ಪಾಸ್‌ಪೋರ್ಟ್‌ಗಳು ಅಧಿಕೃತ ತಂಡದ ಬಳಿ ಮಾತ್ರ ಇವೆ. ನಾಪತ್ತೆಯಾದ ಅಷ್ಟೂ ಸ್ಪರ್ಧಿಗಳು ಪ್ರಸ್ತುತ ಆರು ತಿಂಗಳ ವೀಸಾ ಅವಧಿಯನ್ನು ಹೊಂದಿದ್ದಾರೆ. ಹೀಗಾಗಿ ಈ ಆಟಗಾರರು ಕೆಲಸ ಮಾಡುವ ಉದ್ದೇಶದಿಂದ ಬರ್ಮಿಂಗ್‌ಹ್ಯಾಮ್‌ನಲ್ಲಿ ತಂಗಿದ್ದಾರೆ ಎಂದು ಫೆಡರೇಶನ್ ಅಧಿಕಾರಿಗಳು ತಿಳಿಸಿದ್ದಾರೆ.

Published On - 4:00 pm, Thu, 11 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?