AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ.. ಅನುಷ್ಕಾಳ ‘ನಾಯಿ’ ಎಂದ ಕಾಂಗ್ರೆಸ್ ಮುಖಂಡ

ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಪರಿಸರ ಸಂರಕ್ಷಿಸಿ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಕಿಂಗ್ ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಕೊಹ್ಲಿ ಅನುಷ್ಕಾಳ ನಾಯಿ ಎಂದು ಕರೆದು ಪೇಚಿಗೆ ಸಿಲುಕಿದ್ದಾರೆ. ಸಾಲುಮರದ ತಿಮ್ಮಕ್ಕರನ್ನು ನೋಡಿ ಕಲೀರಿ -ಪಟಾಕಿ ಹೊಡಿಬೇಡಿ ಅಂದಿದ್ದಕ್ಕೆ ಕೊಹ್ಲಿ​ಗೆ ಫುಲ್​​ ಟ್ರೋಲ್! ಹಿಂದಿಯಲ್ಲಿ ಟ್ವೀಟ್ ಮಾಡಿರುವ ಉದಿತ್ ರಾಜ್, ‘‘ಅನುಷ್ಕಾ ತಮ್ಮ ನಾಯಿ ವಿರಾಟ್ ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆಯಿಲ್ಲ. ನಾಯಿಗಿಂತಲೂ ನಿಯತ್ತಾದ ಪ್ರಾಣಿ ಇನ್ನೊಂದಿಲ್ಲ. ಪಟಾಕಿಯನ್ನು ಹೊಡೆಯಬೇಡಿ ಎಂದಿದ್ದಕ್ಕೆ ಕೊಹ್ಲಿಯನ್ನು ನಿಂದಿಸುತ್ತಿರುವ ಮೂರ್ಖರು ತಮ್ಮ […]

ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ.. ಅನುಷ್ಕಾಳ 'ನಾಯಿ' ಎಂದ ಕಾಂಗ್ರೆಸ್ ಮುಖಂಡ
ಆಯೇಷಾ ಬಾನು
|

Updated on:Nov 16, 2020 | 1:17 PM

Share

ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಪರಿಸರ ಸಂರಕ್ಷಿಸಿ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಕಿಂಗ್ ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಕೊಹ್ಲಿ ಅನುಷ್ಕಾಳ ನಾಯಿ ಎಂದು ಕರೆದು ಪೇಚಿಗೆ ಸಿಲುಕಿದ್ದಾರೆ.

ಸಾಲುಮರದ ತಿಮ್ಮಕ್ಕರನ್ನು ನೋಡಿ ಕಲೀರಿ -ಪಟಾಕಿ ಹೊಡಿಬೇಡಿ ಅಂದಿದ್ದಕ್ಕೆ ಕೊಹ್ಲಿ​ಗೆ ಫುಲ್​​ ಟ್ರೋಲ್!

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಉದಿತ್ ರಾಜ್, ‘‘ಅನುಷ್ಕಾ ತಮ್ಮ ನಾಯಿ ವಿರಾಟ್ ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆಯಿಲ್ಲ. ನಾಯಿಗಿಂತಲೂ ನಿಯತ್ತಾದ ಪ್ರಾಣಿ ಇನ್ನೊಂದಿಲ್ಲ. ಪಟಾಕಿಯನ್ನು ಹೊಡೆಯಬೇಡಿ ಎಂದಿದ್ದಕ್ಕೆ ಕೊಹ್ಲಿಯನ್ನು ನಿಂದಿಸುತ್ತಿರುವ ಮೂರ್ಖರು ತಮ್ಮ ಡಿ.ಎನ್.ಎ ಪರೀಕ್ಷೆ ಮಾಡಿಸಿಕೊಂಡು ತಾವು ಭಾರತದವರು ಹೌದೋ, ಅಲ್ಲವೋ ಎಂದು ತಿಳಿದುಕೊಳ್ಳಲಿ’’ ಎಂದಿದ್ದಾರೆ.

ಈ ಹಿಂದೆ ಬಿಜೆಪಿಯಿಂದ ಸಂಸದರಾಗಿದ್ದ ಉದಿತ್ ರಾಜ್ ನಂತರ ಕಮಲ ಪಾಳಯ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಕೊಹ್ಲಿಯ ಕಾಲೆಳೆದ ಬಿಜೆಪಿ ಬೆಂಬಲಿಗರನ್ನು ವಿರೋಧಿಸಲು ಹೋಗಿ ತಾವೇ ಹಳ್ಳಕ್ಕೆ ಬಿದ್ದಿದ್ದಾರೆ. ಇಷ್ಟಕ್ಕೂ ಕೊಹ್ಲಿಯನ್ನು ಸಮರ್ಥಿಸಿಕೊಳ್ಳುವಾಗ ನಾಯಿಯ ವಿಚಾರ ಏಕೆ ಬಂತು ಎಂಬುದೇ ಅರ್ಥವಾಗಿಲ್ಲ. ಈ ಟ್ವೀಟ್ ನಂತರ ಸಿಟ್ಟಾಗಿರುವ ಕೊಹ್ಲಿ ಅಭಿಮಾನಿಗಳು ಉದಿತ್ ರಾಜ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದೇನೇ ಆದರೂ ನಾಯಿ ಎಂಬ ಪದ ಬಳಸಿದ್ದರಿಂದಲೇ ಉದಿತ್ ರಾಜ್ ಟ್ವೀಟ್ ಎಲ್ಲೆಡೆ ವೈರಲ್ ಆಗಿದೆಯೆಂಬುದಂತೂ ಸುಳ್ಳಲ್ಲ.

Published On - 1:16 pm, Mon, 16 November 20

Follow Us
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ