AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿವಾದಾತ್ಮಕ ಬೌಲರ್ ಮೊಹಮ್ಮದ್ ಆಮಿರ್

ಪಾಕಿಸ್ತಾನದ ವಿವಾದಾತ್ಮಕ ವೇಗದ ಬೌಲರ್ ಮೊಹಮ್ಮದ್ ಆಮಿರ್ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಧೋರಣೆಗಳಿಂದ ಬೇಸತ್ತು ಅವರು ಕ್ರೀಡೆಗೆ ಗುಡ್​ಬೈ ಹೇಳುವ ನಿರ್ಧಾರ ತೆಗೆದುಕೊಂಡರೆಂದು ಹೇಳಲಾಗುತ್ತಿದೆ.

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿವಾದಾತ್ಮಕ ಬೌಲರ್ ಮೊಹಮ್ಮದ್ ಆಮಿರ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Dec 17, 2020 | 8:21 PM

Share

ಕ್ರೀಡೆ ಯಾವುದೇ ಆಗಿರಲಿ, 28ರ ವಯಸ್ಸು ಒಬ್ಬ ಕ್ರೀಡಾಪಟುಗೆ ಅವನು ಪ್ರತಿನಿಧಿಸುವ ಆಟದಲ್ಲಿ ಉತ್ತುಂಗವನ್ನು ತಲುಪಿರುವ ಇಲ್ಲವೇ ತಲುಪಬಹುದಾದ ಸಮಯ. ಆದರೆ ಪಾಕಿಸ್ತಾನದ ವಿವಾದಾತ್ಮಕ ವೇಗದ ಬೌಲರ್ ಮೊಹಮ್ಮದ್ ಆಮಿರ್ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಆ ಚಿಕ್ಕ ವಯಸ್ಸಿನಲ್ಲೇ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸಿಮ್ ಖಾನ್ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿ ಆಮಿರ್ ರಿಟೈರ್​ಮೆಂಟ್ ಘೋಷಿಸಿರುವುದನ್ನು ಖಚಿತಪಡಿಸಿದ್ದಾರೆ.

30 ಟೆಸ್ಟ್, 61 ಒಂದು ದಿನದ ಅಂತರರಾಷ್ಟ್ರೀಯ ಮತ್ತು 50ಟಿ20ಐ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಆಮಿರ್ ಒಟ್ಟು 259 ವಿಕೆಟ್​ಗಳನ್ನು ಪಡೆದಿದ್ದಾರೆ. ತನ್ನ 17ನೇ ವಯಸ್ಸಿನಲ್ಲೇ ರಾಷ್ಟ್ರೀಯ ತಂಡಕ್ಕೆ ಕಾಲಿಟ್ಟ ಆಮಿರ್​ರನ್ನು ಆ ದೇಶದ ಸರ್ವಶ್ರೇಷ್ಠ ವೇಗದ ಬೌಲರ್ ಎಂದು ಗುರುತಿಸಿಕೊಂಡಿರುವ ವಾಸಿಮ್ ಅಕ್ರಮ್ ಅವರ ಉತ್ತರಾಧಿಕಾರಿಯೆಂದು ಪರಿಗಣಿಸಿಲಾಗಿತ್ತು.

ಅಕ್ರಮ್​ರಂಥ ವ್ಯಕ್ತಿತ್ವವನ್ನು ಆಮಿರ್ ಮೈಗೂಡಿಸಿಕೊಂಡಿದ್ದರೆ ಅವರಿಗೂ ಆ ಲೆಜೆಂಡ್​ಗೆ ಸಿಗುವಷ್ಟೇ ಗೌರವ ದಕ್ಕುತ್ತಿತ್ತು. ಆದರೆ, ಹುಡುಗು ಬುದ್ಧಿ ಅವರನ್ನು ಯಾಮಾರಿಸಿತು. ಪಾಕಿಸ್ತಾನದ 2010ರ ಇಂಗ್ಲೆಂಡ್ ಪ್ರವಾಸದಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದ ಆಮಿರ್ 5ವರ್ಷಗಳ ಅವಧಿಗೆ ನಿಷೇಧಕ್ಕೊಳಗಾದರು. ಅವರೊಂದಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಆರಂಭ ಆಟಗಾರ ಸಲ್ಮಾನ್ ಬಟ್ ಮತ್ತು ಇನ್ನೊಬ್ಬ ವೇಗದ ಬೌಲರ್ ಮೊಹಮ್ಮದ್ ಆಸಿಫ್​ರನ್ನು ಸಹ 5 ವರ್ಷಗಳ ಕಾಲ ಕ್ರಿಕೆಟ್ ಆಡದಂತೆ ನಿಷೇಧಿಸಲಾಗಿತ್ತು.

ಪಿಸಿಬಿಯ ಸಿಇಒ ವಾಸಿಮ್ ಖಾನ್

ದೇಶೀಯ ಕ್ರಿಕೆಟ್​ನಲ್ಲಿ ಪಾಕಿಸ್ತಾನ ನ್ಯಾಶನಲ್ ಬ್ಯಾಂಕ್ ಪರ 2009 ರಲ್ಲಿ ಆಡಲಾರಂಭಿಸಿದ ಆಮಿರ್ ತಮ್ಮ ವೇಗ, ನಿಖರತೆ ಮತ್ತು ವಿಕೆಟ್ ಪಡೆಯುವ ಸಾಮರ್ಥ್ಯದಿಂದ ಕೂಡಲೇ ರಾಷ್ಟ್ರೀಯ ಆಯ್ಕೆ ಸಮಿತಿಯ ಗಮನ ಸೆಳೆದರು. ಅವರನ್ನು 2009ರ ಟಿ20ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡದಲ್ಲಿ ಅವಕಾಶ ಕಲ್ಪಿಸಲಾಯಿತು. ಆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಉತ್ಕೃಷ್ಟ ಬೌಲಿಂಗ್ ಪ್ರದರ್ಶನ ನೀಡಿದ ಆಮಿರ್ ಪಾಕಿಸ್ತಾನ ಪ್ರಶಸ್ತಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದರು.

ಹುಡುಗು ಬುದ್ಧಿ ಅವರ ಉಜ್ವಲ ಭವಿಷ್ಯವನ್ನು 2010ರಲ್ಲಿ ಮೊಟಕುಗೊಳಿಸಿತು. ನಿಷೇದಕ್ಕೊಳಗಾದರೂ ಟೀಮಿಗೆ ವಾಪಸ್ಸಾಗುವ ಛಲತೊಟ್ಟಿದ್ದ ಆಮಿರ್, 2015ರಲ್ಲಿ ತಮ್ಮಾಸೆಯನ್ನು ಈಡೇರಿಸಿಕೊಂಡರು. 2017 ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಆಸಾಧಾರಣ ಬೌಲಿಂಗ್ ಪ್ರದರ್ಶನದಿಂದ ಪಾಕಿಸ್ತಾನ ಚಾಂಪಿಯನ್ ಪಟ್ಟ ಧರಿಸಿತು. 2019 ರ ಐಸಿಸಿ ವಿಶ್ವಕಪ್​ನಲ್ಲಿ ಆಮಿರ್ ಪಾಕಿಸ್ತಾನದ ಪರ ಅತಿಹೆಚ್ಚು ವಿಕೆಟ್ ಪಡೆದರು.

ಮೊಹಮ್ಮದ್ ಆಸಿಫ್

ಬಿಳಿಚೆಂಡಿನ ಕ್ರಿಕೆಟ್ ಮೇಲೆ ಹೆಚ್ಚು ಗಮನ ಹರಿಸುವುದಕ್ಕೋಸ್ಕರ ಆಮಿರ್ 2017ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದರು. ಅವರ ಈ ನಿರ್ಧಾರ ಆಗ ಪಾಕ್ ಟೀಮಿನ ಕೋಚ್ ಅಗಿದ್ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ಅವರನ್ನು ಕೆರಳಿಸಿತ್ತು.

ಪಾಕಿಸ್ತಾನದ ಕ್ರಿಕೆಟ್ ವಲಯಗಳಲ್ಲಿ ಆಮಿರ್ ರೆಟೈರ್​ಮೆಂಟ್ ನಿರ್ಧಾರ ತಾತ್ಕಾಲಿಕ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಅವರ ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ.

Published On - 7:27 pm, Thu, 17 December 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ