AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Copa America Final: ಬ್ರೆಜಿಲ್ ಮಣಿಸಿ 28 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಅರ್ಜೆಂಟಿನಾ

ಅರ್ಜೆಂಟಿನಾ ತಂಡದ ಗೆಲುವಿನ ಗೋಲು 22ನೇ ನಿಮಿಷದಲ್ಲಿ ರೊಡ್ರಿಗೋ ಡಿ ಪಾಲ್, ಏಂಜೆಲ್ ಡಿ ಮಾರಿಯಾ ಅವರಿಗೆ ಲಾಂಗ್ ಪಾಸ್ ನೀಡಿದ ನಂತರ ಬಂತು.

Copa America Final: ಬ್ರೆಜಿಲ್ ಮಣಿಸಿ 28 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಅರ್ಜೆಂಟಿನಾ
Copa America
TV9 Web
| Edited By: |

Updated on: Jul 11, 2021 | 10:02 AM

Share

ಕೋಪಾ ಅಮೆರಿಕಾ ಫುಟ್​ಬಾಲ್ ಟೂರ್ನಿಯ ರೋಚಕ ಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟಿನಾ ತಂಡ ಬ್ರೆಜಿಲ್ ತಂಡದ ವಿರುದ್ಧ ಗೆಲುವು ಸಾಧಿಸಿದೆ. ಈ ಮೂಲಕ ಅರ್ಜೆಂಟಿನಾ ಬರೋಬ್ಬರಿ 28 ವರ್ಷಗಳ ನಂತರ ಮಹತ್ವದ ಅಂತರರಾಷ್ಟ್ರೀಯ ಕ್ರೀಡಾಕೂಟದ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಅಂತರರಾಷ್ಟ್ರೀಯ ಕ್ರೀಡಾಕೂಟದ ಚಾಂಪಿಯನ್ ಆಗಿ ಬ್ರೆಜಿಲ್ 1993 ರಲ್ಲಿ ಕೊನೆಯ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದಾದ ಬಳಿಕ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರಲಿಲ್ಲ. ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನೆಲ್ ಮೆಸ್ಸಿ ಅವರಿಗೂ ಇದು ಪ್ರಥಮ ಮಹತ್ವದ ಅಂತರರಾಷ್ಟ್ರೀಯ ಟ್ರೋಫಿಯಾಗಿದೆ.

ಭಾರೀ ಕುತೂಹಲ ಕೆರಳಿಸಿದ್ದ ಫೈನಲ್‌ ಪಂದ್ಯದಲ್ಲಿ ಮೆಸ್ಸಿಯ ಪ್ರದರ್ಶನವು ಹಿಂದಿನ ಪಂದ್ಯಗಳಂತೆ ಪ್ರಭಾವಶಾಲಿಯಾಗಿ ಮೂಡಿಬರಲಿಲ್ಲ. 88ನೇ ನಿಮಿಷದಲ್ಲಿ ಗೋಲ್ ದಾಖಲಿಸುವ ಅವಕಾಶ ಇತ್ತಾದರೂ ಬ್ರೆಜಿಲ್‌ನ ಗೋಲ್‌ಕೀಪರ್ ಅವರನ್ನು ತಡೆದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ಅರ್ಜೆಂಟಿನಾ ತಂಡದ ಗೆಲುವಿನ ಗೋಲು 22ನೇ ನಿಮಿಷದಲ್ಲಿ ರೊಡ್ರಿಗೋ ಡಿ ಪಾಲ್, ಏಂಜೆಲ್ ಡಿ ಮಾರಿಯಾ ಅವರಿಗೆ ಲಾಂಗ್ ಪಾಸ್ ನೀಡಿದ ನಂತರ ಬಂತು. ಪಂದ್ಯಾವಳಿಯಲ್ಲಿ ಬ್ರೆಜಿಲ್ ಬಿಟ್ಟುಕೊಟ್ಟ ಮೂರನೇ ಗೋಲು ಇದಾಗಿತ್ತು.

ಈ ರೋಚಕ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಸಂಭ್ರಮಾಚರಣೆಯಲ್ಲಿ ತೊಡಗಿದ ಅರ್ಜೆಂಟಿನಾ ತಂಡದ ಆಟಗಾರರು ಮೆಸ್ಸಿಯನ್ನು ಹಿಡಿದು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದರು. ಈ ಮೂಲಕ ಫುಟ್ಬಾಲ್ ಜಗತ್ತಿನಲ್ಲಿ ಅತ್ಯಂತ ಮಹತ್ವದ ಟ್ರೋಫಿಯನ್ನು ಲಿಯೋನೆಲ್ ಮೆಸ್ಸಿ ಹಾಗೂ ಅವರ ತಂಡ ಗೆದ್ದು ತಮ್ಮದಾಗಿಸಿತು.

ಕೊಲಂಬಿಯಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟಿನಾ ತಂಡ ಶೂಟೌಟ್​ನಲ್ಲಿ 3-2 ಅಂತರದಿಂದ ಜಯಭೇರಿ ಬಾರಿಸಿ ಫೈನಲ್ ಪ್ರವೇಶ ಪಡೆದಿಯತ್ತು.

Tokyo Olympics: ನಿಮ್ಮ ದೇಶಕ್ಕೆ ವಾಪಸ್ ಹೋಗಿ, ನಮಗೆ ಒಲಂಪಿಕ್ಸ್ ಬೇಡ; ಹೆಚ್ಚಾಯ್ತು ಜಪಾನಿಗರ ಪ್ರತಿಭಟನೆ

ಮಂಡಳಿ ವಿರುದ್ಧ ಆರೋಪ; ಪಾಕ್ ಮಾಜಿ ಕ್ರಿಕೆಟಿಗನ ಮಾಸಿಕ ಪಿಂಚಣಿ ರದ್ದು ಮಾಡಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ