AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಒಲಿಂಪಿಕ್ಸ್ ಆಯ್ತು.. ಈಗ ಪ್ಯಾರಾಲಿಂಪಿಕ್ಸ್​ ಮೇಲು ಕೊರೊನಾ ವಕ್ರದೃಷ್ಟಿ! ಇಬ್ಬರು ಸಿಬ್ಬಂದಿಗೆ ಕೊರೊನಾ

Tokyo Paralympics: ಪ್ಯಾರಾಲಿಂಪಿಕ್ ಸಂಘಟನಾ ಸಮಿತಿಯ ಪ್ರಕಾರ, ಇಲ್ಲಿಯವರೆಗೆ ಯಾವುದೇ ಆಟಗಾರರಲ್ಲಿ ಕೊರೊನಾ ಕಂಡುಬಂದಿಲ್ಲ. ಆದರೆ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಕಂಡುಬಂದಿದೆ.

Tokyo Paralympics: ಒಲಿಂಪಿಕ್ಸ್ ಆಯ್ತು.. ಈಗ ಪ್ಯಾರಾಲಿಂಪಿಕ್ಸ್​ ಮೇಲು ಕೊರೊನಾ ವಕ್ರದೃಷ್ಟಿ! ಇಬ್ಬರು ಸಿಬ್ಬಂದಿಗೆ ಕೊರೊನಾ
ಟೋಕಿಯೊ ಪ್ಯಾರಾಲಿಂಪಿಕ್ಸ್​
TV9 Web
| Edited By: |

Updated on: Aug 21, 2021 | 10:39 PM

Share

ಕೊರೊನಾ ಬಿಕ್ಕಟ್ಟಿನಿಂದಾಗಿ ಒಂದು ವರ್ಷ ಮುಂದೂಡಲ್ಪಟ್ಟ ಟೋಕಿಯೊ ಒಲಿಂಪಿಕ್ಸ್ ಅಂತಿಮವಾಗಿ ಈ ವರ್ಷ ಕೊನೆಗೊಂಡಿತು. ಅದರ ನಂತರ, ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ (ಟೋಕಿಯೊ ಪ್ಯಾರಾಲಿಂಪಿಕ್ಸ್ 2020). ಆದರೆ ಈ ಆಟಗಳ ಮೇಲೂ ಸಹ ಕೊರೊನಾ ತನ್ನ ದಾಳಿ ಆರಂಭಿಸಿದೆ. ಆಗಸ್ಟ್ 24 ರಂದು ಆರಂಭವಾಗಲಿರುವ ಪಂದ್ಯಗಳಿಗಾಗಿ ಹಲವು ಆಟಗಾರರು ಟೋಕಿಯೊಗೆ ಆಗಮಿಸಿದ್ದಾರೆ. ಆದರೆ ಈ ಮಧ್ಯೆ, ಕೋವಿಡ್ -19 ರ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ.

ಉದ್ಘಾಟನಾ ಸಮಾರಂಭಕ್ಕೆ ಇನ್ನೂ ಎರಡು ದಿನ ಬಾಕಿ ಇರುವಾಗ ಸಂಘಟಕರು ಆತಂಕದಲ್ಲಿದ್ದಾರೆ. ಪ್ಯಾರಾಲಿಂಪಿಕ್ ಸಂಘಟನಾ ಸಮಿತಿಯ ಪ್ರಕಾರ, ಇಲ್ಲಿಯವರೆಗೆ ಯಾವುದೇ ಆಟಗಾರರಲ್ಲಿ ಕೊರೊನಾ ಕಂಡುಬಂದಿಲ್ಲ. ಆದರೆ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಕಂಡುಬಂದಿದೆ. ಸೋಂಕು ಪತ್ತೆಯಾದವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟೋಕಿಯೊ ಒಲಿಂಪಿಕ್ಸ್ ಅನ್ನು ಪರಿಗಣಿಸಿ, ಜುಲೈ 1 ರಿಂದ 63,000 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ.

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ 54 ಕ್ರೀಡಾಪಟುಗಳು ಆಗಸ್ಟ್ 24 ರಿಂದ ಸೆಪ್ಟೆಂಬರ್ 5 ರ ವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ 54 ಪ್ಯಾರಾ ಅಥ್ಲೀಟ್​ಗಳು 9 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಇವರೆಲ್ಲರನ್ನೂ ನರೇಂದ್ರ ಮೋದಿಯವರಿಂದ ಹಿಡಿದು ಕ್ರೀಡಾ ಮಂತ್ರಿಯವರೆಗೆ ಎಲ್ಲಾ ಭಾರತೀಯರು ಅಭಿನಂದಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ಎಂದರೇನು? ಪ್ಯಾರಾಲಿಂಪಿಕ್ಸ್ ಅಂತರಾಷ್ಟ್ರೀಯ ಕ್ರೀಡಾಕೂಟ ಆಗಿದೆ. ಇದರಲ್ಲಿ ಒಲಿಂಪಿಕ್ಸ್‌ನಂತೆಯೇ ಆಟಗಳಿವೆ. ಇದು ತಂಡದ ಕ್ರೀಡೆಗಳನ್ನು ಒಳಗೊಂಡಂತೆ ವೈಯಕ್ತಿಕ ಸ್ಪರ್ಧೆಗಳನ್ನು ಒಳಗೊಂಡಿದೆ. ಈ ಸ್ಪರ್ಧೆಯಲ್ಲಿ ಆಡುವ ಆಟಗಾರರು ಯಾವುದಾದರೂ ದೇಹದ ನ್ಯೂನತೆಯಿಂದ ಬಳಲುತ್ತಿರುತ್ತಾರೆ. ಕ್ರೀಡಾಕೂಟವನ್ನು ಅಂತರಾಷ್ಟ್ರೀಯ ಪ್ಯಾರಾಲಿಂಪಿಕ್ ಸಮಿತಿ (ಐಪಿಸಿ) ಆಯೋಜಿಸಿದೆ.

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್