AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಹೊಸ ಚಿಂತೆ: NCA ಸೇರಿದ 13 ಆಟಗಾರರು!

ಭಾರತೀಯ ಕ್ರಿಕೆಟ್ ತಂಡ ಸದ್ಯ ಮೈದಾನದ ಒಳಗಿಗಿಂತಲೂ ಹೆಚ್ಚಾಗಿ ಮೈದಾನದ ಹೊರಗಿನ ಫಿಟ್​ನೆಸ್​ ಸಮಸ್ಯೆಯಿಂದಾಗಿ ಭಾರಿ ಸುದ್ದಿಯಲ್ಲಿದೆ. ಮುಂಬರುವ ಪ್ರಮುಖ ಸರಣಿಗಳ ಮೇಲೆ ಕಣ್ಣಿಟ್ಟಿರುವ ಬಿಸಿಸಿಐಗೆ ಏಕಕಾಲದಲ್ಲಿ ಭಾರಿ ಆಘಾತ ಎದುರಾಗಿದ್ದು, ಹಾರ್ದಿಕ್ ಪಾಂಡ್ಯ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಭವಿಷ್ಯದ ಯೋಜನೆಗಳಲ್ಲಿದ್ದ 13 ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ NCA  ಸೇರಿದ್ದಾರೆ.

ಟೀಮ್ ಇಂಡಿಯಾಗೆ ಹೊಸ ಚಿಂತೆ: NCA ಸೇರಿದ 13 ಆಟಗಾರರು!
Team India Image Credit source: GettyImages
ಝಾಹಿರ್ ಯೂಸುಫ್
|

Updated on: Aug 08, 2026 | 11:56 AM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಬೆಂಗಳೂರಿನ ಅತ್ಯಾಧುನಿಕ ‘ಸೆಂಟರ್ ಆಫ್ ಎಕ್ಸಲೆನ್ಸ್’ (COE/ NCA) ಸದ್ಯ ಟೀಮ್ ಇಂಡಿಯಾದ ಪ್ರಮುಖ ಆಟಗಾರರ ಪುನರ್ವಸತಿ ಕೇಂದ್ರವಾಗಿ ಮಾರ್ಪಟ್ಟಿದೆ. ರಾಷ್ಟ್ರೀಯ ತಂಡದ ಹಾಲಿ ಆಟಗಾರರು ಹಾಗೂ ಭವಿಷ್ಯದ ಯೋಜನೆಗಳಲ್ಲಿ ಗುರುತಿಸಿಕೊಂಡಿರುವ ಬರೋಬ್ಬರಿ 13 ಭಾರತೀಯ ಕ್ರಿಕೆಟಿಗರು ಗಾಯದ ಸಮಸ್ಯೆಯಿಂದಾಗಿ ಏಕಕಾಲದಲ್ಲಿ ಎನ್‌ಸಿಎನಲ್ಲಿ ಚಿಕಿತ್ಸೆ ಮತ್ತು ಫಿಟ್​ನೆಸ್ ರಿಹ್ಯಾಬ್ ಪ್ರಕ್ರಿಯೆಗೆ ಒಳಗಾಗಿದ್ದಾರೆ.

ಟೀಮ್ ಇಂಡಿಯಾದ ಈ ಸರಣಿ ಗಾಯದ ಸಮಸ್ಯೆಗಳು ಇದೀಗ ನಾಯಕ ಶುಭ್‌ಮನ್ ಗಿಲ್ ಮತ್ತು ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ಯೋಜನೆಗಳಿಗೆ ತೀವ್ರ ಹಿನ್ನಡೆ ಉಂಟುಮಾಡಿದ್ದು, ಬಿಸಿಸಿಐ ಫಿಟ್ನೆಸ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲು ಮುಂದಾಗಿದೆ.

ಗಾಯಾಳುಗಳ ಪಟ್ಟಿಯಲ್ಲಿರುವ ಪ್ರಮುಖರು:

ಬಿಸಿಸಿಐ ಎಲ್ಲ 13 ಆಟಗಾರರ ಹೆಸರನ್ನು ಅಧಿಕೃತವಾಗಿ ಪ್ರಕಟಿಸದಿದ್ದರೂ, ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ ಪ್ರಮುಖ ಆಟಗಾರರು ಎನ್‌ಸಿಎನಲ್ಲಿದ್ದಾರೆ.

  • ಜಸ್​ಪ್ರೀತ್ ಬುಮ್ರಾ: ಮೊಣಕಾಲಿನ ಗಾಯದ ಸಮಸ್ಯೆಯಿಂದಾಗಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಬುಮ್ರಾ, ಸದ್ಯ ಫಿಟ್​ನೆಸ್​ ಮರಳಿ ಪಡೆಯಲು ಶ್ರಮಿಸುತ್ತಿದ್ದಾರೆ.
  • ಹಾರ್ದಿಕ್ ಪಾಂಡ್ಯ: ಬೆನ್ನು ನೋವಿನ ಬಳಲುತ್ತಿರುವ ಪಾಂಡ್ಯ ಸದ್ಯ ಈ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ.
  • ಹರ್ಷಿತ್ ರಾಣಾ: ಇತ್ತೀಚಿಗೆ ಚೇತರಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಮತ್ತೆ ಹ್ಯಾಮ್‌ಸ್ಟ್ರಿಂಗ್ ಸಮಸ್ಯೆಗೆ ತುತ್ತಾಗಿದ್ದಾರೆ.
  • ಇತರೆ ಆಟಗಾರರು: ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ನಿತೀಶ್ ಕುಮಾರ್ ರೆಡ್ಡಿ, ಆಕಾಶ್ ದೀಪ್ ಮತ್ತು ಸಾಯಿ ಸುದರ್ಶನ್ ಸೇರಿದಂತೆ ಪ್ರಮುಖ ಯುವ ಆಟಗಾರರು ‘ಸೆಂಟರ್ ಆಫ್ ಎಕ್ಸಲೆನ್ಸ್’  ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.

ಗಿಲ್ ಅಸಮಾಧಾನ: ‘ಬ್ರಾಂಕೋ’ ಟೆಸ್ಟ್ ಜಾರಿ!

ಸತತವಾಗಿ ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗುತ್ತಿರುವುದಕ್ಕೆ ನಾಯಕ ಶುಭ್‌ಮನ್ ಗಿಲ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. “ಆಟಗಾರರು ಸತತವಾಗಿ 2-3 ಪಂದ್ಯಗಳನ್ನು ಆಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಪ್ರತಿ ಸರಣಿಯಲ್ಲೂ ತುರ್ತು ಬದಲಾವಣೆಗಳನ್ನು ಮಾಡಬೇಕಾಗಿ ಬರುತ್ತಿದ್ದು, ತಂಡದ ಸಮತೋಲನ ಕೆಡುತ್ತಿದೆ” ಎಂದು ಗಿಲ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಫಿಟ್​ನೆಸ್​ ಮೌಲ್ಯಮಾಪನದಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ನಿರ್ಧರಿಸಿದೆ.

  • ಕಡ್ಡಾಯ ಫಿಟ್​ನೆಸ್ ಟೆಸ್ಟ್: ಇನ್ಮುಂದೆ ಆಟಗಾರರ ಇಷ್ಟದಂತೆ ಫಿಟ್​ನೆಸ್ ನಿಯಮಗಳನ್ನು ಸಡಿಲಗೊಳಿಸುವುದಿಲ್ಲ. ಪ್ರತಿಯೊಂದು ಸರಣಿಗೂ ಮುನ್ನ ಕಠಿಣವಾದ ‘ಬ್ರಾಂಕೋ’ ಮತ್ತು 2K ರನ್ನಿಂಗ್ ಟೆಸ್ಟ್‌ಗಳನ್ನು ಪಾಸ್ ಮಾಡುವುದು ಕಡ್ಡಾಯವಾಗಿದೆ.
  • ವೈದ್ಯಕೀಯ ತಂಡದ ತಪಾಸಣೆ: ನಿತಿನ್ ಪಟೇಲ್ ಅವರ ನಿರ್ಗಮನದ ಬಳಿಕ ಎನ್‌ಸಿಎನಲ್ಲಿ ಕಾಯಂ ವೈದ್ಯಕೀಯ ಮುಖ್ಯಸ್ಥರು ಇಲ್ಲದಿರುವುದು ಈ ಸಮಸ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಸದ್ಯ ಇರುವ ಫಿಸಿಯೋ ಮತ್ತು ವೈದ್ಯರ ಕಾರ್ಯವೈಖರಿಯನ್ನು ಬಿಸಿಸಿಐ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಇದನ್ನೂ ಓದಿ: ಏಕದಿನ ವಿಶ್ವಕಪ್‌ಗೆ ಆಫ್ಘಾನಿಸ್ತಾನ್ ಎಂಟ್ರಿ: 2 ತಂಡಗಳು ಔಟ್..!

ಒಟ್ಟಾರೆಯಾಗಿ ಹೇಳುವುದಾದರೆ, ಏಕಕಾಲದಲ್ಲಿ 13 ಪ್ರಮುಖ ಆಟಗಾರರು ಗಾಯಗೊಂಡು ಎನ್‌ಸಿಎ ಸೇರಿರುವುದು ಭಾರತೀಯ ಕ್ರಿಕೆಟ್‌ನ ಆತಂಕವನ್ನು ಹೆಚ್ಚಿಸಿದೆ. ನಾಯಕ ಶುಭ್‌ಮನ್ ಗಿಲ್ ಮತ್ತು ಕೋಚ್ ಗೌತಮ್ ಗಂಭೀರ್ ಅವರ ಮುಂದಿನ ಯೋಜನೆಗಳಿಗೆ ಇದು ದೊಡ್ಡ ಹಿನ್ನಡೆಯಾಗಿದ್ದು, ಮುಂಬರುವ ಸರಣಿಗಳಲ್ಲಿ ಬಲಿಷ್ಠ ತಂಡವನ್ನು ಕಣಕ್ಕಿಳಿಸುವುದು ಬಿಸಿಸಿಐಗೆ ಕಠಿಣ ಸವಾಲಾಗಿದೆ.

ಭಾರತೀಯ ಕ್ರಿಕೆಟ್ ತಂಡ ಸದ್ಯ ಮೈದಾನದ ಒಳಗಿಗಿಂತಲೂ ಹೆಚ್ಚಾಗಿ ಮೈದಾನದ ಹೊರಗಿನ ಫಿಟ್​ನೆಸ್​ ಸಮಸ್ಯೆಯಿಂದಾಗಿ ಭಾರಿ ಸುದ್ದಿಯಲ್ಲಿದೆ. ಮುಂಬರುವ ಪ್ರಮುಖ ಸರಣಿಗಳ ಮೇಲೆ ಕಣ್ಣಿಟ್ಟಿರುವ ಬಿಸಿಸಿಐಗೆ ಏಕಕಾಲದಲ್ಲಿ ಭಾರಿ ಆಘಾತ ಎದುರಾಗಿದ್ದು, ಹಾರ್ದಿಕ್ ಪಾಂಡ್ಯ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಭವಿಷ್ಯದ ಯೋಜನೆಗಳಲ್ಲಿದ್ದ 13 ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ NCA  ಸೇರಿದ್ದಾರೆ.

Follow Us
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ