AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2007 ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ವಿರುದ್ಧ ಪ್ರಕರಣ ದಾಖಲು..!

Joginder Sharma: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪ್ರಸ್ತುತ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಂಗಿದರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜೋಗಿಂದರ್ ಸಿಂಗ್ ವಿರುದ್ಧ ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಕೇಳಿಬಂದಿದೆ.

2007 ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ವಿರುದ್ಧ ಪ್ರಕರಣ ದಾಖಲು..!
ಜೋಂಗಿದರ್ ಶರ್ಮಾ
ಪೃಥ್ವಿಶಂಕರ
|

Updated on:Jan 06, 2024 | 4:08 PM

Share

2007ರ ಟಿ20 ವಿಶ್ವಕಪ್ (2007 T20 World Cup) ಅನ್ನು ಯಾರಿಗೆ ತಾನೇ ಮರೆಯಲು ಸಾಧ್ಯ ಹೇಳಿ. ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕತ್ವದಲ್ಲಿ ಟಿ20 ವಿಶ್ವಕಪ್ ಅಖಾಡಕ್ಕಿಳಿದಿದ್ದ ಭಾರತ ಯುವ ಪಡೆ ಫೈನಲ್ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಟೂರ್ನಿಯನ್ನು ಗೆಲ್ಲುವಲ್ಲಿ, ಅದರಲ್ಲೂ ಫೈನಲ್ ಪಂದ್ಯವನ್ನು ಗೆಲ್ಲುವಲ್ಲಿ ತಂಡದ ಯುವ ಆಟಗಾರರ ಪರಿಶ್ರಮ ಅಪಾರವಾಗಿತ್ತು. ಅಂತಹ ಯುವ ಆಟಗಾರರ ಪೈಕಿ ಫೈನಲ್ ಪಂದ್ಯದ 20ನೇ ಓವರ್​ ಬೌಲ್ ಮಾಡಿ ಟೀಂ ಇಂಡಿಯಾಕ್ಕೆ ಗೆಲುವು ತಂದುಕೊಟ್ಟಿದ್ದ ವೇಗಿ ಜೋಗಿಂದರ್ ಶರ್ಮಾ (Joginder Sharma) ಕೂಡ ಒಬ್ಬರು. ಆದರೀಗ ಪ್ರಸ್ತುತ  ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಗಿಂದರ್ ಶರ್ಮಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪವೊಂದು ಕೇಳಿಬಂದಿದೆ.

2007ರ ಟಿ20 ವಿಶ್ವಕಪ್‌ ಸ್ಟಾರ್

2007ರ ಟಿ20 ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ಜೋಗಿಂದರ್ ಶರ್ಮಾ, ಮಿಸ್ಬಾ ಉಲ್ ಹಕ್ ಅವರ ವಿಕೆಟ್ ಕಬಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದುದನ್ನು ಎಲ್ಲಾ ಅಭಿಮಾನಿಗಳು ಇಂದಿಗೂ ನೆನಪಿಸಿಕೊಳ್ಳುತ್ತಾರೆ. 2007ರ ಟಿ20 ವಿಶ್ವಕಪ್‌ನ ಈ ಸ್ಟಾರ್ ಆಟಗಾರ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಜೋಗಿಂದರ್ ಶರ್ಮಾ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿದ್ದಾರೆ. ಇದೀಗ ಹಿಸಾರ್ ಆತ್ಮಹತ್ಯೆ ಪ್ರಕರಣದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರೊಂದಿಗೆ ಇತರ 6 ಜನರ ಹೆಸರುಗಳೂ ಈ ಪ್ರಕರಣದಲ್ಲಿ ಕೇಳಿಬಂದಿವೆ.

Joginder Sharma retirement: ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಭಾರತದ ಚೊಚ್ಚಲ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

ಜೋಗಿಂದರ್ ವಿರುದ್ಧ ಕೇಸ್ ದಾಖಲಿಸಿದ್ದು ಯಾಕೆ?

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪ್ರಸ್ತುತ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಂಗಿದರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜೋಗಿಂದರ್ ವಿರುದ್ಧ ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಕೇಳಿಬಂದಿದೆ. ಮಾಹಿತಿ ಪ್ರಕಾರ, ಜನವರಿ 1 ರಂದು, ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬ ಆಸ್ತಿ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ಮೃತರ ಕುಟುಂಬಸ್ಥರು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಅದರಲ್ಲಿ ಜೋಗಿಂದರ್ ಶರ್ಮಾ ಅವರ ಹೆಸರೂ ಸಹ ಸೇರಿದೆ.

ಚಿತ್ರಹಿಂಸೆ ನೀಡುತ್ತಿದ್ದಾರೆ

ಹರಿಯಾಣ ಪೊಲೀಸರು ಜೋಗಿಂದರ್ ಶರ್ಮಾ ಮತ್ತು ಇತರ 6 ಜನರ ವಿರುದ್ಧ ಹಿಸಾರ್‌ನ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ವಿಭಾಗದಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿಂದೆಯೂ ಸಹ ಆರೋಪಿಗಳೆಲ್ಲರೂ ತನ್ನ ಮಗನಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಮೃತನ ತಾಯಿ ಆರೋಪಿಸಿದ್ದರು. ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಈ ಬಗ್ಗೆ ಮತ್ತೊಮ್ಮೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Sat, 6 January 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!