AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2007 ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ವಿರುದ್ಧ ಪ್ರಕರಣ ದಾಖಲು..!

Joginder Sharma: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪ್ರಸ್ತುತ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಂಗಿದರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜೋಗಿಂದರ್ ಸಿಂಗ್ ವಿರುದ್ಧ ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಕೇಳಿಬಂದಿದೆ.

2007 ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ವಿರುದ್ಧ ಪ್ರಕರಣ ದಾಖಲು..!
ಜೋಂಗಿದರ್ ಶರ್ಮಾ
ಪೃಥ್ವಿಶಂಕರ
|

Updated on:Jan 06, 2024 | 4:08 PM

Share

2007ರ ಟಿ20 ವಿಶ್ವಕಪ್ (2007 T20 World Cup) ಅನ್ನು ಯಾರಿಗೆ ತಾನೇ ಮರೆಯಲು ಸಾಧ್ಯ ಹೇಳಿ. ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕತ್ವದಲ್ಲಿ ಟಿ20 ವಿಶ್ವಕಪ್ ಅಖಾಡಕ್ಕಿಳಿದಿದ್ದ ಭಾರತ ಯುವ ಪಡೆ ಫೈನಲ್ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಟೂರ್ನಿಯನ್ನು ಗೆಲ್ಲುವಲ್ಲಿ, ಅದರಲ್ಲೂ ಫೈನಲ್ ಪಂದ್ಯವನ್ನು ಗೆಲ್ಲುವಲ್ಲಿ ತಂಡದ ಯುವ ಆಟಗಾರರ ಪರಿಶ್ರಮ ಅಪಾರವಾಗಿತ್ತು. ಅಂತಹ ಯುವ ಆಟಗಾರರ ಪೈಕಿ ಫೈನಲ್ ಪಂದ್ಯದ 20ನೇ ಓವರ್​ ಬೌಲ್ ಮಾಡಿ ಟೀಂ ಇಂಡಿಯಾಕ್ಕೆ ಗೆಲುವು ತಂದುಕೊಟ್ಟಿದ್ದ ವೇಗಿ ಜೋಗಿಂದರ್ ಶರ್ಮಾ (Joginder Sharma) ಕೂಡ ಒಬ್ಬರು. ಆದರೀಗ ಪ್ರಸ್ತುತ  ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಗಿಂದರ್ ಶರ್ಮಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪವೊಂದು ಕೇಳಿಬಂದಿದೆ.

2007ರ ಟಿ20 ವಿಶ್ವಕಪ್‌ ಸ್ಟಾರ್

2007ರ ಟಿ20 ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ಜೋಗಿಂದರ್ ಶರ್ಮಾ, ಮಿಸ್ಬಾ ಉಲ್ ಹಕ್ ಅವರ ವಿಕೆಟ್ ಕಬಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದುದನ್ನು ಎಲ್ಲಾ ಅಭಿಮಾನಿಗಳು ಇಂದಿಗೂ ನೆನಪಿಸಿಕೊಳ್ಳುತ್ತಾರೆ. 2007ರ ಟಿ20 ವಿಶ್ವಕಪ್‌ನ ಈ ಸ್ಟಾರ್ ಆಟಗಾರ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಜೋಗಿಂದರ್ ಶರ್ಮಾ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿದ್ದಾರೆ. ಇದೀಗ ಹಿಸಾರ್ ಆತ್ಮಹತ್ಯೆ ಪ್ರಕರಣದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರೊಂದಿಗೆ ಇತರ 6 ಜನರ ಹೆಸರುಗಳೂ ಈ ಪ್ರಕರಣದಲ್ಲಿ ಕೇಳಿಬಂದಿವೆ.

Joginder Sharma retirement: ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಭಾರತದ ಚೊಚ್ಚಲ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

ಜೋಗಿಂದರ್ ವಿರುದ್ಧ ಕೇಸ್ ದಾಖಲಿಸಿದ್ದು ಯಾಕೆ?

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪ್ರಸ್ತುತ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಂಗಿದರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜೋಗಿಂದರ್ ವಿರುದ್ಧ ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಕೇಳಿಬಂದಿದೆ. ಮಾಹಿತಿ ಪ್ರಕಾರ, ಜನವರಿ 1 ರಂದು, ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬ ಆಸ್ತಿ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ಮೃತರ ಕುಟುಂಬಸ್ಥರು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಅದರಲ್ಲಿ ಜೋಗಿಂದರ್ ಶರ್ಮಾ ಅವರ ಹೆಸರೂ ಸಹ ಸೇರಿದೆ.

ಚಿತ್ರಹಿಂಸೆ ನೀಡುತ್ತಿದ್ದಾರೆ

ಹರಿಯಾಣ ಪೊಲೀಸರು ಜೋಗಿಂದರ್ ಶರ್ಮಾ ಮತ್ತು ಇತರ 6 ಜನರ ವಿರುದ್ಧ ಹಿಸಾರ್‌ನ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ವಿಭಾಗದಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿಂದೆಯೂ ಸಹ ಆರೋಪಿಗಳೆಲ್ಲರೂ ತನ್ನ ಮಗನಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಮೃತನ ತಾಯಿ ಆರೋಪಿಸಿದ್ದರು. ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಈ ಬಗ್ಗೆ ಮತ್ತೊಮ್ಮೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Sat, 6 January 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್