AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆ ಎರಡು ಪರಾಜಯ ನನ್ನ ಪಾಲಿನ ಅತ್ಯಂತ ನೋವಿನ ಸೋಲುಗಳು..!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 192 ರನ್ ಗಳಿಸಿತು.

Virat Kohli: ಆ ಎರಡು ಪರಾಜಯ ನನ್ನ ಪಾಲಿನ ಅತ್ಯಂತ ನೋವಿನ ಸೋಲುಗಳು..!
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2022 | 4:36 PM

Share

ವಿರಾಟ್ ಕೊಹ್ಲಿ (Virat Kohli) ತಮ್ಮ ವೃತ್ತಿ ಜೀವನದಲ್ಲಿ ಹಲವು ರೋಚಕ ಪಂದ್ಯಗಳನ್ನು ಗೆದ್ದಿದ್ದಾರೆ. ಒಂದಷ್ಟು ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟಿದ್ದಾರೆ. ಅದರಲ್ಲೂ ತಮ್ಮ ನಾಯಕತ್ವದಲ್ಲಿ ಕೊಹ್ಲಿ ಭರ್ಜರಿ ಪ್ರದರ್ಶನವನ್ನೇ ನೀಡಿದ್ದಾರೆ. ಇದಾಗ್ಯೂ ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯಲ್ಲಿ ಟೀಮ್ ಇಂಡಿಯಾ ಐಸಿಸಿ ಟೂರ್ನಿಗಳಲ್ಲಿನ ನಿರ್ಣಾಯಕ ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಮೂಡಿಸಿತ್ತು. ಅದು ಇತ್ತೀಚೆಗಿನ ಟಿ20 ವಿಶ್ವಕಪ್‌ನಲ್ಲಿನ ಹೀನಾಯ ಸೋಲಾಗಿರಬಹುದು, ಅಥವಾ 2019 ರ ವಿಶ್ವಕಪ್​ನ ಸೆಮಿಫೈನಲ್ ಸೋಲಿರಬಹುದು. ಅಷ್ಟೇ ಅಲ್ಲದೆ 2017ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ದ ಪರಾಜಯ ಆಗಿರಬಹುದು. ಈ ಮೂರು ಸೋಲುಗಳಿಗೆ ಸ್ವತಃ ವಿರಾಟ್ ಕೊಹ್ಲಿಯೇ ಸಾಕ್ಷಿ. ಆದರೆ ಈ ಎಲ್ಲಾ ಸೋಲುಗಳಿಗಿಂತ ತನ್ನನ್ನು ಕಾಡಿದ ಸೋಲುಗಳ ಬಗ್ಗೆ ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿದ ಕೊಹ್ಲಿ, ಎರಡು ಸೋಲುಗಳು ನನಗೆ ತುಂಬಾ ನೋವುಂಟು ಮಾಡಿತ್ತು. ಆ ಪರಾಜಯದಿಂದಾಗಿ ನನ್ನ ಹೃದಯವೇ ಒಡೆದಂತಾಗಿತ್ತು. ಅದರಲ್ಲಿ ಒಂದು 2016ರ ವಿಶ್ವಕಪ್ ಸೆಮಿಫೈನಲ್ ಪಂದ್ಯ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 192 ರನ್ ಗಳಿಸಿತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿದ್ದರು. ಆದರೆ ವೆಸ್ಟ್ ಇಂಡೀಸ್ 2 ಎಸೆತಗಳು ಬಾಕಿಯಿರುವಾಗಲೇ 193 ರನ್​ಗಳಿಸಿ ಭರ್ಜರಿ ಜಯ ಸಾಧಿಸಿತು. ಅಂದು ತವರಿನಲ್ಲಿ ಟಿ20 ವಿಶ್ವಕಪ್ ಗೆಲ್ಲದಿರುವುದು ತುಂಬಾ ದುಃಖಕರವಾಗಿತ್ತು ಎಂದು ಕೊಹ್ಲಿ ಹೇಳಿದ್ದಾರೆ.

ಇನ್ನು ಮತ್ತೊಂದು ಸೋಲೆಂದರೆ ಐಪಿಎಲ್​ 2016 ರ ಫೈನಲ್​ನಲ್ಲಿನ ಪರಾಜಯ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಕೇವಲ 8 ರನ್‌ಗಳಿಂದ ಸೋತಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಎಸ್​ಆರ್​ಹೆಚ್​ 208 ರನ್ ಗಳಿಸಿತು. 209 ರನ್​ಗಳನ್ನು ಬೆನ್ನತ್ತಿದ RCB ಮೊದಲ ವಿಕೆಟ್‌ಗೆ 114 ರನ್ ಜೊತೆಯಾಟವಾಡಿದ್ದರು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ 54 ಮತ್ತು ಗೇಲ್ 76 ರನ್ ಗಳಿಸಿದ್ದರು. ಇದಾದ ಬಳಿಕ ಆರ್‌ಸಿಬಿ ಮಧ್ಯಮ ಕ್ರಮಾಂಕ ಸಂಪೂರ್ಣ ಕುಸಿಯಿತು. ಅಲ್ಲದೆ ಆರ್​ಸಿಬಿ 8 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲು ಕೂಡ ನನ್ನ ಪಾಲಿನ ಅತ್ಯಂತ ದುಃಖದಾಯಕ ಸೋಲಾಗಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ