AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: 25 ವರ್ಷಗಳ ನಂತರ ಭಾರತ- ಕಿವೀಸ್ ಫೈಟ್; ಕೊನೆಯ ಮುಖಾಮುಖಿಯಲ್ಲಿ ಗೆದ್ದಿದ್ಯಾರು?

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 2 ರಂದು ನಡೆಯುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯ 25 ವರ್ಷಗಳ ಬಳಿಕದ ಮುಖಾಮುಖಿಯಾಗಲಿದೆ. ಈ ಮೊದಲು ಈ ಎರಡು ತಂಡಗಳು 2000ನೇ ಆವೃತ್ತಿಯಲ್ಲಿ ಪಂದ್ಯವನ್ನಾಡಿದ್ದವು.

Champions Trophy 2025: 25 ವರ್ಷಗಳ ನಂತರ ಭಾರತ- ಕಿವೀಸ್ ಫೈಟ್; ಕೊನೆಯ ಮುಖಾಮುಖಿಯಲ್ಲಿ ಗೆದ್ದಿದ್ಯಾರು?
ಭಾರತ Vs ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on:Mar 02, 2025 | 2:12 PM

Share

2025 ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತ ಭಾಗಶಃ ಮುಗಿದಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ನಾಳೆ ಅಂದರೆ ಮಾರ್ಚ್​ 2 ರಂದು ನಡೆಯುವ ಕೊನೆಯ ಪಂದ್ಯದೊಂದಿಗೆ ಲೀಗ್ ಹಂತ ಮುಗಿಯಲಿದೆ. ಆ ಬಳಿಕ ನಾಕೌಟ್ ಸುತ್ತು ಆರಂಭವಾಗಲಿದೆ. ಇನ್ನು ಭಾರತ ಹಾಗೂ ಕಿವೀಸ್ ನಡುವಿನ ಮುಖಾಮುಖಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಹಳ ವಿಶೇಷವಾಗಿದೆ. ಏಕೆಂದರೆ ಬರೋಬ್ಬರಿ 25 ವರ್ಷಗಳ ನಂತರ ಉಭಯ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಎದುರುಬದುರಾಗುತ್ತಿವೆ.

ವಾಸ್ತವವಾಗಿ 8 ತಂಡಗಳ ನಡುವೆ ನಡೆಯುತ್ತಿರುವ ಈ ಐಸಿಸಿ ಚಾಂಪಿಯನ್ಸ್ ಟ್ರೋಫಿ 1998 ರಲ್ಲಿ ಪ್ರಾರಂಭವಾಯಿತ. ಈ ಟೂರ್ನಿಯನ್ನು ಪ್ರತಿ 4 ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತದೆ. ಆದರೆ ಕೊರೊನಾ ಕಾರಣದಿಂದಾಗಿ 2017 ರ ನಂತರ ಈ ಟೂರ್ನಿಯನ್ನು ನಡೆಸಿರಲಿಲ್ಲ. ಆದರೆ ಇದೀಗ 6 ವರ್ಷಗಳ ನಂತರ ನಡೆಯುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡ 25 ವರ್ಷಗಳ ಬಳಿಕ ಕಿವೀಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ.

25 ವರ್ಷಗಳ ನಂತರ ಮುಖಾಮುಖಿ

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನ ಇಲ್ಲಿಯವರೆಗೆ ಅತ್ಯುತ್ತಮವಾಗಿದೆ. ಗುಂಪು ಹಂತದಲ್ಲಿ ತನ್ನ ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಪಡೆ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದರೆ, ಆ ನಂತರದ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿತ್ತು. ಇದೀಗ ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡಲು ಟೀಂ ಇಂಡಿಯಾ ಸಿದ್ಧವಾಗಿದೆ. ಮೇಲೆ ಹೇಳಿದಂತೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 25 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪರಸ್ಪರ ಎದುರಾಗಲಿವೆ. ಈ ಟೂರ್ನಿಯಲ್ಲಿ ಈ ಎರಡೂ ತಂಡಗಳ ನಡುವೆ ಇಲ್ಲಿಯವರೆಗೆ ಒಂದೇ ಒಂದು ಪಂದ್ಯ ನಡೆದಿದೆ. ಈ ಪಂದ್ಯವನ್ನು 2000 ನೇ ಇಸವಿಯಲ್ಲಿ ಆಡಲಾಗಿತ್ತು.

ಇದನ್ನೂ ಓದಿ
Image
ಚಾಂಪಿಯನ್ಸ್ ಟ್ರೋಫಿ ನಡುವೆಯೇ ನಾಯಕತ್ವ ತ್ಯಜಿಸಿದ ಜೋಸ್ ಬಟ್ಲರ್
Image
ಚಾಂಪಿಯನ್ಸ್ ಟ್ರೋಫಿ: ಲೀಗ್ ಸುತ್ತಿನಲ್ಲಿ ಭಾರತದ ಕೊನೆಯ ಎದುರಾಳಿ ಯಾರು?
Image
ವಿದೇಶಿಗರನ್ನು ಅಪಹರಿಸಿ ಸುಲಿಗೆಗೆ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೆ ಜಸ್ಪ್ರೀತ್ ಬುಮ್ರಾ ಎಂಟ್ರಿ? NCA ಯಿಂದ ಹೊರಬಿತ್ತು ಗುಡ್​ ನ್ಯೂಸ್

ಫೈನಲ್​ನಲ್ಲಿ ಸೋತಿದ್ದ ಭಾರತ

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿದ್ದು 2000ನೇ ಇಸವಿಯಲ್ಲಿ. ಆ ಆವೃತ್ತಿಯ ಫೈನಲ್​ನಲ್ಲಿ ಈ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಎರಡು ಎಸೆತಗಳು ಬಾಕಿ ಇರುವಂತೆ 6 ವಿಕೆಟ್‌ಗಳನ್ನು ಕಳೆದುಕೊಂಡು ಜಯ ಸಾಧಿಸಿದಲ್ಲದೆ ಚಾಂಪಿಯನ್ ಕೂಡ ಆಗಿತ್ತು. ಇದಾದ ನಂತರ, ಈ ಟೂರ್ನಿಯಲ್ಲಿ ಈ ಎರಡೂ ತಂಡಗಳ ನಡುವೆ ಯಾವುದೇ ಪಂದ್ಯ ನಡೆದಿಲ್ಲ. ಆದಾಗ್ಯೂ, ಈಗ 25 ವರ್ಷಗಳ ನಂತರ, ಈ ಎರಡೂ ತಂಡಗಳು ದುಬೈನಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿವೆ.

ಟೀಂ ಇಂಡಿಯಾ ಮೇಲುಗೈ

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಲ್ಲಿಯವರೆಗೆ 118 ಏಕದಿನ ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಟೀಂ ಇಂಡಿಯಾ 60 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 50 ಪಂದ್ಯಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮತ್ತೊಂದೆಡೆ, ಭಾರತ ತಂಡವು ಉಭಯ ತಂಡಗಳ ನಡುವೆ ಆಡಿದ ಕೊನೆಯ 5 ಏಕದಿನ ಪಂದ್ಯಗಳನ್ನು ಗೆದ್ದಿದೆ. ಇದರರ್ಥ ಈ ಪಂದ್ಯದಲ್ಲೂ ಟೀಂ ಇಂಡಿಯಾ ಮೇಲುಗೈ ಸಾಧಿಸುವ ನಿರೀಕ್ಷೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Sat, 1 March 25

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ