AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ವಿಶ್ವಕಪ್​ನಲ್ಲಿ ಭಾರತ ಮಹಿಳಾ ತಂಡಕ್ಕೆ ಸತತ 2ನೇ ಸೋಲು

India vs Australia Women's Cricket: 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದೆ. ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 330 ರನ್ ಗಳಿಸಿದರೂ, ಬೌಲಿಂಗ್ ವೈಫಲ್ಯದಿಂದ ಆಸ್ಟ್ರೇಲಿಯಾ 3 ವಿಕೆಟ್‌ಗಳಿಂದ ಗೆದ್ದಿತು. ಇದು ಭಾರತಕ್ಕೆ ಸತತ ಎರಡನೇ ಸೋಲಾಗಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಬ್ಯಾಟಿಂಗ್ ಉತ್ತಮವಾಗಿದ್ದರೂ, ಕೊನೆಯ ಹಂತದಲ್ಲಿ ಬೌಲಿಂಗ್ ಕೈಕೊಟ್ಟಿತು.

World Cup 2025: ವಿಶ್ವಕಪ್​ನಲ್ಲಿ ಭಾರತ ಮಹಿಳಾ ತಂಡಕ್ಕೆ ಸತತ 2ನೇ ಸೋಲು
Ind W Vs Aus W
ಪೃಥ್ವಿಶಂಕರ
|

Updated on:Oct 12, 2025 | 10:49 PM

Share

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನ (ICC Women’s World Cup 2025) 13 ನೇ ಲೀಗ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾದ (India vs Australia) ಮಹಿಳಾ ತಂಡಗಳ ನಡುವೆ ವಿಶಾಖಪಟ್ಟಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 330 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನು ಒಂದು ಓವರ್ ಬಾಕಿ ಇರುವಂತೆಯೇ 3 ವಿಕೆಟ್​ಗಳ ಜಯ ಸಾಧಿಸಿತು. ಇದು ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಸತತ ಎರಡನೇ ಸೋಲಾಗಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಾರಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿತ್ತಾದರೂ, ಬೌಲಿಂಗ್ ವಿಭಾಗದಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಹೀಗಾಗಿ ತಂಡ ಕೊನೆಯ ಹಂತದಲ್ಲಿ ಸೋಲಿಗೆ ಕೊರಳೊಡ್ಡಬೇಕಾಯಿತು.

ಭಾರತಕ್ಕೆ ಭರ್ಜರಿ ಆರಂಭ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ಪ್ರತಿಕಾ ರಾವಲ್ ಮತ್ತು ಸ್ಮೃತಿ ಮಂಧಾನ 155 ರನ್‌ಗಳ ಜೊತೆಯಾಟವಾಡಿದರು. ಸ್ಮೃತಿ ರೂಪದಲ್ಲಿ ಭಾರತ ಮೊದಲ ವಿಕೆಟ್ ಕಳೆದುಕೊಂಡಿತು. ಸ್ಮೃತಿ 66 ಎಸೆತಗಳಲ್ಲಿ 80 ರನ್ ಗಳಿಸಿ ಔಟಾದರು. ಅದಾದ ನಂತರ, ಆಸ್ಟ್ರೇಲಿಯಾ ನಿಯಮಿತ ಅಂತರದಲ್ಲಿ 3 ವಿಕೆಟ್ ಉರುಳಿಸಿತು. ಪ್ರತಿಕಾ ರಾವಲ್ 75 ರನ್ ಗಳಿಸಿ ಔಟಾದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 22 ರನ್ ವಿಕೆಟ್ ಒಪ್ಪಿಸಿದರು. ಹರ್ಲೀನ್ ಡಿಯೋಲ್ 38 ರನ್ ಗಳಿಸಿದರು. ಆ ನಂತರ ಜೆಮಿಮಾ ರೋಡ್ರಿಗಸ್ ಮತ್ತು ರಿಚಾ ಘೋಷ್ ಐದನೇ ವಿಕೆಟ್‌ಗೆ ನಿರ್ಣಾಯಕ ಅರ್ಧಶತಕದ ಪಾಲುದಾರಿಕೆಯನ್ನು ನೀಡಿದರು.

World Cup 2025: ಆಸೀಸ್ ವಿರುದ್ಧ ರನ್ ಮಳೆ ಹರಿಸಿದ ಟೀಂ ಇಂಡಿಯಾ, ಹೊಸ ದಾಖಲೆ ಸೃಷ್ಟಿ

ಕೊನೆಯಲ್ಲಿ ಎಡವಿದ ಟೀಂ ಇಂಡಿಯಾ

ಜೆಮಿಮಾ ಮತ್ತು ರಿಚಾ ಐದನೇ ವಿಕೆಟ್‌ಗೆ 54 ರನ್‌ಗಳ ಜೊತೆಯಾಟ ನೀಡಿದರು. ಆದಾಗ್ಯೂ ರಿಚಾ 3 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 32 ರನ್ ಗಳಿಸಿ ಔಟಾದರು. ಆಸ್ಟ್ರೇಲಿಯಾ ಇಲ್ಲಿಂದ ಬೇಗನೆ ಟೀಂ ಇಂಡಿಯಾ ಮೇಲೆ ಒತ್ತಡ ಹೇರಿ 50 ಓವರ್‌ಗಳಿಗೆ ಮೊದಲೇ ಆಲೌಟ್ ಮಾಡಿತು. ಜೆಮಿಮಾ 33 ರನ್, ಅಮನ್‌ಜೋತ್ ಕೌರ್ 16 ರನ್, ದೀಪ್ತಿ ಶರ್ಮಾ ಮತ್ತು ಕ್ರಾಂತಿ ಗೌಡ್ ಇಬ್ಬರೂ ತಲಾ 1ರನ್ ಗಳಿಸಿ ಔಟಾದರು. ಶ್ರೀ ಚರಣಿ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್ ಕೊನೆಗೊಂಡಿತು. ಸ್ನೇಹ್ ರಾಣಾ 8 ರನ್ ಗಳಿಸಿ ಔಟಾಗದೆ ಉಳಿದರು. ಅನಾಬೆಲ್ 5 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಮೇಗನ್ ಶುಟ್ ಮತ್ತು ಆಶ್ಲೇ ಗಾರ್ಡ್ನರ್ ಇಬ್ಬರೂ ತಲಾ 1 ವಿಕೆಟ್ ಪಡೆದರು.

ಗೆಲುವಿನ ಇನ್ನಿಂಗ್ಸ್ ಆಡಿದ ನಾಯಕಿ

ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಆರಂಭಿಕ ಜೋಡಿ ಅಲಿಸಾ ಹೀಲಿ ಮತ್ತು ಫೋಬೆ ಲಿಚ್‌ಫೀಲ್ಡ್ ತ್ವರಿತ ಆರಂಭ ನೀಡಿ ಕೇವಲ 11.2 ಓವರ್‌ಗಳಲ್ಲಿ 85 ರನ್‌ ಕಲೆಹಾಕಿದರು. ನಂತರ ನಾಯಕಿ ಅಲಿಸಾ ಹೀಲಿ ಕೇವಲ 84 ಎಸೆತಗಳಲ್ಲಿ ತಮ್ಮ ಆರನೇ ಏಕದಿನ ಶತಕ ಬಾರಿಸಿದರು. ಏತನ್ಮಧ್ಯೆ, ಎಲಿಸ್ ಪೆರ್ರಿ ಗಾಯಗೊಂಡು ನಿವೃತ್ತರಾದರು, ಇತ್ತ ಬೆತ್ ಮೂನಿ ಮತ್ತು ಸದರ್ಲ್ಯಾಂಡ್ ಕೂಡ ಬೇಗನೇ ಔಟಾದರು. ಆದಾಗ್ಯೂ, ಹೀಲಿ, ಆಶ್ಲೀ ಗಾರ್ಡ್ನರ್ ಜೊತೆಗೆ 95 ರನ್‌ಗಳ ಭರ್ಜರಿ ಜೊತೆಯಾಟವನ್ನು ನಡೆಸಿ ತಂಡದ ಗೆಲುವನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 pm, Sun, 12 October 25

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ