AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇದ್ಯಾವ ರೀತಿಯ ಬೌಲಿಂಗ್..! ಕೃನಾಲ್ ಬೌಲಿಂಗ್‌ಗೆ ಕಾವ್ಯ ಮಾರನ್ ಗರಂ

IPL 2026 SRH vs RCB: 2026 ರ ಐಪಿಎಲ್‌ನಲ್ಲಿ ಸನ್​​ರೈಸರ್ಸ್​, ಆರ್​ಸಿಬಿ ತಂಡವನ್ನು 55 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವೆ ಮಾತಿನ ಚಕಮಕಿ ಹಾಗೂ ಸನ್‌ರೈಸರ್ಸ್ ಮಾಲೀಕ ಕಾವ್ಯಾ ಮಾರನ್, ಕೃಣಾಲ್ ಪಾಂಡ್ಯರ ಅಸಾಮಾನ್ಯ ಬೌಲಿಂಗ್ ಶೈಲಿಗೆ ಅಸಮಾಧಾನ ವ್ಯಕ್ತಪಡಿಸಿದ್ದು ವೈರಲ್ ಆಗಿದೆ. ಕೃಣಾಲ್ ಸ್ಪಿನ್ ಬದಲು ಬೌನ್ಸರ್ ಎಸೆದಿದ್ದು ಕಾವ್ಯಾ ಅವರ ಅಚ್ಚರಿಗೆ ಕಾರಣವಾಗಿತ್ತು.

IPL 2026: ಇದ್ಯಾವ ರೀತಿಯ ಬೌಲಿಂಗ್..! ಕೃನಾಲ್ ಬೌಲಿಂಗ್‌ಗೆ ಕಾವ್ಯ ಮಾರನ್ ಗರಂ
Kavya Maran
ಪೃಥ್ವಿಶಂಕರ
|

Updated on:May 23, 2026 | 3:11 PM

Share

2026 ರ ಐಪಿಎಲ್‌ನ (IPL 2026) 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (SRH vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹೈದರಾಬಾದ್ 55 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ನಡೆದಿದ್ದ ಮಾತಿನ ಚಕಮಕಿ ಇದೀಗ ಸಖತ್ ಸದ್ದು ಮಾಡಿದೆ. ಇದರ ನಡುವೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಿಕಿ ಕಾವ್ಯ ಮಾರನ್ (Kavya Maran), ಆರ್​ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ (Krunal Pandya) ಬೌಲಿಂಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿಡಿಯೋ ಕೂಡ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ಅಚ್ಚರಿಗೊಳಗಾದ ಕಾವ್ಯ ಮಾರನ್

ಎಡಗೈ ಸಾಂಪ್ರದಾಯಿಕ ಸ್ಪಿನ್ನರ್ ಆಗಿರುವ ಕೃನಾಲ್ ಪಾಂಡ್ಯ, ಸಾಂದರ್ಭಿಕವಾಗಿ ವಿಚಿತ್ರವಾದ ಬೌಲಿಂಗ್ ಶೈಲಿಯಲ್ಲಿ ಬ್ಯಾಟ್ಸ್‌ಮನ್‌ಗಳನ್ನು ಗೊಂದಲಕ್ಕೀಡು ಮಾಡುತ್ತಾರೆ. ಈ ಆವೃತ್ತಿಯಲ್ಲಿ ಅದನ್ನು ಸಮಯಕ್ಕೆ ಅನುಸಾರವಾಗಿ ಬಳಸುತ್ತಿರುವ ಕೃನಾಲ್ ಬ್ಯಾಟ್ಸ್‌ಮನ್​ಗಳನ್ನು ಕಟ್ಟಿಹಾಕುವುದರಲ್ಲೂ ಯಶಸ್ವಿಯಾಗುತ್ತಿದ್ದಾರೆ. ಅದರಂತೆ ಸನ್​ರೈಸರ್ಸ್​ ವಿರುದ್ಧದ ಪಂದ್ಯದಲ್ಲೂ ಪಾಂಡ್ಯ ಬೌನ್ಸರ್ ಅಸ್ತ್ರವನ್ನು ಬಳಸಿದರು. ಕೃನಾಲ್ ಈ ಹಿಂದೆ ಈ ರೀತಿಯಾಗಿ ಬೌಲರ್​ಗಳಂತೆ ವೇಗವಾಗಿ ಬೌಲಿಂಗ್ ಮಾಡುವುದನ್ನು ಗಮನಿಸಿರದ ಕಾವ್ಯ ಮಾರನ್ ಒಂದು ಕ್ಷಣ ಅಚ್ಚರಿಗೊಳಗಾದರು.

ಎಸ್​ಆರ್​ಎಚ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ ಎರಡು ಓವರ್‌ಗಳನ್ನು ಬೌಲ್ ಮಾಡಿದ ಕೃನಾಲ್, ತಾವು ಮಾಡಬೇಕಾಗಿದ್ದ ಸ್ಪಿನ್ ಬದಲಿಗೆ ನಾಲ್ಕರಿಂದ ಆರು ಬೌನ್ಸರ್‌ಗಳನ್ನು ಎಸೆದರು. ಈ ವಿಚಿತ್ರ ಬೌಲಿಂಗ್ ಶೈಲಿಯನ್ನು ಡಗೌಟ್​ನಲ್ಲಿ ಕುಳಿತು ನೋಡುತ್ತಿದ್ದ ಸನ್‌ರೈಸರ್ಸ್ ತಂಡದ ಮಾಲೀಕಿ ಕಾವ್ಯ ಮಾರನ್ ಅಚ್ಚರಿಗೊಳಗಾದರು. ಅವರು ಪಕ್ಕದಲ್ಲಿದ್ದ ಖ್ಯಾತ ತೆಲುಗು ನಟ ವಿಕ್ಟರಿ ವೆಂಕಟೇಶ್ ಕಡೆಗೆ ಕೈ ಬೀಸುತ್ತಾ, ‘ಈ ವ್ಯಕ್ತಿ ಏನು ಬೌಲಿಂಗ್ ಮಾಡುತ್ತಿದ್ದಾನೆ? ಇದು ನಿಯಮಗಳಿಗೆ ವಿರುದ್ಧವಲ್ಲವೇ?” ಎಂದು ಕೇಳುತ್ತ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕಾವ್ಯ ಅವರ ಈ ಅಸಮಾಧಾನ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ?

ಹೈದರಾಬಾದ್‌ಗೆ ಭರ್ಜರಿ ಗೆಲುವು

ಕೃನಾಲ್ ಪಾಂಡ್ಯ ತಮ್ಮ ವಿಚಿತ್ರ ಬೌಲಿಂಗ್ ಮೂಲಕ ಹೈದರಾಬಾದ್ ಬ್ಯಾಟ್ಸ್‌ಮನ್‌ಗಳನ್ನು ತಡೆಯಲು ಪ್ರಯತ್ನಿಸಿದರೂ, ತವರಿನಲ್ಲಿ ಎಸ್​ಆರ್​ಎಚ್ ಬ್ಯಾಟ್ಸ್‌ಮನ್‌ಗಳನ್ನು ತಡೆಯಲು ಯಾರಿಗೂ ಸಾಧ್ಯವಾಗಲಿಲ್ಲ. ತಂಡದ ಪರ ಮೂರು ಅರ್ಧಶತಕಗಳು ಸಿಡಿದವು. ಆರಂಭಿಕ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಹಾಗೂ ಹೆನ್ರಿಚ್ ಕ್ಲಾಸೆನ್ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಪರಿಣಾಮವಾಗಿ ಹೈದರಾಬಾದ್‌ 20 ಓವರ್​ಗಳಲ್ಲಿ 255 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಭರ್ಜರಿ ಆರಂಭವನ್ನು ಪಡೆಯಿತ್ತಾದರೂ ಆ ಬಳಿಕ ಸತತ ಮೂರು ವಿಕೆಟ್​ಗಳು ಒಂದರ ಹಿಂದೆ ಒಂದರಂತೆ ಬಿದ್ದ ಬಳಿಕ ತಾಳ್ಮೆಯ ಆಟಕ್ಕೆ ಮುಂದಾಯಿತು. ಅಂತಿಮವಾಗಿ ಅಗ್ರಸ್ಥಾನದಲ್ಲಿ ಉಳಿಯಲು ಎಷ್ಟು ರನ್​ಗಳು ಬೇಕಿತ್ತೋ ಅಷ್ಟು ರನ್​ಗಳ ಗಡಿ ದಾಟುವ ಮೂಲಕ ಆರ್​ಸಿಬಿ ಈ ಪಂದ್ಯವನ್ನು ಸೋತಿತ್ತಾದರೂ ಅಗ್ರಸ್ಥಾನದಲ್ಲಿ ಉಳಿಯುವಲ್ಲಿ ಯಶಸ್ವಿಯಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sat, 23 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ