AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಭಾರತದ ಈ 5 ನಗರಗಳ ಆತಿಥ್ಯ; ಫೈನಲ್ ಪಂದ್ಯಕ್ಕೂ ಸ್ಥಳ ನಿಗದಿ

2026 T20 World Cup host cities 2026ರ ಪುರುಷರ ಟಿ20 ವಿಶ್ವಕಪ್‌ಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯ ವಹಿಸಲಿವೆ. ಭಾರತದಲ್ಲಿ ಅಹಮದಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ, ಮುಂಬೈ ಸೇರಿದಂತೆ 5 ನಗರಗಳು ಪಂದ್ಯಗಳಿಗೆ ಆತಿಥ್ಯ ನೀಡಲಿವೆ. ಶ್ರೀಲಂಕಾದಲ್ಲಿ 3 ಸ್ಥಳಗಳಲ್ಲಿ ಪಂದ್ಯಗಳು ನಡೆಯಲಿವೆ. ಭಾರತ-ಪಾಕಿಸ್ತಾನ ಪಂದ್ಯವು ಶ್ರೀಲಂಕಾದ ತಟಸ್ಥ ಸ್ಥಳದಲ್ಲಿ ನಡೆಯಲಿದೆ. ಐಸಿಸಿ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ.

ಟಿ20 ವಿಶ್ವಕಪ್​ಗೆ ಭಾರತದ ಈ 5 ನಗರಗಳ ಆತಿಥ್ಯ; ಫೈನಲ್ ಪಂದ್ಯಕ್ಕೂ ಸ್ಥಳ ನಿಗದಿ
T20 World Cup
ಪೃಥ್ವಿಶಂಕರ
|

Updated on:Nov 06, 2025 | 3:53 PM

Share

10 ನೇ ಆವೃತ್ತಿಯ ಪುರುಷರ ಟಿ20 ವಿಶ್ವಕಪ್ ( T20 World Cup 2026) ಮುಂದಿನ ವರ್ಷ ಅಂದರೆ 2026 ರಲ್ಲಿ ಭಾರತ ಹಾಗೂ ಶ್ರೀಲಂಕಾದ ( India-Sri Lanka ) ಆತಿಥ್ಯದಲ್ಲಿ ನಡೆಯಲಿದೆ. ಈ ಪಂದ್ಯಾವಳಿಗೆ ಇನ್ನು ವೇಳಾಪಟ್ಟಿ ಪ್ರಕಟವಾಗಿಲ್ಲದಿದ್ದರೂ, ಇಷ್ಟರಲ್ಲೇ ಐಸಿಸಿ (ICC) ವೇಳಾಪಟ್ಟಿಯನ್ನು ಬಹಿರಂಗಪಡಿಸಲಾಗಿದೆ. ಆದಾಗ್ಯೂ ಈ ಪಂದ್ಯಾವಳಿಗೆ ಭಾರತದ ಯಾವ ನಗರಗಳು ಆತಿಥ್ಯವಹಿಸಲಿವೆ ಎಂಬುದನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ವರದಿಯ ಪ್ರಕಾರ 2026 ರ ಟಿ20 ವಿಶ್ವಕಪ್ ಪಂದ್ಯಗಳು ಭಾರತದ ಐದು ನಗರಗಳಲ್ಲಿ ನಡೆಯಲಿವೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಬಿಸಿಸಿಐ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು, ಇದರಲ್ಲಿ 2023 ರ ಏಕದಿನ ವಿಶ್ವಕಪ್‌ಗಿಂತ ಕಡಿಮೆ ನಗರಗಳಲ್ಲಿ 2026 ರ ಟಿ20 ವಿಶ್ವಕಪ್ ಅನ್ನು ಆಯೋಜಿಸಲು ನಿರ್ಧರಿಸಲಾಗಿದೆ.

5 ನಗರಗಳಲ್ಲಿ ಪಂದ್ಯಗಳು

ವರದಿಯ ಪ್ರಕಾರ ಆತಿಥ್ಯವಹಿಸುತ್ತಿರುವ 5 ನಗರಗಳ ಪ್ರತಿ ಸ್ಥಳದಲ್ಲಿಯೂ ಆರು ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಹಾಗೆಯೇ ಭಾರತದ ಐದು ನಗರಗಳಾದ ಅಹಮದಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ ಮತ್ತು ಮುಂಬೈ ಟಿ20 ವಿಶ್ವಕಪ್‌ಗೆ ಆತಿಥ್ಯವಹಿಸಲು ಶಾರ್ಟ್‌ಲಿಸ್ಟ್ ಮಾಡಲಾಗಿದೆ.

ಶ್ರೀಲಂಕಾದ 3 ಸ್ಥಳಗಳಲ್ಲಿ ಪಂದ್ಯಗಳು

ಭಾರತದ ಜೊತೆಗೆ, ಶ್ರೀಲಂಕಾ ಕೂಡ 2026 ರ ಟಿ20 ವಿಶ್ವಕಪ್ ಆಯೋಜಕತ್ವದ ಹಕ್ಕು ಪಡೆದುಕೊಂಡಿದೆ. ಅದರಂತೆ ಶ್ರೀಲಂಕಾದ ಮೂರು ಕ್ರೀಡಾಂಗಣಗಳು ವಿಶ್ವಕಪ್ ಪಂದ್ಯಗಳನ್ನು ಆಯೋಜಿಸುತ್ತವೆ ಎಂದು ನಂಬಲಾಗಿದೆ. ಆದಾಗ್ಯೂ, ಯಾವ ಮೂರು ಸ್ಥಳಗಳು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಸ್ಥಳಗಳಿಗೆ ಆಯೋಜಕತ್ವದ ಹಕ್ಕಿಲ್ಲ

ವರದಿ ಪ್ರಕಾರ, 2023 ರ ಏಕದಿನ ವಿಶ್ವಕಪ್​ಗೆ ಆತಿಥ್ಯ ನೀಡಿದ್ದ ಧರ್ಮಶಾಲಾ, ಪುಣೆ, ಬೆಂಗಳೂರು ಮತ್ತು ಲಕ್ನೋ ಹಾಗೆಯೇ ಇತ್ತೀಚೆಗೆ 2025 ರ ಮಹಿಳಾ ಏಕದಿನ ವಿಶ್ವಕಪ್ ಅನ್ನು ಆಯೋಜಿಸಿದ್ದ ಸ್ಥಳಗಳಾದ ಗುವಾಹಟಿ, ವಿಶಾಖಪಟ್ಟಣಂ, ಇಂದೋರ್ ಮತ್ತು ನವಿ ಮುಂಬೈನಲ್ಲಿ 2026 ರ ಟಿ20 ವಿಶ್ವಕಪ್ ನಡೆಸದಿರಲು ಬಿಸಿಸಿಐ ತೀರ್ಮಾನಿಸಿದೆ.

ವಿಶ್ವಕಪ್ ಮುಗಿದ ಬೆನ್ನಲ್ಲೇ 8 ಲೆಜೆಂಡರಿ ಆಟಗಾರ್ತಿಯರ ವೃತ್ತಿ ಬದುಕಿಗೆ ಫುಲ್​ ಸ್ಟಾಪ್

ತಟಸ್ಥ ಸ್ಥಳದಲ್ಲಿ ಭಾರತ- ಪಾಕ್ ಪಂದ್ಯ

ಈ ಮುಂಚೆಯೇ ಆಗಿರುವ ಒಪ್ಪಂದದ ಪ್ರಕಾರ ಟಿ20 ವಿಶ್ವಕಪ್ ಆಡಲು ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಹೀಗಾಗಿ ಉಭಯ ತಂಡಗಳ ಈ ಪಂದ್ಯ ಶ್ರೀಲಂಕಾದಲ್ಲಿ ನಡೆಯಲಿದೆ. ಒಂದು ವೇಳೆ ಪಾಕಿಸ್ತಾನ ತಂಡ ನಾಕೌಟ್ ಸುತ್ತಿಗೆ ಅಂದರೆ ಸೆಮಿಫೈನಲ್ ಹಾಗೂ ಫೈನಲ್​ಗೆ ಅರ್ಹತೆ ಪಡೆದರೆ, ಆ ಪಂದ್ಯಗಳನ್ನು ಸಹ ಶ್ರೀಲಂಕಾದಲ್ಲಿ ನಡೆಸಲಾಗುವುದು. ಈಗಾಗಲೇ ಈ ಟೂರ್ನಿಗೆ 20 ತಂಡಗಳು ಅರ್ಹತೆ ಪಡೆದಿದ್ದು, ಈ ಪಂದ್ಯಾವಳಿಯು ಮುಂದಿನ ವರ್ಷ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Thu, 6 November 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ