AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಟು ಪುಣೆ: ಅತೀ ವೇಗದಲ್ಲಿ ಕಾರು ಚಲಾಯಿಸಿದ ರೋಹಿತ್ ಶರ್ಮಾಗೆ 3 ಬಾರಿ ದಂಡ..!

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ಮುಂಬೈ ಟು ಪುಣೆ: ಅತೀ ವೇಗದಲ್ಲಿ ಕಾರು ಚಲಾಯಿಸಿದ ರೋಹಿತ್ ಶರ್ಮಾಗೆ 3 ಬಾರಿ ದಂಡ..!
Rohit Sharma
TV9 Web
| Edited By: |

Updated on: Oct 18, 2023 | 9:54 PM

Share

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಗಂಟೆಗಳ ಒಳಗೆ ಮೂರು ಬಾರಿ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಮುಂಬೈನಿಂದ ಪುಣೆಗೆ ಪ್ರಯಾಣಿಸುವಾಗ ಹಿಟ್​ಮ್ಯಾನ್ ಅತೀ ವೇಗದಲ್ಲಿ ಕಾರು ಚಲಾಯಿಸಿದ್ದು, ಹೀಗಾಗಿ ಮೂರು ಬಾರಿ ಫೈನ್ ಹಾಕಲಾಗಿದೆ ಎಂದು ವರದಿಯಾಗಿದೆ.

ತಮ್ಮ ನೀಲಿ ಬಣ್ಣದ ಲಂಬೋರ್ಗಿನಿಯಲ್ಲಿ ರೋಹಿತ್ ಶರ್ಮಾ ಮುಂಬೈನಿಂದ ಪುಣೆಗೆ ತೆರಳಿದ್ದರು. ಈ ವೇಳೆ ಗಂಟೆಗೆ 200 ಕಿ.ಮೀ ಕಾರು ಚಲಾಯಿಸಿದ್ದರು. ಇದು ಕೆಲವೊಮ್ಮೆ ಕೆಲವೊಮ್ಮೆ ಗಂಟೆಗೆ 215 ಕಿಮೀ ತಲುಪಿತ್ತು. ಪರಿಣಾಮವಾಗಿ, ಅವರ ವಾಹನದ ನಂಬರ್ ಪ್ಲೇಟ್‌ಗೆ ಮೂರು ಆನ್‌ಲೈನ್ ಟ್ರಾಫಿಕ್ ಚಲನ್‌ಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಬಳಿಕ ರೋಹಿತ್ ಶರ್ಮಾ ಹೆಲಿಕಾಪ್ಟರ್ ಮೂಲಕ ಅಹಮದಾಬಾದ್‌ನಿಂದ ನೇರವಾಗಿ ಮುಂಬೈಗೆ ತೆರಳಿದ್ದರು. ಕುಟುಂಬದೊಂದಿಗೆ ಎರಡು ದಿನಗಳನ್ನು ಕಳೆದ ನಂತರ, ಭಾರತೀಯ ನಾಯಕ ಪುಣೆಗೆ ತೆರಳಲು ನಿರ್ಧರಿಸಿದ್ದರು. ಅದರಂತೆ ತಮ್ಮ ಕಾರಿನಲ್ಲಿ ಅತೀ ವೇಗವಾಗಿ ಡ್ರೈವ್ ಮಾಡಿ ಇದೀಗ ತೊಂದರೆಗೆ ಸಿಲುಕಿದ್ದಾರೆ.

ಇದಾಗ್ಯೂ ರೋಹಿತ್ ಶರ್ಮಾ ಬಾಂಗ್ಲಾದೇಶ್ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಟ್ರಾಫಿಕ್ ಅಧಿಕಾರಿಯ ಮಾಹಿತಿ ಪ್ರಕಾರ, ಮೂರು ಚಲನ್​ಗೆ ವಿಧಿಸಲಾದ ದಂಡವನ್ನು ಮಾತ್ರ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತ-ಬಾಂಗ್ಲಾ ಪಂದ್ಯ:

ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 40 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 31 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ತಂಡ 8 ಬಾರಿ ಗೆಲುವು ಕಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಬಾಂಗ್ಲಾದೇಶ್ ತಂಡ: ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ, ತಂಝಿದ್ ಹಸನ್, ತೌಹಿದ್ ಹೃದೋಯ್, ಮಹಮ್ಮದುಲ್ಲಾ ರಿಯಾದ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಝ್, ಮಹೇದಿ ಹಸನ್, ತಂಝಿಮ್ ಸಾಕಿಬ್, ನಸುಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹದೂದ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.

ಇದನ್ನೂ ಓದಿ: ಹಳೆಯ ದಾಖಲೆಗಳು ಉಡೀಸ್: ಹೊಸ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ