AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಟ್ರಿಕ್ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್

Vijay Hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ತಂಡವು ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈವರೆಗೆ ಆಡಿರುವ 4 ಪಂದ್ಯಗಳಲ್ಲೂ ಜಯ ಸಾಧಿಸಿರುವ ಕರ್ನಾಟಕ ಗ್ರೂಪ್-ಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಕರ್ನಾಟಕ 300 ಕ್ಕೂ ಅಧಿಕ ರನ್ ಕಲೆಹಾಕಿ ಗೆಲುವಿನ ನಿರೀಕ್ಷೆಯಲ್ಲಿದೆ.

ಹ್ಯಾಟ್ರಿಕ್ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್
Mayank Agarwal
ಝಾಹಿರ್ ಯೂಸುಫ್
|

Updated on:Dec 31, 2024 | 12:54 PM

Share

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಅವರ ಸಿಡಿಲಬ್ಬರ ಮುಂದುವರೆದಿದೆ. ಪಂಜಾಬ್ ಮತ್ತು ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಮಯಾಂಕ್ ಇದೀಗ ಮೂರನೇ ಸೆಂಚುರಿ ಬಾರಿಸಿದ್ದಾರೆ. ಅಹಮಾದಾಬಾದ್​ನಲ್ಲಿ ನಡೆಯುತ್ತಿರುವ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ಅನುಭವಿ ಆಟಗಾರ 2 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 112 ಎಸೆತಗಳಲ್ಲಿ 124 ರನ್ ಬಾರಿಸಿದರು. ಈ ಮೂಲಕ ಪ್ರಸ್ತುತ ವಿಜಯ ಹಝಾರೆ ಟೂರ್ನಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಶತಕ ಸಿಡಿಸಿದ ಹಿರಿಮೆಗೆ ಪಾತ್ರರಾದರು.

ಇದಕ್ಕೂ ಮುನ್ನ ಪಂಜಾಬ್ ವಿರುದ್ಧ 127 ಎಸೆತಗಳಲ್ಲಿ 139 ರನ್ ಬಾರಿಸಿದ್ದರು. ಇನ್ನು ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 45 ಎಸೆತಗಳಲ್ಲಿ ಅಜೇಯ 100 ರನ್ ಚಚ್ಚಿದ್ದರು. ಇದೀಗ ಹೈದರಾಬಾದ್ ವಿರುದ್ಧ ಕೂಡ ಮೂರಂಕಿ ಮೊತ್ತ ಕಲೆಹಾಕಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್​ಗೆ ಉತ್ತಮ ಸಾಥ್ ನೀಡಿದ ಸ್ಮರಣ್ 75 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 83 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 320 ರನ್ ಕಲೆಹಾಕಿದೆ. ಈ ಮೂಲಕ ಹೈದರಾಬಾದ್ ತಂಡಕ್ಕೆ 321 ರನ್​​ಗಳ ಗುರಿ ನೀಡಿದೆ.

ಹೈದರಾಬಾದ್ ಪ್ಲೇಯಿಂಗ್ 11: ತನ್ಮಯ್ ಅಗರ್ವಾಲ್ , ತಿಲಕ್ ವರ್ಮಾ (ನಾಯಕ) , ಕೋಡಿಮೇಲ ಹಿಮತೇಜ , ಅರವಲ್ಲಿ ಅವನೀಶ್ (ವಿಕೆಟ್ ಕೀಪರ್) , ಕೆ ನಿತೇಶ್ ರೆಡ್ಡಿ , ತನಯ್ ತ್ಯಾಗರಾಜನ್ , ರೋಹಿತ್ ರಾಯುಡು , ಏಲ್ಗಾನಿ ವರುಣ್ ಗೌಡ್ , ಚಾಮ ವಿ ಮಿಲಿಂದ್ , ಮೊಹಮ್ಮದ್ ಮುದ್ದಸ್ಸಿರ್ , ಅನಿಕೇತ್ ರೆಡ್ಡಿ.

ಇದನ್ನೂ ಓದಿ: ಬುಮ್ರಾ ಬೂಮ್ ಬೂಮ್​ಗೆ ಪಾಕ್ ವೇಗಿಯ ಸರ್ವಶ್ರೇಷ್ಠ ದಾಖಲೆ ಶೇಕಿಂಗ್..!

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಅಭಿನವ್ ಮನೋಹರ್ , ನಿಕಿನ್ ಜೋಸ್ , ಸ್ಮರಣ್ ರವಿಚಂದ್ರನ್ , ಶ್ರೇಯಸ್ ಗೋಪಾಲ್ , ಅನೀಶ್ ಕೆ ವಿ , ಅಭಿಲಾಷ್ ಶೆಟ್ಟಿ , ಪ್ರವೀಣ್ ದುಬೆ , ವಾಸುಕಿ ಕೌಶಿಕ್ , ವಿದ್ಯಾಧರ್ ಪಾಟೀಲ್.

Published On - 12:53 pm, Tue, 31 December 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್