AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಮನೆ ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್ಸ್: ಸಿಬ್ಬಂದಿಗಳು ತಬ್ಬಿಬ್ಬು..!

Virat Kohli Ranji Trophy: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿ ಪಂದ್ಯದಲ್ಲಿ ದೆಹಲಿ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರೈಲ್ವೇಸ್ ತಂಡ 241 ರನ್​ ಕಲೆಹಾಕಿದರೆ, ದೆಹಲಿ 374 ರನ್ ಪೇರಿಸಿತು. ಇದಕ್ಕುತ್ತರವಾಗಿ ದ್ವಿತೀಯ ಇನಿಂಗ್ಸ್ ಆರಂಭಿಸಿದ ರೈಲ್ವೇಸ್ ತಂಡವು ಕೇವಲ 114 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ 12 ವರ್ಷಗಳ ಬಳಿಕ ರಣಜಿ ಪಂದ್ಯವಾಡಿರುವ ವಿರಾಟ್ ಕೊಹ್ಲಿ ಗೆಲುವಿನ ನಗೆ ಬೀರಿದ್ದಾರೆ.

ಒಂದೇ ಸಮನೆ ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್ಸ್: ಸಿಬ್ಬಂದಿಗಳು ತಬ್ಬಿಬ್ಬು..!
Virat Kohli
ಝಾಹಿರ್ ಯೂಸುಫ್
|

Updated on: Feb 01, 2025 | 2:53 PM

Share

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಮತ್ತು ರೈಲ್ವೇಸ್ ತಂಡಗಳ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಗಳು ಮೈದಾನಕ್ಕೆ ನುಗ್ಗಿದ್ದಾರೆ. ಈ ಪಂದ್ಯದ ಮೂರನೇ ದಿನದಾಟದಲ್ಲಿ ರೈಲ್ವೇಸ್ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭ ಮೂವರು ಅಭಿಮಾನಿಗಳು ಒಂದೇ ಸಮನೆ ಮೈದಾನಕ್ಕೆ ನುಗ್ಗಿದ್ದಾರೆ.

ಇತ್ತ ಒಂದೇ ಬಾರಿ ಮೂವರು ಅಭಿಮಾನಿಗಳು ಮೈದಾನಕ್ಕೆ ಜಿಗಿದಿದ್ದರಿಂದ ಸಿಬ್ಬಂದಿಗಳು ಯಾರನ್ನು ಹಿಡಿಯಬೇಕೆಂದು ಗೊಂದಲಕ್ಕೀಡಾದರು. ಅಷ್ಟರಲ್ಲಾಗಲೇ ಮೂವರು ಅಭಿಮಾನಿಗಳು ವಿರಾಟ್ ಕೊಹ್ಲಿ ಬಳಿಗೆ ತಲುಪಿ ಅವರ ಕಾಲಿಗೆ ನಮಿಸಿದ್ದಾರೆ.

ಇದರ ನಡುವೆ ಕೆಲ ಅಭಿಮಾನಿಗಳು ಮೈದಾನಕ್ಕೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿಗಳು ಏಟಿ ರುಚಿ ತೋರಿಸಿ, ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲಿಗೆ ನಮಿಸಿದ ಅಭಿಮಾನಿಗಳ ವಿಡಿಯೋ ವೈರಲ್ ಆಗಿದೆ.

ವಿರಾಟ್ ಕೊಹ್ಲಿ ಅಭಿಮಾನಿಗಳ ವಿಡಿಯೋ:

ಇದಕ್ಕೂ ಮುನ್ನ ಈ ಪಂದ್ಯದ ಮೊದಲ ದಿನದಾಟದಂತು ಅಭಿಮಾನಿಯೋರ್ವ ಮೈದಾನಕ್ಕೆ ನುಗಿದ್ದ. ವಿರಾಟ್ ಕೊಹ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಓಡಿ ಹೋದ ಯುವಕನೊಬ್ಬ ನೇರವಾಗಿ ಅವರ ಕಾಲಿಗೆ ಎರಗಿದ್ದ. ಇದೀಗ ಮತ್ತೆ ಅಭಿಮಾನಿಗಳು ಮೈದಾನಕ್ಕೆ ನುಗ್ಗುವ ಮೂಲಕ ಪಂದ್ಯಕ್ಕೆ ಅಡಚಣೆಯನ್ನು ಉಂಟು ಮಾಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರೈಲ್ವೇಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 241 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ದೆಹಲಿ ಪರ ವಿರಾಟ್ ಕೊಹ್ಲಿ ಕೇವಲ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಉಳಿದ ಬ್ಯಾಟರ್​​ಗಳ ಉತ್ತಮ ಪ್ರದರ್ಶನದೊಂದಿಗೆ ದೆಹಲಿ ತಂಡ ಮೊದಲ ಇನಿಂಗ್ಸ್​ನಲ್ಲಿ 374 ರನ್​ ಕಲೆಹಾಕಿದೆ.

ಇದೀಗ ದ್ವಿತೀಯ ಇನಿಂಗ್ಸ್ ರೈಲ್ವೇಸ್ ತಂಡವು ಕೇವಲ 114 ರನ್​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 133 ರನ್​ಗಳ ಮುನ್ನಡೆ ಹೊಂದಿದ್ದ ದೆಹಲಿ ತಂಡವು ಇನಿಂಗ್ಸ್ ಹಾಗೂ 19 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ದೆಹಲಿ (ಪ್ಲೇಯಿಂಗ್ XI): ಅರ್ಪಿತ್ ರಾಣಾ, ಸನತ್ ಸಾಂಗ್ವಾನ್, ವಿರಾಟ್ ಕೊಹ್ಲಿ, ಯಶ್ ಧುಲ್, ಆಯುಷ್ ಬದೋನಿ (ನಾಯಕ), ಪ್ರಣವ್ ರಾಜುವಂಶಿ (ವಿಕೆಟ್ ಕೀಪರ್), ಸುಮಿತ್ ಮಾಥುರ್, ಶಿವಂ ಶರ್ಮಾ, ನವದೀಪ್ ಸೈನಿ, ಮನಿ ಗ್ರೇವಾಲ್, ಸಿದ್ಧಾಂತ್ ಶರ್ಮಾ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

ರೈಲ್ವೇಸ್ (ಪ್ಲೇಯಿಂಗ್ XI): ಅಂಚಿತ್ ಯಾದವ್, ವಿವೇಕ್ ಸಿಂಗ್, ಸೂರಜ್ ಅಹುಜಾ (ನಾಯಕ), ಉಪೇಂದ್ರ ಯಾದವ್ (ವಿಕೆಟ್ ಕೀಪರ್), ಮೊಹಮ್ಮದ್ ಸೈಫ್, ಭಾರ್ಗವ್ ಮೆರಾಯ್, ಕರ್ಣ್ ಶರ್ಮಾ, ರಾಹುಲ್ ಶರ್ಮಾ, ಹಿಮಾಂಶು ಸಾಂಗ್ವಾನ್, ಅಯಾನ್ ಚೌಧರಿ, ಕುನಾಲ್ ಯಾದವ್.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'