AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಗೌತಮ್ ಗಂಭೀರ್ ಮುಂದಿದೆ 4 ಬಿಗ್ ಟಾಸ್ಕ್

Gautam Gambhir: ಗೌತಮ್ ಗಂಭೀರ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಇಲ್ಲಿ ಗಂಭೀರ್ ಅವರ ಕಾರ್ಯಾವಧಿ 2024 ರಿಂದ 2027. ಈ ಅವಧಿಯಲ್ಲಿ ನಾಲ್ಕು ಐಸಿಸಿ ಟೂರ್ನಿಗಳು ನಡೆಯಲಿದೆ. ಈ ಟೂರ್ನಿಗಳೇ ಭಾರತ ತಂಡದ ನೂತನ ಕೋಚ್ ಮುಂದಿರುವ ದೊಡ್ಡ ಸವಾಲುಗಳು. ಈ ಸವಾಲುಗಳಲ್ಲಿ ವಿಫಲರಾದರೆ ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾದ ಕೋಚ್ ಆಗಿ ಮುಂದುವರೆಯುವ ಸಾಧ್ಯತೆಯಿಲ್ಲ

Gautam Gambhir: ಗೌತಮ್ ಗಂಭೀರ್ ಮುಂದಿದೆ 4 ಬಿಗ್ ಟಾಸ್ಕ್
Gautam Gambhir
ಝಾಹಿರ್ ಯೂಸುಫ್
|

Updated on:Jul 10, 2024 | 7:45 AM

Share

ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಈ ಆಯ್ಕೆಯೊಂದಿಗೆ ನೂತನ ಕೋಚ್ ಗೆ ಬಿಸಿಸಿಐ ನಾಲ್ಕು ಬಿಗ್ ಟಾಸ್ಕ್ ಗಳನ್ನು ನೀಡಿದ್ದಾರೆ. ಆ ಟಾಸ್ಕ್ ಗಳೆಂದರೆ ಐಸಿಸಿ ಟ್ರೋಫಿಗಳು. ಅಂದರೆ ಗೌತಮ್ ಗಂಭೀರ್ ಅವರನ್ನು ಮುಂದಿನ ಮೂರು ವರ್ಷಗಳಿಗಾಗಿ ಆಯ್ಕೆ ಮಾಡಲಾಗಿದೆ. ಈ ಮೂರು ವರ್ಷಗಳಲ್ಲಿ ಭಾರತ ತಂಡವು 4 ಐಸಿಸಿ ಟೂರ್ನಿಗಳನ್ನು ಆಡಲಿದೆ. ಅದರಲ್ಲೂ ಮುಂದಿನ ವರ್ಷವೇ ಟೀಮ್ ಇಂಡಿಯಾ ಎರಡು ಐಸಿಸಿ ಟೂರ್ನಮೆಂಟ್ ನಲ್ಲಿ ಕಣಕ್ಕಿಳಿಯಲಿದೆ.

2025ರ ಫೆಬ್ರವರಿ ತಿಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಏಕದಿನ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತ ಸೇರಿದಂತೆ ಒಟ್ಟು 8 ತಂಡಗಳು ಕಣಕ್ಕಿಯಲಿವೆ. ಇದುವೇ ಗಂಭೀರ್ ಮುಂದಿರುವ ಮೊದಲ ದೊಡ್ಡ ಸವಾಲು. ಈಗಾಗಲೇ ಟಿ20 ವಿಶ್ವಕಪ್ ಗೆದ್ದಿರುವ ಟೀಮ್ ಇಂಡಿಯಾ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ಏಕೆಂದರೆ 2013 ರ ಬಳಿಕ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದಿಲ್ಲ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ಈ ಟೂರ್ನಿಯಲ್ಲಿನ ಭಾರತ ತಂಡದ ಪ್ರದರ್ಶನ ಗೌತಮ್ ಗಂಭೀರ್ ಅವರ ಕೋಚಿಂಗ್ ಚಾಕಚಕ್ಯತೆಯನ್ನು ತೆರೆದಿಡಲಿದೆ. ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಸ್ ಶಿಪ್ ಕೂಡ ನಡೆಯಲಿದೆ.

ಜೂನ್ 2025 ರಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ಸ್‌ನಲ್ಲಿ ಭಾರತ ತಂಡ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅತ್ತ ಕಳೆದ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಿರುವ ಟೀಮ್ ಇಂಡಿಯಾಗೆ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಗಂಭೀರ್ ಮುಂದಾಳತ್ವದಲ್ಲಿ ಈ ಬರ ನೀಗಿಸಿಕೊಳ್ಳುವುದನ್ನು ಬಿಸಿಸಿಐ ಎದುರು ನೋಡುತ್ತಿದೆ.

ಇನ್ನು 2026 ರಲ್ಲಿ ಟಿ20 ವಿಶ್ವಕಪ್ ಕೂಡ ಜರುಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ವಿಶ್ವಕಪ್ ಬಿಸಿಸಿಐ ಪಾಲಿಗೆ ಪ್ರತಿಷ್ಠತೆಯಾಗಿದೆ. ಏಕೆಂದರೆ ಭಾರತ ತಂಡವು ಈವರೆಗೆ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದಿಲ್ಲ. ಇದೀಗ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡವನ್ನು ಚಾಂಪಿಯನ್ ಪಟ್ಟದಲ್ಲೇ ಉಳಿಸುವುದು ಗಂಭೀರ್ ಅವರ ಮುಂದಿರುವ ದೊಡ್ಡ ಸವಾಲು.

ಹಾಗೆಯೇ ಗೌತಮ್ ಗಂಭೀರ್ ಅವರಿಗೆ ನೀಡಲಾದ ಕೊನೆಯ ಟಾಸ್ಕ್ 2027ರ ಏಕದಿನ ವಿಶ್ವಕಪ್. ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಭಾರತ ತಂಡವು ಏಕದಿನ ವಿಶ್ವಕಪ್ ಗೆದ್ದು ಬರೋಬ್ಬರಿ 13 ವರ್ಷಗಳೇ ಕಳೆದಿವೆ. 2011 ರಲ್ಲಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಬಳಿಕ ಟೀಮ್ ಇಂಡಿಯಾ ಪಾಲಿಗೆ ಏಕದಿನ ವಿಶ್ವಕಪ್ ಮರೀಚಿಕೆಯಾಗಿ ಉಳಿದಿದೆ.

ಹೀಗಾಗಿ 2027 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವುದನ್ನು ಭಾರತ ತಂಡ ಎದುರು ನೋಡುತ್ತಿದೆ. ಈ ವಿಶ್ವಕಪ್​ನೊಂದಿಗೆ ಗಂಭೀರ್ ಅವರ ಕಾರ್ಯಾವಧಿ ಸಹ ಮುಗಿಯಲಿದೆ. ಅಂದರೆ ಗೌತಮ್ ಗಂಭೀರ್ ಅವರನ್ನು 3 ವರ್ಷಗಳ ಬಳಿಕ ಕೋಚ್ ಆಗಿ ಮುಂದುವರೆಸಬೇಕಿದ್ದರೆ ಈ ಮೂರು ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಂದರಲ್ಲಾದರೂ ಚಾಂಪಿಯನ್ ಪಟ್ಟ ಅಲಂಕರಿಸಬೇಕು.

ಇದನ್ನೂ ಓದಿ: ಮಳೆ ಬಂದರೂ ನೋ ಟೆನ್ಶನ್… ಆಸ್ಟ್ರೇಲಿಯಾದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ

ಅದರಲ್ಲೂ 2027ರ ಏಕದಿನ ವಿಶ್ವಕಪ್‌ನಲ್ಲಿನ ಭಾರತ ತಂಡ ಪ್ರದರ್ಶನದ ಬಳಿಕ ಗೌತಮ್ ಗಂಭೀರ್ ಅವರ ಕೋಚಿಂಗ್ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ಮುಂದಿನ ಮೂರು ವರ್ಷ ಭಾರತ ತಂಡದ ನೂತನ ಕೋಚ್ ಪಾಲಿಗೆ ಅಗ್ನಿ ಪರೀಕ್ಷೆ ಎಂದರೂ ತಪ್ಪಾಗಲಾರದು.

Published On - 7:42 am, Wed, 10 July 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ