AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್​ಮೆನ್ಸ್​ಗೆ 48 ಲಕ್ಷ ರೂ. ಬಹುಮಾನ

IPL 2022: ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಬ್ರಬೋರ್ನ್ ಸ್ಟೇಡಿಯಂ), ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಮುಂಬೈನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂಗೆ ತಲಾ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದರು.

IPL 2022: ಐಪಿಎಲ್​ನಲ್ಲಿ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್​ಮೆನ್ಸ್​ಗೆ 48 ಲಕ್ಷ ರೂ. ಬಹುಮಾನ
IPL
TV9 Web
| Edited By: |

Updated on: Jun 22, 2022 | 3:08 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಸೀಸನ್ 15 ರಲ್ಲಿ ದಣಿವರಿಯದೇ ಕೆಲಸ ಮಾಡಿದ 48 ಗ್ರೌಂಡ್ಸ್‌ಮೆನ್‌ಗಳಿಗೆ ಬಹುಮಾನ ನೀಡಲು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ನಿರ್ಧರಿಸಿದೆ . ಕೊರೊನಾ ಸಾಂಕ್ರಾಮಿಕ ರೋಗದ ಭೀತಿ ಹಿನ್ನೆಲೆಯಲ್ಲಿ, ಬಿಸಿಸಿಐ ಈ ಬಾರಿ ಮುಂಬೈ-ಪುಣೆಯಲ್ಲಿ ಐಪಿಎಲ್​ನ ಲೀಗ್ ಪಂದ್ಯಗಳನ್ನು ಆಯೋಜಿಸಿತ್ತು. ಈ ವೇಳೆ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್‌ಮೆನ್‌ಗಳಿಗೆ ತಲಾ 1 ಲಕ್ಷ ರೂಪಾಯಿ ನೀಡಲು ಎಂಸಿಎ ಮುಂದಾಗಿದೆ. ಈಗಾಗಲೇ ಈ ಬಗ್ಗೆ ಚರ್ಚಿಸಲಾಗಿದ್ದು, ಎಂಸಿಎಯ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಿದೆ.

ಈ ಬಾರಿಯ ಐಪಿಎಲ್​ ಮುಂಬೈನ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಪುಣೆಯ ಎಂಸಿಎ ಸ್ಟೇಡಿಯಂ ಹಾಗೂ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಿತು. ಈ ವೇಳೆ 48 ಗ್ರೌಂಡ್ಸ್​ಮೆನ್​ಗಳು ದಣಿವರಿಯದೇ ಕೆಲಸ ಮಾಡಿದ್ದರು. ಐಪಿಎಲ್ ವೇಳೆ ಅನೇಕ ಸಿಬ್ಬಂದಿಗಳು ಅಭ್ಯಾಸ ಮತ್ತು ಪಂದ್ಯದ ಪಿಚ್ ತಯಾರಿಗಾಗಿ ರಾತ್ರಿಯ ಪಾಳಿಯಲ್ಲೂ ಕಾರ್ಯ ನಿರ್ವಹಿಸಿದ್ದರು. ಏಪ್ರಿಲ್-ಮೇ ಬಿಸಿಲಿನ ತಾಪದಲ್ಲಿ ದೈನಂದಿನ ಪಂದ್ಯಗಳು ನಡೆಯುತ್ತಿದ್ದರೂ ಪಿಚ್‌ಗಳ ಬಗ್ಗೆ ಒಂದೇ ಒಂದು ದೂರು ಬಂದಿಲ್ಲ ಎಂದು ಎಂಸಿಎ ಸಂತಸ ವ್ಯಕ್ತಪಡಿಸಿದೆ. ಹೀಗಾಗಿ ಗ್ರೌಂಡ್ಸ್‌ಮೆನ್‌ಗಳ ಶ್ರಮಕ್ಕೆ ವಿಶೇಷ ಪ್ರತಿಫಲವಾಗಿ ಬಹುಮಾನ ಮೊತ್ತವನ್ನು ನೀಡಲು ಮುಂಬೈ ಕ್ರಿಕೆಟ್ ಸಂಸ್ಥೆ ಮುಂದಾಗುತ್ತಿದೆ.

ಇನ್ನು ಐಪಿಎಲ್ ಸಮಯದಲ್ಲಿ, ಎಂಸಿಎ ಖಾಸಗಿ ಕಂಪನಿ ಕ್ಯಾಡ್ಬರಿಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಇದರಿಂದ ಕೂಡ ಮುಂಬೈ ಕ್ರಿಕೆಟ್​ ಸಂಸ್ಥೆಗೆ ಉತ್ತಮ ಆದಾಯ ಬಂದಿದೆ. ಇದಲ್ಲದೇ ಪಂದ್ಯದ ದಿನಗಳಲ್ಲಿ ಗ್ರೌಂಡ್ಸ್‌ಮನ್‌ಗೆ ತಂಗಲು ಮತ್ತು ಪ್ರಯಾಣಿಸಲು ಕ್ಯಾಡ್ಬರಿ ಕಂಪನಿಯು ವ್ಯವಸ್ಥೆ ಮಾಡಿತ್ತು. ಇದೀಗ ಹೆಚ್ಚುವರಿಯಾಗಿ ತಲಾ ಒಂದು ಲಕ್ಷ ರೂ. ನೀಡುವುದಾಗಿ ಮುಂಬೈ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಬಿಸಿಸಿಐ ಉಡುಗೊರೆ: ಐಪಿಎಲ್ 2022 ರ ನಂತರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕ್ಯುರೇಟರ್ ಮತ್ತು ಗ್ರೌಂಡ್ಸ್‌ಮೆನ್‌ಗಳಿಗೆ ಬಹುಮಾನವನ್ನು ಘೋಷಿಸಿದ್ದರು. ಕ್ಯುರೇಟರ್ ಮತ್ತು ಗ್ರೌಂಡ್ಸ್‌ಮೆನ್‌ಗೆ 1.25 ಕೋಟಿ ರೂಪಾಯಿಗಳನ್ನು ಬಹುಮಾನವಾಗಿ ನೀಡುವುದಾಗಿ ಬಿಸಿಸಿಐ ಟ್ವಿಟರ್‌ನಲ್ಲಿ ತಿಳಿಸಿತ್ತು. ಅಲ್ಲದೆ ಆರು ಕ್ರೀಡಾಂಗಣಗಳಿಗೆ ವಿವಿಧ ಬಹುಮಾನದ ಮೊತ್ತವನ್ನು ಘೋಷಿಸಲಾಗಿತ್ತು. ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಬ್ರಬೋರ್ನ್ ಸ್ಟೇಡಿಯಂ), ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಮುಂಬೈನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂಗೆ ತಲಾ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದರು.

ಹಾಗೆಯೇ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮತ್ತು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ತಲಾ 12.5 ಲಕ್ಷ ರೂಪಾಯಿ ನೀಡುವ ಬಗ್ಗೆ ಚರ್ಚೆ ನಡೆದಿದೆ. ಏಕೆಂದರೆ ಐಪಿಎಲ್ 2022 ರ ಕ್ವಾಲಿಫೈಯರ್-ಎಲಿಮಿನೇಟರ್ ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆದಿದ್ದವು. ಹಾಗೆಯೇ ಫೈನಲ್ ಪಂದ್ಯವು ಅಹಮದಾಬಾದ್ ಮೈದಾನದಲ್ಲಿ ನಡೆಯಿತು. ಹೀಗಾಗಿ ಈ ಸ್ಟೇಡಿಯಂಗಳಿಗೂ ಅನುದಾನ ನೀಡಲು ಬಿಸಿಸಿಐ ಮುಂದಾಗಿದೆ. ಹಾಗೆಯೇ ಐಪಿಎಲ್​ ನಡೆದ ಮೈದಾನದಲ್ಲಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಬಿಸಿಸಿಐ 1.25 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಇದರ ಹೊರತಾಗಿ ಇದೀಗ ಮುಂಬೈ ಕ್ರಿಕೆಟ್ ಸಂಸ್ಥೆಯು ತನ್ನ ಅಧೀನದಲ್ಲಿರುವ ಸ್ಟೇಡಿಯಂನಲ್ಲಿ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್​​ಮೆನ್​ಗಳಿಗೆ ತಲಾ ಒಂದೊಂದು ಲಕ್ಷ ರೂ. ನೀಡಲು ಮುಂದಾಗಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು