AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾವನ್ನು ವೈಟ್​ವಾಶ್ ಮಾಡಿ ಕಳಿಸ್ತೀವಿ: ನಾಥನ್ ಲಿಯಾನ್

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, 2ನೇ ಪಂದ್ಯಕ್ಕೆ ಅಡಿಲೇಡ್ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿದೆ. ಅಂದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ.

ಟೀಮ್ ಇಂಡಿಯಾವನ್ನು ವೈಟ್​ವಾಶ್ ಮಾಡಿ ಕಳಿಸ್ತೀವಿ: ನಾಥನ್ ಲಿಯಾನ್
Nathan Lyon
ಝಾಹಿರ್ ಯೂಸುಫ್
|

Updated on: Sep 18, 2024 | 12:45 PM

Share

ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ವೈಟ್​ವಾಶ್​ನಲ್ಲೇ ಸೋಲಿಸುತ್ತೀವಿ. ಹೀಗಂದಿರುವುದು ಮತ್ಯಾರೂ ಅಲ್ಲ, ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್. ಪಾಡ್​ಕಾಸ್ಟ್​ವೊಂದರಲ್ಲಿ ಮಾತನಾಡಿದ ಲಿಯಾನ್ ಈ ಸಲ ಆಸ್ಟ್ರೇಲಿಯಾ ತಂಡವು ಭಾರತವನ್ನು 5-0 ಅಂತರದಿಂದ ಸೋಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ನಾವು ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದು ಹತ್ತು ವರ್ಷಗಳಾಗಿವೆ. ಭಾರತ – ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಬಳಿಕ ನಾನು ಈ ಬಗ್ಗೆ ಯೋಚಿಸಲು ಆರಂಭಿಸಿದ್ದೇನೆ. ಇದೀಗ ಈ ಸರಣಿಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಏಕೆಂದರೆ ನಾನು ಟೆಸ್ಟ್ ಪಂದ್ಯವನ್ನು ಪ್ರೀತಿಸುತ್ತೇನೆ. ಅಲ್ಲದೆ ಯೋಗ್ಯವಾದ ಟೆಸ್ಟ್ ಪಂದ್ಯವಾಡುವುದನ್ನು ಎದುರು ನೋಡುತ್ತಿದ್ದೇನೆ. ಹೀಗಾಗಿಯೇ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮೇಲೆ ಬಹಳ ಸಮಯದಿಂದ ಕಣ್ಣಿಟ್ಟಿದ್ದೇನೆ ಎಂದು ವಿಲೋ ಟಾಕ್ ಪಾಡ್‌ಕ್ಯಾಸ್ಟ್‌ನಲ್ಲಿ ನಾಥನ್ ಲಿಯಾನ್ ಹೇಳಿದ್ದಾರೆ.

ಮಾತು ಮುಂದುವರೆಸಿದ ನಾಥನ್ ಲಿಯಾನ್, ಈ ಸಲ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯನ್ನು ನಾವೇ ಗೆಲ್ಲುತ್ತೇವೆ. ಅದು ಸಹ 5-0 ಅಂತರದಿಂದ ಗೆಲ್ಲಲಿದ್ದೇವೆ. ಟೀಮ್ ಇಂಡಿಯಾವನ್ನು ಈ ಸಲ ವೈಟ್ ವಾಶ್​ನೊಂದಿಗೆ ಸೋಲಿಸಿ ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಎತ್ತಿ ಹಿಡಿಯಲಿದೆ ಎಂದು ಲಿಯಾನ್ ಭವಿಷ್ಯ ನುಡಿದಿದ್ದಾರೆ.

ಅಂದಹಾಗೆ ಆಸ್ಟ್ರೇಲಿಯಾ ತಂಡವು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಕೊನೆಯ ಬಾರಿಗೆ ಗೆದ್ದಿರುವುದು 2014-15 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಬಾರಿ ಸರಣಿ ಜಯಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಕಳೆದ ಎರಡು ಸರಣಿಗಳನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದಿರುವುದು ವಿಶೇಷ.

ಈ ಮೂಲಕ ಕಳೆದ ಒಂದು ದಶಕದಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪಾರುಪತ್ಯ ಮೆರೆದಿದೆ. ಇದೀಗ ಈ ಪಾರುಪತ್ಯಕ್ಕೆ ಬ್ರೇಕ್ ಹಾಕಲು ಆಸ್ಟ್ರೇಲಿಯಾ ತಂಡವು ಪ್ಲ್ಯಾನ್ ರೂಪಿಸುತ್ತಿದೆ. ಅದರಲ್ಲೂ ಸರಣಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ಆಟಗಾರರು ಮೈಂಡ್ ಗೇಮ್ ಆರಂಭಿಸಿದ್ದಾರೆ. ಅದರ ಭಾಗವಾಗಿ ಇದೀಗ ತಂಡದ ಪ್ರಮುಖ ಸ್ಪಿನ್ನರ್ ಆಗಿರುವ ನಾಥನ್ ಲಿಯಾನ್ ಈ ಬಾರಿ ನಾವು ಎಲ್ಲಾ ಪಂದ್ಯಗಳನ್ನು ಗೆಲ್ಲಲಿದ್ದೇವೆ ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ವಿಶೇಷ ಎಂದರೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳಲ್ಲಿ ಲಿಯಾನ್ ಕೂಡ ಒಬ್ಬರು. ಭಾರತದ ವಿರುದ್ಧ ಆಡಿದ 27 ಟೆಸ್ಟ್ ಪಂದ್ಯಗಳಲ್ಲಿ ನಾಥನ್ ಲಿಯಾನ್ ಒಟ್ಟು 121 ವಿಕೆಟ್‌ಗಳನ್ನು ಪಡೆದಿದ್ದಾರೆ. ಅಲ್ಲದೆ ಈ ಬಾರಿ ಕೂಡ ತವರಿನಲ್ಲಿ ಟೀಮ್ ಇಂಡಿಯಾ ವಿರುದ್ಧ ಸ್ಪಿನ್ ಮೋಡಿ ಮಾಡುವ ವಿಶ್ವಾಸದಲ್ಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 22 ನವೆಂಬರ್ 2024 7:50 AM ಪರ್ತ್
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) ಶುಕ್ರವಾರ, 6 ಡಿಸೆಂಬರ್ 2024 9:30 AM ಅಡಿಲೇಡ್
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶನಿವಾರ, 14 ಡಿಸೆಂಬರ್ 2024 5:50 AM ಬ್ರಿಸ್ಬೇನ್
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಗುರುವಾರ, 26 ಡಿಸೆಂಬರ್ 2024 5 AM ಮೆಲ್ಬೋರ್ನ್
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 3 ಜನವರಿ 2025 5 AM ಸಿಡ್ನಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್