AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವಕ್ಕೆ ಭಾರತ- ವಿಶ್ವ XI ನಡುವೆ ಕ್ರಿಕೆಟ್ ಕದನ; ಉಭಯ ತಂಡಗಳ ಸಂಭಾವ್ಯ XI ಹೀಗಿದೆ

ಟೀಮ್ ಇಂಡಿಯಾ ಮತ್ತು ವಿಶ್ವ ಇಲೆವೆನ್ ನಡುವಿನ ಪಂದ್ಯವನ್ನು ಆಯೋಜಿಸಲು ನಾವು ಭಾರತ ಸರ್ಕಾರದಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ. ವಿಶ್ವ ಇಲೆವೆನ್‌ಗೆ ಕನಿಷ್ಠ 13 ರಿಂದ 14 ಆಟಗಾರರು ಬೇಕಾಗಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವಕ್ಕೆ ಭಾರತ- ವಿಶ್ವ XI ನಡುವೆ ಕ್ರಿಕೆಟ್ ಕದನ; ಉಭಯ ತಂಡಗಳ ಸಂಭಾವ್ಯ XI ಹೀಗಿದೆ
Team India
TV9 Web
| Edited By: |

Updated on: Jul 12, 2022 | 8:01 AM

Share

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಬಲ ಪ್ರದರ್ಶನ ಆರಂಭವಾಗಿದೆ. ಅದರಲ್ಲೂ ಸಣ್ಣ ಸ್ವರೂಪದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ . ಟಿ20 ವಿಶ್ವಕಪ್‌ಗಾಗಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಆಟಗಾರರ ತಂಡವನ್ನು ಎದುರಿಸಬಹುದು. ಭಾರತ ಸರ್ಕಾರವು ಭಾರತ ಕ್ರಿಕೆಟ್ ತಂಡ ಮತ್ತು ವಿಶ್ವ XI (India vs Worl XI) ನಡುವೆ ಪಂದ್ಯವನ್ನು ಆಡಿಸಲು ಬಿಸಿಸಿಐ ಮುಂದೆ ಪ್ರಸ್ತಾವನೆ ಇಟ್ಟಿದೆ. ಮುಂದಿನ ತಿಂಗಳು ದೇಶದ ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅದ್ದೂರಿಯಾಗಿ ನಡೆಯುತ್ತಿದ್ದು, ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸಲು ಸರ್ಕಾರ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲು ಮುಂದಾಗಿದೆ. ಪಿಟಿಐ ಪ್ರಕಾರ, ಭಾರತ ಸರ್ಕಾರವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲು ವಿವಿಧ ಕಾರ್ಯಕ್ರಮಗಳೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಯೋಜಿಸಿದೆ.

ಈ ಪಂದ್ಯ ಯಾವಾಗ ನಡೆಯಲಿದೆ?

ಕ್ರಿಕೆಟ್‌ನ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕ್ರಿಕೆಟ್ ಅನ್ನು ತನ್ನ ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ಕ್ರಿಕೆಟ್ ಮಂಡಳಿಗೆ ಪ್ರಸ್ತಾವನೆ ಕಳುಹಿಸಿದ್ದು,. ಇದರಲ್ಲಿ ಭಾರತ ತಂಡ ಮತ್ತು ವಿಶ್ವ XI ನಡುವೆ ಆಗಸ್ಟ್ 22 ರಂದು ಪಂದ್ಯವನ್ನು ಆಯೋಜಿಸಲು ಪ್ರಸ್ತಾಪಿಸಲಾಗಿದೆ. ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಬಹುದು.

ಇದನ್ನೂ ಓದಿ
Image
Women’s Hockey World Cup 2022: ಕ್ವಾರ್ಟರ್‌ಫೈನಲ್‌ ರೇಸ್‌ನಿಂದ ಹೊರಬಿದ್ದ ಭಾರತ; ವಿಶ್ವಕಪ್ ಗೆಲ್ಲುವ ಕನಸು ಭಗ್ನ
Image
India Playing 11 vs Eng, 1st ODI: ಮೊದಲ ಏಕದಿನ ಕದನಕ್ಕೆ ಭಾರತ ರೆಡಿ; ತಂಡದ ಸಂಭಾವ್ಯ XI ಹೀಗಿದೆ

ಎಷ್ಟು ಆಟಗಾರರು ಬೇಕು?

“ಟೀಮ್ ಇಂಡಿಯಾ ಮತ್ತು ವಿಶ್ವ ಇಲೆವೆನ್ ನಡುವಿನ ಪಂದ್ಯವನ್ನು ಆಯೋಜಿಸಲು ನಾವು ಭಾರತ ಸರ್ಕಾರದಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ. ವಿಶ್ವ ಇಲೆವೆನ್‌ಗೆ ಕನಿಷ್ಠ 13 ರಿಂದ 14 ಆಟಗಾರರು ಬೇಕಾಗಿದ್ದಾರೆ. ಆ ಸಮಯದಲ್ಲಿ ಯಾರು ಲಭ್ಯವಿರುತ್ತಾರೆ ಎಂದು ನಾವು ತಿಳಿಯಬೇಕಾಗಿದೆ ಎಂದು ಬಿಸಿಸಿಐ ಮೂಲ ಪಿಟಿಐಗೆ ತಿಳಿಸಿದೆ.

ಭಾರತದ ಸಂಭಾವ್ಯ ತಂಡದ ಜಿಂಬಾಬ್ವೆ ಪ್ರವಾಸವು ಆಗಸ್ಟ್ 20 ರಂದು ಕೊನೆಗೊಳ್ಳುತ್ತದೆ. ಆದ್ದರಿಂದ ಜಿಂಬಾಬ್ವೆ ಪ್ರವಾಸಕ್ಕೆ ಹೋಗುವ ಆಟಗಾರರು ಆಗಸ್ಟ್ 22 ರಂದು ಲಭ್ಯವಿಲ್ಲದಿರಬಹುದು. ಬಿಸಿಸಿಐ ತನ್ನ ‘ಬಿ’ ತಂಡವನ್ನು ವಿವಿಎಸ್ ಲಕ್ಷ್ಮಣ್ ಅವರ ಕೋಚಿಂಗ್‌ನಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ಕಳುಹಿಸಬಹುದು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ಆಗಸ್ಟ್ 22 ರಂದು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಇದು ಎರಡೂ ತಂಡಗಳ ಸಂಭಾವ್ಯ 11 ಆಗಿರಬಹುದು

ಭಾರತ ತಂಡ- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್,

ವಿಶ್ವ XI – ಕೇನ್ ವಿಲಿಯಮ್ಸನ್, ಜೋಸ್ ಬಟ್ಲರ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ಮಿಲ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಶಕೀಬ್ ಅಲ್ ಹಸನ್, ಟ್ರೆಂಟ್ ಬೋಲ್ಟ್, ಪ್ಯಾಟ್ ಕಮಿನ್ಸ್, ಕಗಿಸೊ ರಬಾಡ, ರಶೀದ್ ಖಾನ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್