AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿ ಕ್ರಿಕೆಟ್​ನಲ್ಲಿ 5000ನೇ ಪಂದ್ಯ: ಐತಿಹಾಸಿಕ ಪಂದ್ಯವಾಡಿದ ತಂಡಗಳಾವುವು ಗೊತ್ತಾ?

Ranji Trophy 2022: ಮುಂಬೈ ರಣಜಿ ಟ್ರೋಫಿಯ 88 ವರ್ಷಗಳ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, 41 ಬಾರಿ ಪ್ರಶಸ್ತಿ ಗೆದ್ದಿದೆ.2ನೇ ಯಶಸ್ವಿ ತಂಡವೆಂದರೆ ಕರ್ನಾಟಕ.

Ranji Trophy: ರಣಜಿ ಕ್ರಿಕೆಟ್​ನಲ್ಲಿ 5000ನೇ ಪಂದ್ಯ: ಐತಿಹಾಸಿಕ ಪಂದ್ಯವಾಡಿದ ತಂಡಗಳಾವುವು ಗೊತ್ತಾ?
Ranji Trophy
TV9 Web
| Edited By: |

Updated on: Mar 03, 2022 | 3:40 PM

Share

ದೇಶೀಯ ಅಂಗಳದ ಮಹತ್ವದ ಟೂರ್ನಿ ರಣಜಿ ಕ್ರಿಕೆಟ್​ನಲ್ಲಿ ( Ranji Trophy 2022)  5000ನೇ ಪಂದ್ಯವಾಡಲಾಯಿತು. ಪ್ರಸ್ತುತ ರಣಜಿ ಟ್ರೋಫಿಯ ಲೀಗ್ ಹಂತದ ಪಂದ್ಯಗಳು ನಡೆಯುತ್ತಿದ್ದು, ಈ ವೇಳೆ ಟೂರ್ನಿಯ ಇತಿಹಾಸದ 5000ನೇ ಪಂದ್ಯ ಚೆನ್ನೈನಲ್ಲಿ ಆಡಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ರೈಲ್ವೇಸ್ ತಂಡಗಳು 5 ಸಾವಿರನೇ ಪಂದ್ಯಕ್ಕಾಗಿ ಮೈದಾನಕ್ಕೆ ಇಳಿಯುತ್ತಿದ್ದಂತೆ ಈ ಇತಿಹಾಸ ನಿರ್ಮಾಣವಾಗಿದೆ. 88 ವರ್ಷಗಳ ಇತಿಹಾಸ ಹೊಂದಿರುವ ಈ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ರಣಜಿ ಟ್ರೋಫಿಯನ್ನು 1934 ರಲ್ಲಿ ಪ್ರಾರಂಭಿಸಲಾಯಿತು. ಪಂದ್ಯಾವಳಿಯ ಮೊದಲ ಮತ್ತು 5000 ನೇ ಪಂದ್ಯದ ನಡುವೆ ಒಂದು ಕುತೂಹಲಕಾರಿ ವಿಷಯವಿದೆ. ಅದೇನೆಂದರೆ ಈ ಎರಡು ಪಂದ್ಯಗಳು ಚೆನ್ನೈನಲ್ಲೇ ಆಡಲಾಗಿದೆ. ಇದಾಗ್ಯೂ ಸ್ಟೇಡಿಯಂ ಮಾತ್ರ ಬದಲು. ಏಕೆಂದರೆ ಮೊದಲ ಪಂದ್ಯ ಚೆಪಾಕ್‌ನಲ್ಲಿ ನಡೆದಿತ್ತು. ಇದೀಗ ಐಐಟಿ ಮೈದಾನದಲ್ಲಿ 5000ನೇ ಪಂದ್ಯ ನಡೆಯುತ್ತಿದೆ.

ರಣಜಿ ಟ್ರೋಫಿಯ 5000ನೇ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಐತಿಹಾಸಿಕ ಪಂದ್ಯದಲ್ಲಿ ಸೂರ್ಯಾಂಶ್ ರೈನಾ ಮತ್ತು ಕಮ್ರಾನ್ ಇಕ್ಬಾಲ್ ಇನ್ನಿಂಗ್ಸ್ ಆರಂಭಿಸಿದರು. ಇವರಿಬ್ಬರ ನಡುವೆ ಮೊದಲ ವಿಕೆಟ್‌ಗೆ 88 ರನ್‌ಗಳ ಜೊತೆಯಾಟವಿತ್ತು. ಸೂರ್ಯಾಂಶ್ ರೈನಾ 28 ರನ್ ಗಳಿಸಿ ಔಟಾದರೆ, ಆ ಬಳಿಕ ಬಂದ ಫಾಜಿಲ್ ರಶೀದ್ ಕೂಡ ಬೇಗನೆ ನಿರ್ಗಮಿಸಿದರು. ಈ ಎರಡೂ ವಿಕೆಟ್‌ಗಳನ್ನು ಕರ್ಣ್ ಶರ್ಮಾ ಪಡೆದರು. ಈ ಎರಡು ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ ಜಮ್ಮು ಮತ್ತು ಕಾಶ್ಮೀರ 100 ರನ್‌ಗಳ ಗಡಿ ದಾಟಿದೆ.

ರಣಜಿ ಇತಿಹಾಸದಲ್ಲಿ ಮುಂಬೈ ಅತ್ಯಂತ ಯಶಸ್ವಿ ತಂಡ: ಮುಂಬೈ ರಣಜಿ ಟ್ರೋಫಿಯ 88 ವರ್ಷಗಳ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, 41 ಬಾರಿ ಪ್ರಶಸ್ತಿ ಗೆದ್ದಿದೆ.2ನೇ ಯಶಸ್ವಿ ತಂಡವೆಂದರೆ ಕರ್ನಾಟಕ. ಕರ್ನಾಟಕ ತಂಡ 8 ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಟೂರ್ನಿಯ 2ನೇ ಸ್ಥಾನದಲ್ಲಿದೆ. ಸೌರಾಷ್ಟ್ರ ತಂಡವು ಪ್ರಸ್ತುತ ರಣಜಿ ಟ್ರೋಫಿಯ ಹಾಲಿ ಚಾಂಪಿಯನ್ ಆಗಿದ್ದು, 2020 ರಲ್ಲಿ ಮೊದಲ ಬಾರಿಗೆ ಈ ಟ್ರೋಫಿಯನ್ನು ಗೆದ್ದಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್