AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿ ಕ್ರಿಕೆಟ್​ನಲ್ಲಿ 5000ನೇ ಪಂದ್ಯ: ಐತಿಹಾಸಿಕ ಪಂದ್ಯವಾಡಿದ ತಂಡಗಳಾವುವು ಗೊತ್ತಾ?

Ranji Trophy 2022: ಮುಂಬೈ ರಣಜಿ ಟ್ರೋಫಿಯ 88 ವರ್ಷಗಳ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, 41 ಬಾರಿ ಪ್ರಶಸ್ತಿ ಗೆದ್ದಿದೆ.2ನೇ ಯಶಸ್ವಿ ತಂಡವೆಂದರೆ ಕರ್ನಾಟಕ.

Ranji Trophy: ರಣಜಿ ಕ್ರಿಕೆಟ್​ನಲ್ಲಿ 5000ನೇ ಪಂದ್ಯ: ಐತಿಹಾಸಿಕ ಪಂದ್ಯವಾಡಿದ ತಂಡಗಳಾವುವು ಗೊತ್ತಾ?
Ranji Trophy
TV9 Web
| Edited By: |

Updated on: Mar 03, 2022 | 3:40 PM

Share

ದೇಶೀಯ ಅಂಗಳದ ಮಹತ್ವದ ಟೂರ್ನಿ ರಣಜಿ ಕ್ರಿಕೆಟ್​ನಲ್ಲಿ ( Ranji Trophy 2022)  5000ನೇ ಪಂದ್ಯವಾಡಲಾಯಿತು. ಪ್ರಸ್ತುತ ರಣಜಿ ಟ್ರೋಫಿಯ ಲೀಗ್ ಹಂತದ ಪಂದ್ಯಗಳು ನಡೆಯುತ್ತಿದ್ದು, ಈ ವೇಳೆ ಟೂರ್ನಿಯ ಇತಿಹಾಸದ 5000ನೇ ಪಂದ್ಯ ಚೆನ್ನೈನಲ್ಲಿ ಆಡಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ರೈಲ್ವೇಸ್ ತಂಡಗಳು 5 ಸಾವಿರನೇ ಪಂದ್ಯಕ್ಕಾಗಿ ಮೈದಾನಕ್ಕೆ ಇಳಿಯುತ್ತಿದ್ದಂತೆ ಈ ಇತಿಹಾಸ ನಿರ್ಮಾಣವಾಗಿದೆ. 88 ವರ್ಷಗಳ ಇತಿಹಾಸ ಹೊಂದಿರುವ ಈ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ರಣಜಿ ಟ್ರೋಫಿಯನ್ನು 1934 ರಲ್ಲಿ ಪ್ರಾರಂಭಿಸಲಾಯಿತು. ಪಂದ್ಯಾವಳಿಯ ಮೊದಲ ಮತ್ತು 5000 ನೇ ಪಂದ್ಯದ ನಡುವೆ ಒಂದು ಕುತೂಹಲಕಾರಿ ವಿಷಯವಿದೆ. ಅದೇನೆಂದರೆ ಈ ಎರಡು ಪಂದ್ಯಗಳು ಚೆನ್ನೈನಲ್ಲೇ ಆಡಲಾಗಿದೆ. ಇದಾಗ್ಯೂ ಸ್ಟೇಡಿಯಂ ಮಾತ್ರ ಬದಲು. ಏಕೆಂದರೆ ಮೊದಲ ಪಂದ್ಯ ಚೆಪಾಕ್‌ನಲ್ಲಿ ನಡೆದಿತ್ತು. ಇದೀಗ ಐಐಟಿ ಮೈದಾನದಲ್ಲಿ 5000ನೇ ಪಂದ್ಯ ನಡೆಯುತ್ತಿದೆ.

ರಣಜಿ ಟ್ರೋಫಿಯ 5000ನೇ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಐತಿಹಾಸಿಕ ಪಂದ್ಯದಲ್ಲಿ ಸೂರ್ಯಾಂಶ್ ರೈನಾ ಮತ್ತು ಕಮ್ರಾನ್ ಇಕ್ಬಾಲ್ ಇನ್ನಿಂಗ್ಸ್ ಆರಂಭಿಸಿದರು. ಇವರಿಬ್ಬರ ನಡುವೆ ಮೊದಲ ವಿಕೆಟ್‌ಗೆ 88 ರನ್‌ಗಳ ಜೊತೆಯಾಟವಿತ್ತು. ಸೂರ್ಯಾಂಶ್ ರೈನಾ 28 ರನ್ ಗಳಿಸಿ ಔಟಾದರೆ, ಆ ಬಳಿಕ ಬಂದ ಫಾಜಿಲ್ ರಶೀದ್ ಕೂಡ ಬೇಗನೆ ನಿರ್ಗಮಿಸಿದರು. ಈ ಎರಡೂ ವಿಕೆಟ್‌ಗಳನ್ನು ಕರ್ಣ್ ಶರ್ಮಾ ಪಡೆದರು. ಈ ಎರಡು ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ ಜಮ್ಮು ಮತ್ತು ಕಾಶ್ಮೀರ 100 ರನ್‌ಗಳ ಗಡಿ ದಾಟಿದೆ.

ರಣಜಿ ಇತಿಹಾಸದಲ್ಲಿ ಮುಂಬೈ ಅತ್ಯಂತ ಯಶಸ್ವಿ ತಂಡ: ಮುಂಬೈ ರಣಜಿ ಟ್ರೋಫಿಯ 88 ವರ್ಷಗಳ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, 41 ಬಾರಿ ಪ್ರಶಸ್ತಿ ಗೆದ್ದಿದೆ.2ನೇ ಯಶಸ್ವಿ ತಂಡವೆಂದರೆ ಕರ್ನಾಟಕ. ಕರ್ನಾಟಕ ತಂಡ 8 ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಟೂರ್ನಿಯ 2ನೇ ಸ್ಥಾನದಲ್ಲಿದೆ. ಸೌರಾಷ್ಟ್ರ ತಂಡವು ಪ್ರಸ್ತುತ ರಣಜಿ ಟ್ರೋಫಿಯ ಹಾಲಿ ಚಾಂಪಿಯನ್ ಆಗಿದ್ದು, 2020 ರಲ್ಲಿ ಮೊದಲ ಬಾರಿಗೆ ಈ ಟ್ರೋಫಿಯನ್ನು ಗೆದ್ದಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ