AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: ವಿರಾಟ್ ಕೊಹ್ಲಿ ಮತ್ತೆ RCB ಕ್ಯಾಪ್ಟನ್ ಆಗ್ತಾರೆ..!

IPL 2022 RCB Captain: RCB ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್.

Aakash Chopra: ವಿರಾಟ್ ಕೊಹ್ಲಿ ಮತ್ತೆ RCB ಕ್ಯಾಪ್ಟನ್ ಆಗ್ತಾರೆ..!
Virat Kohli
TV9 Web
| Edited By: |

Updated on: Mar 09, 2022 | 5:10 PM

Share

ಐಪಿಎಲ್ ಸೀಸನ್ 15 ನಲ್ಲಿ (IPL 2022) ಆರ್​ಸಿಬಿ (RCB) ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಮಾರ್ಚ್ 12 ರಂದು ಬಿಗ್ ಸರ್​ಪ್ರೈಸ್ ನೀಡುವುದಾಗಿ ಆರ್​ಸಿಬಿ ಕೂಡ ಘೋಷಿಸಿದೆ. ಈ ಮೂಲಕ ಆರ್​ಸಿಬಿ ತಂಡದ ಹೊಸ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಇದಾಗ್ಯೂ ಆರ್​ಸಿಬಿ ತಂಡವನ್ನು ವಿರಾಟ್ ಕೊಹ್ಲಿಯೇ (Virat Kohli) ಮುನ್ನಡೆಸಲಿದ್ದಾರೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ. ವಿರಾಟ್ ಕೊಹ್ಲಿ ಈಗ ಅಂತಾರಾಷ್ಟ್ರೀಯ ತಂಡದ ನಾಯಕನಲ್ಲ. ಹೀಗಾಗಿ ಕಿಂಗ್ ಕೊಹ್ಲಿಯನ್ನೇ RCB ನಾಯಕನಾಗಿ ಆಯ್ಕೆ ಮಾಡಲಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಚೋಪ್ರಾ, “ಕೊಹ್ಲಿ ಆರ್‌ಸಿಬಿ ನಾಯಕತ್ವವನ್ನು ತೊರೆದಾಗ, ಅವರು ಟೀಮ್ ಇಂಡಿಯಾ ನಾಯಕರಾಗಿದ್ದರು. ಈ ವೇಳೆ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸುವತ್ತ ಗಮನ ಹರಿಸುವುದಾಗಿ ತಿಳಿಸಿದ್ದರು. ಆದರೆ ಇದಾದ ಬಳಿಕ ಕೊಹ್ಲಿ ಏಕದಿನ ನಾಯಕನ ಸ್ಥಾನದಿಂದ ಕೆಳಗಿಳಿಸಲಾಯಿತು. ನಂತರ ಟೆಸ್ಟ್ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ್ದರು. ಈಗ ಅವರು ನಾಯಕನಲ್ಲ. ಹೀಗಾಗಿ ಅವರಿಗೆ ಆರಾಮಾಗಿ ಆರ್​ಸಿಬಿ ತಂಡವನ್ನು ಮುನ್ನಡೆಸಬಹುದು ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ನನ್ನ ಪ್ರಕಾರ ವಿರಾಟ್ ಕೊಹ್ಲಿ ಅವರೇ ಆರ್​ಸಿಬಿ ನಾಯಕರಾಗಲಿದ್ದಾರೆ. ಏಕೆಂದರೆ ಅವರು ಐಪಿಎಲ್ ವೃತ್ತಿಜೀವನದುದ್ದಕ್ಕೂ RCB ಪರ ಆಡಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರನ್ನು ಇನ್ನೂ ಒಂದು ವರ್ಷ ಆರ್‌ಸಿಬಿಯ ನಾಯಕನಾಗಿ ಏಕೆ ಮಾಡಬಾರದು? ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ತಂಡವು ಪ್ಲೇಆಫ್ ತಲುಪುವುದರೊಂದಿಗೆ RCB ಯ ಪ್ರದರ್ಶನವು ಸುಧಾರಿಸಿದೆ. ಹೀಗಾಗಿ ಕೊಹ್ಲಿಗೆ ಕ್ಯಾಪ್ಟನ್ಸಿ ನೀಡುವುದು ಉತ್ತಮ ಎಂದಿದ್ದಾರೆ ಆಕಾಶ್ ಚೋಪ್ರಾ.

ಸದ್ಯ ಆರ್​ಸಿಬಿ ಫ್ರಾಂಚೈಸಿ ಮಾರ್ಚ್ 12 ರಂದು ನಾಯಕನನ್ನು ಘೋಷಿಸಲಿದೆ. ನಾಯಕರುಗಳ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್, ಫಾಫ್ ಡುಪ್ಲೆಸಿಸ್, ಹಾಗೂ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಅದರಲ್ಲೂ ಈ ಬಾರಿ ಆರ್​ಸಿಬಿ ಡುಪ್ಲೆಸಿಸ್​ ಅವರಿಗೆ ನಾಯಕತ್ವ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ಹೊಸ ತಂಡ, ಹೊಸ ಜೆರ್ಸಿ ಹಾಗೂ ಹೊಸ ನಾಯಕನೊಂದಿಗೆ ಈ ಬಾರಿ ಆರ್​ಸಿಬಿ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

RCB ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್‌ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Aakash Chopra on Virat Kohli captaining RCB again in IPL 2022)

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ