AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ

IPL 2022 Rcb: ಐಪಿಎಲ್​ 2021ರಲ್ಲಿ ಆರ್​ಸಿಬಿ ಪರ ಬೆಸ್ಟ್​ ಫರ್ಫಾಮರ್ ಎನಿಸಿಕೊಂಡಿದ್ದ ಗ್ಲೆನ್​ ಮ್ಯಾಕ್ಸ್​ವೆಲ್ ಒಟ್ಟು 513 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು.

IPL 2022: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ
RCB
TV9 Web
| Edited By: |

Updated on: Nov 23, 2021 | 7:27 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ (IPL 2022) ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳಿಗೂ ರಿಟೈನ್ ಮಾಡಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಐಪಿಎಲ್ (IPL) ಆಡಳಿತ ಮಂಡಳಿ ಸೂಚಿಸಿದೆ. ಈ ಸೂಚನೆ ಬೆನ್ನಲ್ಲೇ ಇತ್ತ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಈ ಚರ್ಚೆಗಳ ನಡುವೆ ಆರ್​ಸಿಬಿ (RCB) ತಂಡ ಉಳಿಸಿಕೊಳ್ಳುವ ಆಟಗಾರರ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ (Team India) ಮಾಜಿ ಆಟಗಾರ ಆಕಾಶ್ ಚೋಪ್ರಾ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದಿದ್ದಾರೆ.

ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಇಬ್ಬರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಅದರಂತೆ ಆರ್​ಸಿಬಿ ತಂಡದ ಮೊದಲ ಆಯ್ಕೆ ವಿರಾಟ್ ಕೊಹ್ಲಿ ಆಗಲಿದ್ದಾರೆ. ಇನ್ನು 2ನೇ ಆಯ್ಕೆ ಯುಜುವೇಂದ್ರ ಚಹಲ್. ಇನ್ನು 3ನೇ ಆಟಗಾರನನ್ನು ಉಳಿಸಿಕೊಂಡರೆ ಅದು ದೇವದತ್ ಪಡಿಕ್ಕಲ್ ಆಗಲಿದ್ದಾರೆ. ಹಾಗೆಯೇ ನಾಲ್ಕನೇ ಆಟಗಾರನ ಆಯ್ಕೆ ಮೊಹಮ್ಮದ್ ಸಿರಾಜ್. ಹಾಗೆಯೇ ಈ ಪಟ್ಟಿಯಲ್ಲಿ ಹರ್ಷಲ್ ಪಟೇಲ್ ಕೂಡ ಇದ್ದಾರೆ. ಸಿರಾಜ್ ಹಾಗೂ ಹರ್ಷಲ್ ವೇಗಿಗಳಾಗಿರುವುದರಿಂದ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಇದಾಗ್ಯೂ ಆಕಾಶ್ ಚೋಪ್ರಾ ಆರ್​ಸಿಬಿ ತಂಡವು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಮ್ಯಾಕ್ಸ್​ವೆಲ್ ಚೆನ್ನಾಗಿ ಆಡುತ್ತಿದ್ದಾರೆ. ಆದರೆ ಅವರು ಆ ಫಾರ್ಮ್​ ಅನ್ನು ಮುಂದುವರೆಸುತ್ತಾರಾ ಎಂಬುದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ನನ್ನ ಪ್ರಕಾರ ಆರ್​ಸಿಬಿ ಅವರನ್ನು ಉಳಿಸಿಕೊಳ್ಳುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಐಪಿಎಲ್​ 2021ರಲ್ಲಿ ಆರ್​ಸಿಬಿ ಪರ ಬೆಸ್ಟ್​ ಫರ್ಫಾಮರ್ ಎನಿಸಿಕೊಂಡಿದ್ದ ಗ್ಲೆನ್​ ಮ್ಯಾಕ್ಸ್​ವೆಲ್ ಒಟ್ಟು 513 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದಾಗ್ಯೂ ಆರ್​ಸಿಬಿ ತಂಡ ಗ್ಲೆನ್ ಮ್ಯಾಕ್ಸ್​ವೆಲ್​ ಅವರನ್ನು ಉಳಿಸಿಕೊಳ್ಳುವುದು ಡೌಟ್ ಎಂದಿದ್ದಾರೆ ಆಕಾಶ್ ಚೋಪ್ರಾ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್