AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ

IPL 2022 Rcb: ಐಪಿಎಲ್​ 2021ರಲ್ಲಿ ಆರ್​ಸಿಬಿ ಪರ ಬೆಸ್ಟ್​ ಫರ್ಫಾಮರ್ ಎನಿಸಿಕೊಂಡಿದ್ದ ಗ್ಲೆನ್​ ಮ್ಯಾಕ್ಸ್​ವೆಲ್ ಒಟ್ಟು 513 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು.

IPL 2022: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ
RCB
TV9 Web
| Edited By: |

Updated on: Nov 23, 2021 | 7:27 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ (IPL 2022) ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳಿಗೂ ರಿಟೈನ್ ಮಾಡಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಐಪಿಎಲ್ (IPL) ಆಡಳಿತ ಮಂಡಳಿ ಸೂಚಿಸಿದೆ. ಈ ಸೂಚನೆ ಬೆನ್ನಲ್ಲೇ ಇತ್ತ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಈ ಚರ್ಚೆಗಳ ನಡುವೆ ಆರ್​ಸಿಬಿ (RCB) ತಂಡ ಉಳಿಸಿಕೊಳ್ಳುವ ಆಟಗಾರರ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ (Team India) ಮಾಜಿ ಆಟಗಾರ ಆಕಾಶ್ ಚೋಪ್ರಾ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದಿದ್ದಾರೆ.

ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಇಬ್ಬರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಅದರಂತೆ ಆರ್​ಸಿಬಿ ತಂಡದ ಮೊದಲ ಆಯ್ಕೆ ವಿರಾಟ್ ಕೊಹ್ಲಿ ಆಗಲಿದ್ದಾರೆ. ಇನ್ನು 2ನೇ ಆಯ್ಕೆ ಯುಜುವೇಂದ್ರ ಚಹಲ್. ಇನ್ನು 3ನೇ ಆಟಗಾರನನ್ನು ಉಳಿಸಿಕೊಂಡರೆ ಅದು ದೇವದತ್ ಪಡಿಕ್ಕಲ್ ಆಗಲಿದ್ದಾರೆ. ಹಾಗೆಯೇ ನಾಲ್ಕನೇ ಆಟಗಾರನ ಆಯ್ಕೆ ಮೊಹಮ್ಮದ್ ಸಿರಾಜ್. ಹಾಗೆಯೇ ಈ ಪಟ್ಟಿಯಲ್ಲಿ ಹರ್ಷಲ್ ಪಟೇಲ್ ಕೂಡ ಇದ್ದಾರೆ. ಸಿರಾಜ್ ಹಾಗೂ ಹರ್ಷಲ್ ವೇಗಿಗಳಾಗಿರುವುದರಿಂದ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಇದಾಗ್ಯೂ ಆಕಾಶ್ ಚೋಪ್ರಾ ಆರ್​ಸಿಬಿ ತಂಡವು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಮ್ಯಾಕ್ಸ್​ವೆಲ್ ಚೆನ್ನಾಗಿ ಆಡುತ್ತಿದ್ದಾರೆ. ಆದರೆ ಅವರು ಆ ಫಾರ್ಮ್​ ಅನ್ನು ಮುಂದುವರೆಸುತ್ತಾರಾ ಎಂಬುದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ನನ್ನ ಪ್ರಕಾರ ಆರ್​ಸಿಬಿ ಅವರನ್ನು ಉಳಿಸಿಕೊಳ್ಳುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಐಪಿಎಲ್​ 2021ರಲ್ಲಿ ಆರ್​ಸಿಬಿ ಪರ ಬೆಸ್ಟ್​ ಫರ್ಫಾಮರ್ ಎನಿಸಿಕೊಂಡಿದ್ದ ಗ್ಲೆನ್​ ಮ್ಯಾಕ್ಸ್​ವೆಲ್ ಒಟ್ಟು 513 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದಾಗ್ಯೂ ಆರ್​ಸಿಬಿ ತಂಡ ಗ್ಲೆನ್ ಮ್ಯಾಕ್ಸ್​ವೆಲ್​ ಅವರನ್ನು ಉಳಿಸಿಕೊಳ್ಳುವುದು ಡೌಟ್ ಎಂದಿದ್ದಾರೆ ಆಕಾಶ್ ಚೋಪ್ರಾ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು