AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯವೀರ್ ಸೆಹ್ವಾಗ್ ಸಿಡಿಲಬ್ಬರ: ದೆಹಲಿ ತಂಡಕ್ಕೆ ಭರ್ಜರಿ ಜಯ

Aaryavir Sehwag: ಭಾರತ ತಂಡದ ಮಾಜಿ ಆರಂಭಿಕ ದಾಂಡಿಗ ವೀರೇಂದ್ರ ಸೆಹ್ವಾಗ್ ಅವರ ಸುಪುತ್ರ ಆರ್ಯವೀರ್ ಸೆಹ್ವಾಗ್ ಈಗಾಗಲೇ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಅಂಡರ್-19 ಆಟಗಾರರ ಕೂಚ್ ಬೆಹಾರ್ ಟೂರ್ನಿಯಲ್ಲೂ ಕಣಕ್ಕಿಳಿಯುವ ಮೂಲಕ ಭರ್ಜರಿ ಪ್ರದರ್ಶನ ನೀಡಿದ್ದಾರೆ.

ಆರ್ಯವೀರ್ ಸೆಹ್ವಾಗ್ ಸಿಡಿಲಬ್ಬರ:  ದೆಹಲಿ ತಂಡಕ್ಕೆ ಭರ್ಜರಿ ಜಯ
Aaryavir Sehwag
ಝಾಹಿರ್ ಯೂಸುಫ್
|

Updated on:Nov 18, 2025 | 5:59 PM

Share

ಕೂಚ್ ಬೆಹಾರ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪ್ರದರ್ಶನದೊಂದಿಗೆ ದೆಹಲಿ ತಂಡ ಅಮೋಘ ಜಯ ಸಾಧಿಸಿದೆ. ನ್ಯೂ ದೆಹಲಿಯ ಏರ್​ಫೋರ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ದೆಹಲಿ ಹಾಗೂ ಬಿಹಾರ್ ತಂಡಗಳು ಮುಖಾಮುಖಿಯಾಗಿದ್ದವು.

ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಆರಾಧ್ಯ ಚಾವ್ಲಾ ಕೇವಲ 4 ರನ್​ಗಳಿಸಿ ಔಟಾದರು. ಇದರ ಬೆನ್ನಲ್ಲೇ ತನ್ಮಯ್ ಚೌಧರಿ (0) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಆರ್ಯವೀರ್ ಸೆಹ್ವಾಗ್ ಹಾಗೂ ನಾಯನ ಪ್ರಣವ್ ಪಂತ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಅದರಲ್ಲೂ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ಆರ್ಯವೀರ್ 120 ಎಸೆತಗಳಲ್ಲಿ 14 ಫೋರ್​ಗಳೊಂದಿಗೆ 72 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ದೆಹಲಿ ತಂಡ ಮೊದಲ ಇನಿಂಗ್ಸ್​ನಲ್ಲಿ 278 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬಿಹಾರ್ ತಂಡಕ್ಕೆ ಯುವ ವೇಗಿ ಲಕ್ಷ್ಮಣ್ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಬಿಹಾರ್ ತಂಡವು ಕೇವಲ 125 ರನ್​​ಗಳಿಸಿ ಆಲೌಟ್ ಆಯಿತು. ದೆಹಲಿ ಪರ 12 ಓವರ್​ಗಳನ್ನು ಎಸೆದ ಲಕ್ಷ್ಮಣ್ ಕೇವಲ 45 ರನ್ ನೀಡಿ 7 ವಿಕೆಟ್ ಪಡೆದರು.

ಬಿಹಾರ್ ತಂಡವು ಅಲ್ಪ ಮೊತ್ತಕ್ಕೆ ಕುಸಿದಿದ್ದರಿಂದ ದೆಹಲಿ ಫಾಲೋಆನ್ ಹೇರಿತು. ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬಿಹಾರ್ ತಂಡವು 205 ರನ್​ಗಳಿಸಿ ಆಲೌಟ್ ಆದರು. ಈ ಬಾರಿ ಕೂಡ ಲಕ್ಷ್ಮಣ್ 4 ವಿಕೆಟ್ ಪಡೆದು ಮಿಂಚಿದರು.

ಮೊದಲ ಇನಿಂಗ್ಸ್​ನಲ್ಲಿನ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 53 ರನ್​ಗಳ ಗುರಿ ಪಡೆದ ದೆಹಲಿ ಪರ ಆರ್ಯವೀರ್ ಸೆಹ್ವಾಗ್ 45 ಎಸೆತಗಳಲ್ಲಿ 4 ಫೋರ್​ಗಳೊಂದಿಗೆ ಅಜೇಯ 27 ರನ್ ಬಾರಿಸಿದರು. ಈ ಮೂಲಕ ದೆಹಲಿ ತಂಡ 15.2 ಓವರ್​ಗಳಲ್ಲಿ 53 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: ಟೆಸ್ಟ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಟೆಂಬಾ ಬವುಮಾ

ಇನ್ನು ಈ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಆರ್ಯವೀರ್ 99 ರನ್​ ಸಿಡಿಸಿ ಮಿಂಚಿದರೆ, ಲಕ್ಷ್ನಣ್ 11 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ದೆಹಲಿ ಗೆಲುವಿನಲ್ಲಿ ಆರ್ಯವೀರ್ ಹಾಗೂ ಲಕ್ಷ್ಮಣ್ ಪ್ರಮುಖ ಪಾತ್ರವಹಿಸಿದರು.

Published On - 5:58 pm, Tue, 18 November 25

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!