AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೇಳಿದ್ದು ಸುಳ್ಳು’; ಕೊಹ್ಲಿ ವಿಚಾರದಲ್ಲಿ ಉಲ್ಟಾ ಹೊಡೆದ ಎಬಿ ಡಿವಿಲಿಯರ್ಸ್

AB de Villiers: ವಿರಾಟ್ ಕೊಹ್ಲಿ ರಜೆ ಕುರಿತು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿದ್ದರು. ಡಿವಿಲಿಯರ್ಸ್ ನೀಡಿದ ಈ ಮಾಹಿತಿಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಉಂಟಾಗಿತ್ತು.

‘ನಾನು ಹೇಳಿದ್ದು ಸುಳ್ಳು’; ಕೊಹ್ಲಿ ವಿಚಾರದಲ್ಲಿ ಉಲ್ಟಾ ಹೊಡೆದ ಎಬಿ ಡಿವಿಲಿಯರ್ಸ್
ವಿರಾಟ್ ಕೊಹ್ಲಿ ದಂಪತಿ, ಎಬಿ ಡಿವಿಲಿಯರ್ಸ್​
ಪೃಥ್ವಿಶಂಕರ
|

Updated on:Feb 09, 2024 | 3:58 PM

Share

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಅನುಷ್ಕಾ ಶರ್ಮಾ (Anushka Sharma) ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಕೊಹ್ಲಿ ಪ್ರಸ್ತುತ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಕೊಹ್ಲಿಯ ಆಪ್ತ ಸ್ನೇಹಿತ ಎಬಿ ಡಿವಿಲಿಯರ್ಸ್ (AB de Villiers) ತಮ್ಮ ಹೇಳಿಕೆಯಿಂದ ಇದೀಗ ಯು ಟರ್ನ್​ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿವಿಲಿಯರ್ಸ್, ಕೊಹ್ಲಿ ವಿಚಾರದಲ್ಲಿ ನಾನು ನೀಡಿದ್ದ ಹೇಳಿಕೆ ಸುಳ್ಳಾಗಿತ್ತು. ಕೊಹ್ಲಿ ಏಕೆ ರಜೆ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಎಲ್ಲೇ ಇದ್ದರು ಆರೋಗ್ಯವಾಗಿರಲಿ ಹಾಗೂ ಇನ್ನಷ್ಟು ಬಲಿಷ್ಠವಾಗಿ ತಂಡಕ್ಕೆ ವಾಪಸ್ಸಾಗಲಿ ಎಂದು ಆಶಿಸುತ್ತೇನೆ ಎಂದು ಡಿವಿಲಿಯರ್ಸ್​ ಹೇಳಿಕೊಂಡಿದ್ದಾರೆ.

ಡಿವಿಲಿಯರ್ಸ್ ಹೇಳಿದ್ದೇನು?

ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ನಡೆದಿವೆ. ಆದರೆ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಆ ನಂತರ ವಿರಾಟ್ ಕೊಹ್ಲಿ ಇದಕ್ಕಿದ್ದಂತೆ ಟೆಸ್ಟ್ ಸರಣಿಯಿಂದ ಹೊರಗುಳಿಯಲು ಕಾರಣವೇನು ಎಂಬುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಈ ನಡುವೆ ವಿರಾಟ್ ಕೊಹ್ಲಿಯ ಆಪ್ತಸ್ನೇಹಿತರಾಗಿರುವ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಎಬಿ ಡಿವಿಲಿಯರ್ಸ್​ ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಮಾತನಾಡುವ ವೇಳಿ ಕೊಹ್ಲಿ ತಂಡದಿಂದ ಹೊರಗುಳಿದಿರುವ ಬಗ್ಗೆ ಹೇಳಿಕೆ ನೀಡಿದ್ದರು. ಆ ಬಳಿಕ ಡಿವಿಲಿಯರ್ಸ್​ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತ್ತು.

IND vs ENG: ವಿರಾಟ್ ಕೊಹ್ಲಿ ಆಡುವ ಬಗ್ಗೆ ಹೊರಬಿತ್ತು ಬಿಗ್ ಅಪ್​ಡೇಟ್

ಡಿವಿಲಿಯರ್ಸ್​ ಈ ಹಿಂದೆ ನೀಡಿದ್ದ ಹೇಳಿಕೆ

ನಾನು ನೀಡಿದ್ದ ಹೇಳಿಕೆ ಸುಳ್ಳಾಗಿತ್ತು

ವಿರಾಟ್ ಕೊಹ್ಲಿ ರಜೆ ಕುರಿತು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಕೊಹ್ಲಿ ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ ಎಂದು ಡಿವಿಲಿಯರ್ಸ್ ಮಾಹಿತಿ ನೀಡಿದ್ದರು. ಆದರೀಗ ತಮ್ಮ ಹೇಳಿಕೆನ್ನು ಸುಳ್ಳು ಎಂದಿರುವ ಡಿವಿಲಿರ್ಸ್​, ‘ನಾನು ಈ ಹಿಂದೆಯೇ ಹೇಳಿದಂತೆ ವಿರಾಟ್ ಕುಟುಂಬಕ್ಕೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ವಿರಾಟ್ ಕೊಹ್ಲಿ ಬಗ್ಗೆ ನಾನು ಈ ಹಿಂದೆ ತಪ್ಪು ಮಾಹಿತಿ ಹಂಚಿಕೊಂಡಿದ್ದೆ. ವಿರಾಟ್ ಕೊಹ್ಲಿ ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ನಾನು ನೀಡಿದ್ದ ಹೇಳಿಕೆ ಸುಳ್ಳಾಗಿತ್ತು. ವಿರಾಟ್ ಕೊಹ್ಲಿ ಟೀಂ ಇಂಡಿಯಾದಿಂದ ಏಕೆ ರಜೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ವಿರಾಟ್ ಕೊಹ್ಲಿ ಎಲ್ಲೇ ಇದ್ದರೂ ಅವರು ಚೆನ್ನಾಗಿ ಮತ್ತು ಆರೋಗ್ಯವಾಗಿರಲಿ ಎಂದು ನಾನು ಭಾವಿಸುತ್ತೇನೆ. ವಿರಾಮಕ್ಕೆ ಕಾರಣ ಏನೇ ಇರಲಿ, ವಿರಾಟ್ ಇನ್ನಷ್ಟು ಬಲದೊಂದಿಗೆ ತಂಡಕ್ಕೆ ಮರಳುತ್ತಾರೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದು ಡಿವಿಲಿಯರ್ಸ್​ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Fri, 9 February 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್