AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ಎಬಿಡಿ ಸಿಡಿಲಬ್ಬರ: 10 ಸಿಕ್ಸರ್, 7 ಬೌಂಡರಿಗಳೊಂದಿಗೆ ಭರ್ಜರಿ ಶತಕ

RCB’s intra-squad match: ಮೊದಲು ಬ್ಯಾಟ್ ಮಾಡಿದ RCB A ತಂಡಕ್ಕೆ ಎಬಿಡಿ ನೆರವಾದರು. ಎಂದಿನಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಡಿವಿಲಿಯರ್ಸ್​ ಬಿ ತಂಡದಲ್ಲಿದ್ದ ಬೌಲರುಗಳ ಬೆಂಡೆತ್ತಿದ್ದರು.

AB de Villiers: ಎಬಿಡಿ ಸಿಡಿಲಬ್ಬರ: 10 ಸಿಕ್ಸರ್, 7 ಬೌಂಡರಿಗಳೊಂದಿಗೆ ಭರ್ಜರಿ ಶತಕ
AB de Villiers
TV9 Web
| Edited By: |

Updated on:Sep 15, 2021 | 2:35 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2021) ದ್ವಿತಿಯಾರ್ಧ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 19 ರಂದು ಮುಂಬೈ ಇಂಡಿಯನ್ಸ್ (MI) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಣ ಮುಖಾಮುಖಿಯೊಂದಿಗೆ ಐಪಿಎಲ್​ನ (IPL) ಎರಡನೇ ಹಂತಕ್ಕೆ ಚಾಲನೆ ದೊರೆಯಲಿದೆ. ಅತ್ತ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡವು ಮೊದಲ ಪಂದ್ಯವನ್ನು ಸೆಪ್ಟೆಂಬರ್ 20 ರಂದು ಕೆಕೆಆರ್ (KKR) ವಿರುದ್ದ ಆಡಲಿದೆ. ಇದಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಆರ್​ಸಿಬಿ ಬಳಗವು RCB A ಮತ್ತು RCB B ತಂಡಗಳಾಗಿ ವಿಂಗಡನೆಗೊಂಡು ಅಭ್ಯಾಸದಲ್ಲಿ ನಿರತರಾಗಿವೆ. ಅದರಂತೆ ನಡೆದ ಮೊದಲ ಇನ್​ಟ್ರಾಸ್ಕ್ವಾಡ್​ ಪಂದ್ಯದಲ್ಲಿ ಹರ್ಷಲ್ ಪಟೇಲ್ ನೇತೃತ್ವದ RCB A ತಂಡವು ದೇವದತ್ ಪಡಿಕ್ಕಲ್ ಮುನ್ನಡೆಸಿದ B ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿಯುವ ಮೂಲಕ ಎಬಿ ಡಿವಿಲಿಯರ್ಸ್​ ತನ್ನ ಪುನರಾಗಮನವನ್ನು ಸಾರಿದ್ದಾರೆ.

ಮೊದಲು ಬ್ಯಾಟ್ ಮಾಡಿದ RCB A ತಂಡಕ್ಕೆ ಎಬಿಡಿ ನೆರವಾದರು. ಎಂದಿನಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಡಿವಿಲಿಯರ್ಸ್​ ಬಿ ತಂಡದಲ್ಲಿದ್ದ ಬೌಲರುಗಳ ಬೆಂಡೆತ್ತಿದ್ದರು. ಪರಿಣಾಮ ಎಬಿಡಿ ಬ್ಯಾಟ್​ನಿಂದ ಸಿಡಿದದ್ದು 10 ಸಿಕ್ಸರ್ ಹಾಗೂ 7 ಬೌಂಡರಿಗಳು. ಅದರಂತೆ ಕೇವಲ 46 ಎಸೆತಗಳಲ್ಲಿ ಡಿವಿಲಿಯರ್ಸ್​ 104 ರನ್​ ಚಚ್ಚಿದರು. ಮತ್ತೊಂದೆಡೆ ಯುವ ವಿಕೆಟ್ ಕೀಪರ್ ಬ್ಯಾಟ್ಸ್​​ಮನ್ ಮೊಹಮ್ಮದ್ ಅಜರುದ್ದೀನ್ ಎಬಿಡಿಗೆ ಉತ್ತಮ ಸಾಥ್ ನೀಡಿದರು. 43 ಎಸೆತಗಳನ್ನು ಎದುರಿಸಿದ ಅಜರ್ 3 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 66 ರನ್​ ಬಾರಿಸಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ RCB A ತಂಡದ ಸ್ಕೋರ್ 213ಕ್ಕೆ ಬಂದು ನಿಂತಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ಬಿ ತಂಡಕ್ಕೆ ದೇವದತ್ ಪಡಿಕ್ಕಲ್ ಉತ್ತಮ ಆರಂಭ ಒದಗಿಸಿದರು. 21 ಎಸೆತಗಳಲ್ಲಿ 36 ರನ್​ ಬಾರಿಸಿದ ಪಡಿಕ್ಕಲ್​ ಭದ್ರ ಬುನಾದಿ ಹಾಕಿಕೊಟ್ಟರು. ಇದರ ಬೆನ್ನಲ್ಲೇ ಅಬ್ಬರಿಸಲಾರಂಭಿಸಿದ ಕೆಎಸ್​ ಭರತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 47 ಎಸೆತಗಳಲ್ಲಿ 95 ರನ್​ ಬಾರಿಸುವ ಮೂಲಕ ಭರತ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅದರಂತೆ RCB B ತಂಡವು 7 ವಿಕೆಟ್​ಗಳ ಜಯ ಸಾಧಿಸಿತು. ಈ ಪಂದ್ಯದೊಂದಿಗೆ ಆರ್​ಸಿಬಿ ಬ್ಯಾಟ್ಸ್​​ಮನ್​ಗಳು ತಮ್ಮ ಫಾರ್ಮ್​ ಅನ್ನು ಪ್ರದರ್ಶಿಸಿದ್ದಾರೆ. ಅದರಲ್ಲೂ ತಂಡದಲ್ಲಿ ಅವಕಾಶಕ್ಕಾಗಿ ಎದುರು ನೋಡುತ್ತಿರುವ ಅಜರ್ ಹಾಗೂ ಭರತ್ ಅಬ್ಬರಿಸಿರುವುದು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು.

ಇದನ್ನೂ ಓದಿ: IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭಾಗ್ಯ ಕೊಹ್ಲಿ, ಗೇಲ್, ಎಬಿಡಿಗೆ ಇನ್ನೂ ಸಿಕ್ಕಿಲ್ಲ

ಇದನ್ನೂ ಓದಿ: Crime News: ಅಕ್ಕನಿಗೆ ಯುವಕನೊಂದಿಗೆ ಸಂಬಂಧ: ಕಥೆ ಮುಗಿಸಿ ನಗುತ್ತಾ ನಿಂತಿದ್ದ ತಮ್ಮ..!

ಇದನ್ನೂ ಓದಿ: Crime News: ಹುಡುಗಿ ಧ್ವನಿಯಲ್ಲೇ ಡಾಕ್ಟರ್​ ಕೈಯಿಂದ 2 ಕೋಟಿ ರೂ ಪೀಕಿದ ಚಾಲಾಕಿ..!

(AB de Villiers slams a cracking century in RCB’s intra-squad practice match)

Published On - 2:31 pm, Wed, 15 September 21

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ