Sign In

By signing in or creating an account, you agree with Associated Broadcasting Company's Terms & Conditions and Privacy Policy.

Abdul Razzaq: ಐಶ್ವರ್ಯಾ ರೈ ಜೊತೆ ಮದುವೆ ಆಗಬೇಕು, ಮಗು ಬೇಕು ಅಂದ್ರೆ ಆಗುತ್ತಾ?: ಪಾಕ್ ಆಟಗಾರನಿಂದ ವಿವಾದಾತ್ಮಕ ಹೇಳಿಕೆ

Aishwarya Rai Bachchan: ಈಗ ಐಶ್ವರ್ಯಾ ರೈ ಅವರನ್ನು ಮದುವೆ ಆಗಬೇಕು, ಸುಂದರವಾದ ಮಗು ಬೇಕು ಅಂದ್ರೆ ಅದು ಆಗುತ್ತಾ ಎಂದು ಪಾಕ್ ಮಾಜಿ ಆಟಗಾರ ಅಬ್ದುಲ್ ರಝಾಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ ಪಾಕಿಸ್ತಾನದ ಮಾಜಿ ಆಲ್ ರೌಂಡರ್ ರಝಾಕ್ ಈ ಹೇಳಿಕೆ ನೀಡಿದ್ದಾರೆ.

Abdul Razzaq: ಐಶ್ವರ್ಯಾ ರೈ ಜೊತೆ ಮದುವೆ ಆಗಬೇಕು, ಮಗು ಬೇಕು ಅಂದ್ರೆ ಆಗುತ್ತಾ?: ಪಾಕ್ ಆಟಗಾರನಿಂದ ವಿವಾದಾತ್ಮಕ ಹೇಳಿಕೆ
Abdul Razzaq and Aishwarya Rai
Follow us
Vinay Bhat
|

Updated on:Nov 15, 2023 | 8:52 AM

ಐಸಿಸಿ ಏಕದಿನ ವಿಶ್ವಕಪ್ 2023 ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಇದೀಗ ನಾಲ್ಕು ತಂಡಗಳು ಸೆಮಿಫೈನಲ್​ನಲ್ಲಿ ಕಾದಾಟ ನಡೆಸಲು ಸಜ್ಜಾಗಿವೆ. ಈ ಬಾರಿಯ ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಬಹುದು ಎಂದು ನಂಬಲಾಗಿದ್ದ ಪಾಕಿಸ್ತಾನ ತಂಡ ತೀರಾ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಾಗಿದೆ. ಪಾಕ್ ತಂಡದ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬರುತ್ತಿದ್ದು, ಇನ್ನೂ ನಿಂತಿಲ್ಲ. ಇದೀಗ ಪಾಕ್ ಮಾಜಿ ಆಟಗಾರ ಅಬ್ದುಲ್ ರಝಾಕ್ (Abdul Razzaq) ಒಂದು ಹೆಜ್ಜೆ ಮುಂದೆಹೋಗಿ ಪಾಕಿಸ್ತಾನ ತಂಡವನ್ನು ಟೀಕಿಸುವ ಭರದಲ್ಲಿ ಬಾಲಿವುಡ್​ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ.

ತಮ್ಮದೇ ಆದ ಉದಾಹರಣೆಯನ್ನು ನೀಡಿರುವ ರಝಾಕ್, ”ಮಾಜಿ ನಾಯಕ ಯೂನಿಸ್ ಖಾನ್ ತಂಡಕ್ಕೆ ಕೊಡುಗೆ ಸಲ್ಲಿಸುವ ಬಗ್ಗೆ ಉತ್ತಮ ಉದ್ದೇಶವನ್ನು ಹೊಂದಿದ್ದರು, ಹೀಗಾಗಿ ಅವರು ತಮ್ಮ ನಾಯಕ ಪಾಕಿಸ್ತಾನಕ್ಕೆ ಅರ್ಹರಾಗಿದ್ದರು,” ಎಂದು ಹೇಳಿದ್ದಾರೆ. ನಂತರ ರಝಾಕ್ ಪ್ರಸ್ತುತ ಪಾಕಿಸ್ತಾನಿ ಮಂಡಳಿ ಮತ್ತು ತಂಡದ ಉದ್ದೇಶವನ್ನು ಪ್ರಶ್ನಿಸಿದ್ದಾರೆ. ಈ ಸಂದರ್ಭ ತನ್ನ ನಾಲಿಗೆ ಹರಿಬಿಟ್ಟು, ”ಈಗ ಐಶ್ವರ್ಯಾ ರೈ ಅವರನ್ನು ಮದುವೆ ಆಗಬೇಕು, ಸುಂದರವಾದ ಮಗು ಬೇಕು ಅಂದ್ರೆ ಅದು ಆಗುತ್ತಾ,” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ
Image
ಹರ್ಭಜನ್ ಇಸ್ಲಾಂಗೆ ಮತಾಂತರವಾಗಲು ಹತ್ತಿರವಾಗಿದ್ದರು ಎಂದ ಇಂಝಮಾಮ್
Image
ಇಂದು IND vs NZ ಸೆಮಿಫೈನಲ್: ಗೆದ್ದರೆ ಫೈನಲ್​ಗೆ-ಸೋತರೆ ಟೂರ್ನಿಯಿಂದ ಔಟ್
Image
ವಾಂಖೆಡೆ ಸ್ಟೇಡಿಯಂನಲ್ಲಿನ ಫಲಿತಾಂಶ ಯಾರ ಪರವಿತ್ತು? ಇಲ್ಲಿದೆ ಮಾಹಿತಿ
Image
IPL 2024: CSK ತಂಡದಿಂದ ಬೆನ್ ಸ್ಟೋಕ್ಸ್ ಔಟ್..!

ಅಬ್ದುಲ್ ರಝಾಕ್ ನೀಡಿರುವ ವಿವಾದಾತ್ಮಕ ಹೇಳಿಕೆ:

ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ ಪಾಕಿಸ್ತಾನದ ಮಾಜಿ ಆಲ್ ರೌಂಡರ್ ರಝಾಕ್ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ನೀಡುವಾಗ ವೇದಿಕೆ ಮೇಲೆ ಪಾಕಿಸ್ತಾನದ ಮಾಜಿ ಆಟಗಾರರು ಕೂಡ ಇದ್ದರು. ಮಾಜಿ ನಾಯಕರಾದ ಶಾಹಿದ್ ಅಫ್ರಿದಿ ಮತ್ತು ಉಮರ್ ಗುಲ್ ಅವರು ರಝಾಕ್ ಹೇಳಿಕೆಗೆ ನಕ್ಕರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್

ರಝಾಕ್ ಅವರ ಈ ವಿವಾದಾತ್ಮಕ ಹೇಳಿಕೆಗೆ ಸ್ವತಃ ಪಾಕಿಸ್ತಾನದ ಕೆಲ ಆಟಗಾರರೇ ಖಂಡಿಸಿದ್ದಾರೆ. ಮಾಜಿ ವೇಗಿ ಶೋಯೆಬ್ ಅಖ್ತರ್, “ಯಾವ ಮಹಿಳೆಗೂ ಈ ರೀತಿ ಅಗೌರವ ತೋರಬಾರದು. ಅವನ ಪಕ್ಕದಲ್ಲಿ ಕುಳಿತವರು ನಗುವುದು ಮತ್ತು ಚಪ್ಪಾಳೆ ತಟ್ಟುವ ಬದಲು ಇದನ್ನು ವಿರೋಧಿಸಬೇಕಿತ್ತು,” ಎಂದು ಟ್ವೀಟ್ ಮಾಡಿದ್ದಾರೆ.

ಶೋಯೆಬ್ ಅಖ್ತರ್ ಮಾಡಿರುವ ಟ್ವೀಟ್:

ಏತನ್ಮಧ್ಯೆ, ವಿಶ್ವಕಪ್ ಪ್ರಾರಂಭವಾದಾಗ, ಪಾಕಿಸ್ತಾನ ತಂಡವನ್ನು ಸೆಮಿಫೈನಲ್‌ಗೆ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿತ್ತು. ಆದರೆ ಪಾಕಿಸ್ತಾನವನ್ನು ಕ್ರಿಕೆಟ್ ಶಿಶುಗಳಾದ ಅಫ್ಘಾನಿಸ್ತಾನ ತಂಡ ಕೂಡ ಸೋಲಿಸಿತು. ಪಾಕಿಸ್ತಾನ ತಂಡದ ಒಟ್ಟಾರೆ ಪ್ರದರ್ಶನ ತೀರಾ ಕಳಪೆಯಾಗಿತ್ತು. ಹೀಗಾಗಿ ಬಾಬರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಆಗ್ರಹ ಕೂಡ ಕೇಳಿ ಬರುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 am, Wed, 15 November 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ