AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

220 ರ ಸ್ಟ್ರೈಕ್ ರೇಟ್‌ನಲ್ಲಿ 55 ರನ್ ಚಚ್ಚಿದ ಅಭಿನವ್; ಮನೀಶ್ ಅಬ್ಬರದ ನಡುವೆಯೂ ಸೋತ ಗುಲ್ಬರ್ಗಾ

Maharaja Trophy: ಅಭಿನವ್ ಮನೋಹರ್ ಕೇವಲ 25 ಎಸೆತಗಳಲ್ಲಿ 220 ಸ್ಟ್ರೈಕ್ ರೇಟ್‌ನಲ್ಲಿ 55 ರನ್ ಗಳಿಸಿದರು. ಈ ಅಜೇಯ ಮತ್ತು ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಅವರು 5 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು.

220 ರ ಸ್ಟ್ರೈಕ್ ರೇಟ್‌ನಲ್ಲಿ 55 ರನ್ ಚಚ್ಚಿದ ಅಭಿನವ್; ಮನೀಶ್ ಅಬ್ಬರದ ನಡುವೆಯೂ ಸೋತ ಗುಲ್ಬರ್ಗಾ
TV9 Web
| Edited By: |

Updated on: Aug 15, 2022 | 3:19 PM

Share

ಮೈಸೂರಿನಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಲೀಗ್‌ (Maharaja Trophy) ದಿನ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಆಗಸ್ಟ್ 14 ರಂದು ನಡೆದ ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಮಂಗಳೂರು ಯುನೈಟೆಡ್ ನಡುವಿನ ಈ ಪಂದ್ಯದಲ್ಲಿ ಮಂಗಳೂರು ಯುನೈಟೆಡ್ 3 ವಿಕೆಟ್‌ಗಳ ಜಯ ಸಾಧಿಸಿತು. ಗುಲ್ಬರ್ಗ್ ಮಿಸ್ಟಿಕ್ಸ್ ತಂಡದ ನಾಯಕ ಮನೀಶ್ ಪಾಂಡೆ (Manish Pandey) ತಮ್ಮ ತಂಡದ ಪರವಾಗಿ ನಾಯಕತ್ವದ ಇನ್ನಿಂಗ್ಸ್‌ ಆಡಿದರು. ಆದರೆ ಮನಿಶ್ ತ್ವರಿತವಾಗಿ ರನ್ ಗಳಿಸಿದರಾದರೂ ಮಂಗಳೂರು ಯುನೈಟೆಡ್‌ ತಂಡದ 27 ವರ್ಷದ ಬ್ಯಾಟ್ಸ್‌ಮನ್ ಅಭಿನವ್ ಮನೋಹರ್ (Abhinav Manohar) ಅವರ ಮುಂದೆ ಮಂಡಿಯೂರಬೇಕಾಯಿತು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 192 ರನ್ ಗಳಿಸಿತು. ಉತ್ತರವಾಗಿ ಮಂಗಳೂರು ಯುನೈಟೆಡ್ 2 ಎಸೆತಗಳು ಉಳಿದಿರುವಂತೆಯೇ 7 ವಿಕೆಟ್ ಕಳೆದುಕೊಂಡು ಗುರಿ ಬೆನ್ನಟ್ಟಿತು. ಮಂಗಳೂರು ಯುನೈಟೆಡ್ ತಂಡವನ್ನು ಗೆಲ್ಲುವಲ್ಲಿ 27 ವರ್ಷದ ಅಭಿನವ್ ಮನೋಹರ್ ಪಾತ್ರ ಪ್ರಮುಖವಾಗಿತ್ತು.

ಮನೀಶ್ ಪಾಂಡೆ ಸ್ಫೋಟಕ ಇನ್ನಿಂಗ್ಸ್ ವ್ಯರ್ಥ

ಗುಲ್ಬರ್ಗ್ ಮಿಸ್ಟಿಕ್ಸ್ ಪರ ಮನೀಶ್ ಪಾಂಡೆ ಅತ್ಯಧಿಕ ರನ್ ಗಳಿಸಿದರು. ಅವರು 45 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 192 ಸ್ಟ್ರೈಕ್ ರೇಟ್‌ನಲ್ಲಿ 86 ರನ್ ಗಳಿಸಿದರು. ನಾಯಕ ಮನೀಶ್ ಪಾಂಡೆ ಅವರ ಈ ಅಜೇಯ ಇನ್ನಿಂಗ್ಸ್‌ನಿಂದಾಗಿ ಗುಲ್ಬರ್ಗ್ ಮಿಸ್ಟಿಕ್ಸ್ ಮಂಗಳೂರು ಯುನೈಟೆಡ್ ಎದುರು 193 ರನ್‌ಗಳ ಗುರಿಯನ್ನು ನೀಡಿತು.

220 ಸ್ಟ್ರೈಕ್ ರೇಟ್‌ನಲ್ಲಿ ಅರ್ಧಶತಕ ಗಳಿಸಿದ ಅಭಿನವ್ ಮನೋಹರ್

ಮಂಗಳೂರು ಯುನೈಟೆಡ್ ಗುರಿ ಬೆನ್ನತ್ತಲು ಆರಂಭಿಸಿದಾಗ ಅದರ ಮೊದಲ ವಿಕೆಟ್ ಶೂನ್ಯಕ್ಕೆ ಪತನವಾಯಿತು. 50 ರನ್‌ಗಳ ಅಂತರದಲ್ಲಿ ತಂಡದ 3 ವಿಕೆಟ್‌ಗಳು ಪತನಗೊಂಡವು. ಆದರೆ ಇದರ ನಂತರ ಅಭಿನವ್ ಮನೋಹರ್ ಅವರ ಆಕ್ರಮಣಕಾರಿ ಶೈಲಿಯು ಮನೀಷ್ ಪಾಂಡೆ ಅವರ ತಂಡ ಗುಲ್ಮಾರ್ಗ್ ಮಿಸ್ಟಿಕ್ಸ್ ತಂಡದ ಗೆಲುವಿಗೆ ಕೊಡಲಿ ಹಾಕಿತು.

ಅಭಿನವ್ ಮನೋಹರ್ ಕೇವಲ 25 ಎಸೆತಗಳಲ್ಲಿ 220 ಸ್ಟ್ರೈಕ್ ರೇಟ್‌ನಲ್ಲಿ 55 ರನ್ ಗಳಿಸಿದರು. ಈ ಅಜೇಯ ಮತ್ತು ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಅವರು 5 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಮನಿಶ್ ಪಾಂಡೆ ಅಬ್ಬರದ ನಡುವೆಯೂ ತಂಡಕ್ಕೆ ಗೆಲುವು ದಕ್ಕಲಿಲ್ಲ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ