AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಕಾಶ​ ಕೈ ತಪ್ಪಿದಾಗ ಬೇಸರವಾಗುತ್ತೆ… ಕಂಬ್ಯಾಕ್​ಗೆ ಅಭಿಷೇಕ್ ಶರ್ಮಾ ಪಣ!

Abhishek Sharma: ಝಿಂಬಾಬ್ವೆ ಪ್ರವಾಸದ ವೈಫಲ್ಯದ ಬೆನ್ನಲ್ಲೇ ಅಭಿಷೇಕ್ ಶರ್ಮಾ, ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಮಹತ್ವದ ಸಂದೇಶ ರವಾನಿಸಿದ್ದಾರೆ. ಬ್ಯಾಟಿಂಗ್‌ನಲ್ಲಿ ಸರಣಿ ಆಘಾತ ಎದುರಿಸಿದರೂ, ಬೌಲಿಂಗ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ ಯುವ ಆಲ್ ರೌಂಡರ್, ಅಭಿಮಾನಿಗಳಲ್ಲಿ ಕಂಬ್ಯಾಕ್ ಮಾಡುವ ಭರವಸೆ ಮೂಡಿಸಿದ್ದಾರೆ.

ಅವಕಾಶ​ ಕೈ ತಪ್ಪಿದಾಗ ಬೇಸರವಾಗುತ್ತೆ... ಕಂಬ್ಯಾಕ್​ಗೆ ಅಭಿಷೇಕ್ ಶರ್ಮಾ ಪಣ!
Abhishek Sharma Image Credit source: GettyImages
ಝಾಹಿರ್ ಯೂಸುಫ್
|

Updated on: Jul 27, 2026 | 10:39 AM

Share

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರೂ, ಬೌಲಿಂಗ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಯುವ ಆಲ್ ರೌಂಡರ್, ಮುಂಬರುವ ದಿನಗಳಲ್ಲಿ “ಇನ್ನಷ್ಟು ಬಲಿಷ್ಠವಾಗಿ ಕಮ್‌ಬ್ಯಾಕ್” ಮಾಡುವ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಝಿಂಬಾಬ್ವೆ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಭಿಷೇಕ್ ಶರ್ಮಾ, ಅವಕಾಶಗಳು ಕೈ ತಪ್ಪಿದಾಗ ಬೇಸರವಾಗುತ್ತದೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಕಠಿಣ ಪರಿಶ್ರಮದೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಕಂಬ್ಯಾಕ್ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಂಬ್ಯಾಕ್​ಗೆ ಅಭಿ ಪಣ:

ತಮ್ಮ ಕಳಪೆ ಬ್ಯಾಟಿಂಗ್ ಪ್ರದರ್ಶನದ ಬೆನ್ನಲ್ಲೇ ಅಭಿಮಾನಿಗಳನ್ನು ಉದ್ದೇಶಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್​ ಹಂಚಿಕೊಂಡಿರುವ ಅಭಿಷೇಕ್, “ಚಿನ್ನದಂತಹ ಅವಕಾಶಗಳು ಕೈ ತಪ್ಪಿದಾಗ ಬೇಸರವಾಗುತ್ತದೆ, ಆದರೆ ಇದು ಕಲಿಕೆಯ ಹಾದಿ. ಮುಂಬರುವ ದಿನಗಳಲ್ಲಿ ಕಠಿಣ ಪರಿಶ್ರಮದೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಕಂಬ್ಯಾಕ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇಂತಹದೊಂದು ಪೋಸ್ಟ್ ಹಂಚಿಕೊಳ್ಳಲು ಝಿಂಬಾಬ್ವೆ ವಿರುದ್ಧದ ಕಳಪೆ ಪ್ರದರ್ಶನವೇ ಕಾರಣ. ಏಕೆಂದರೆ ಮೂರು ಪಂದ್ಯಗಳಿಂದ ಅಭಿಷೇಕ್ ಶರ್ಮಾ ಕಲೆಹಾಕಿದ ಒಟ್ಟು ರನ್​ಗಳು ಕೇವಲ 11 ಮಾತ್ರ.

  • ಮೊದಲ ಟಿ20: 8 ಎಸೆತಗಳಲ್ಲಿ ಕೇವಲ 1 ರನ್
  • ಎರಡನೇ ಟಿ20: 8 ಎಸೆತಗಳಲ್ಲಿ ಕೇವಲ 8 ರನ್
  • ಮೂರನೇ ಟಿ20: 4 ಎಸೆತಗಳಲ್ಲಿ ಕೇವಲ 2 ರನ್

ಮೂರು ಪಂದ್ಯಗಳಿಂದ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದ ಅಭಿಷೇಕ್ ಶರ್ಮಾ ಅವರ ಫಾರ್ಮ್ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಥಿರತೆಯ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.

ಬೌಲಿಂಗ್‌ನಲ್ಲಿ ಐತಿಹಾಸಿಕ ದಾಖಲೆ!

ಬ್ಯಾಟಿಂಗ್ ಕೈಕೊಟ್ಟರೂ, ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ತಮ್ಮ ಅದ್ಭುತ ಎಡಗೈ ಸ್ಪಿನ್ ಬೌಲಿಂಗ್ ಮೂಲಕ ಇತಿಹಾಸ ನಿರ್ಮಿಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಝಿಂಬಾಬ್ವೆಯ ಕೆಳ ಕ್ರಮಾಂಕದ ಬ್ಯಾಟರ್‌ಗಳನ್ನು ಕರಾರುವಾಕ್ ದಾಳಿಯ ಮೂಲಕ ಪೆವಿಲಿಯನ್​ಗೆ ಕಳುಹಿಸಿದ್ದ ಅಭಿಷೇಕ್, 2.5 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದ್ದರು.

ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

ಈ ಮೂರು ವಿಕೆಟ್​ಗಳೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದ ಮೊದಲ ಭಾರತೀಯ ಆರಂಭಿಕ ಬ್ಯಾಟ್ಸ್‌ಮನ್ ಎಂಬ ಅಪರೂಪದ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!