AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸನ್​ರೈಸರ್ಸ್’ ಪರ ಪಾಕ್ ಆಟಗಾರ ಕಣಕ್ಕಿಳಿಯುವುದು ಡೌಟ್!

Abrar Ahmed: ಅಬ್ರಾರ್ ಅಹ್ಮದ್ ಪಾಕಿಸ್ತಾನ್ ಮೂಲದ ಕ್ರಿಕೆಟಿಗ. ಈ ಹಿಂದೆ ಭಾರತವನ್ನು ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಇತ್ತ ವಿರೋಧಿ ಮನಸ್ಥಿತಿ ಹೊಂದಿದ್ದರೂ ಪಾಕ್ ಮೂಲದ ಆಟಗಾರನನ್ನು ಸನ್​ರೈಸರ್ಸ್ ಹೈದರಾಬಾದ್ ಒಡೆತನದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿ ಖರೀದಿಸಿರುವುದು ಇದೀಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

'ಸನ್​ರೈಸರ್ಸ್' ಪರ ಪಾಕ್ ಆಟಗಾರ ಕಣಕ್ಕಿಳಿಯುವುದು ಡೌಟ್!
Abrar Ahmed
ಝಾಹಿರ್ ಯೂಸುಫ್
|

Updated on: Mar 18, 2026 | 8:54 AM

Share

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಆಯ್ಕೆಯಾಗಿರುವ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಮುಂಬರುವ ಟೂರ್ನಿಯಲ್ಲಿ ಸನ್​ರೈಸರ್ಸ್​ ಲೀಡ್ಸ್ ಪರ ಕಣಕ್ಕಿಳಿಯುವುದು ಅನುಮಾನ. ದಿ ಹಂಡ್ರೆಡ್ ಲೀಗ್​​ ಟೂರ್ನಿಗೆ ದಿನಾಂಕ ನಿಗದಿಯಾಗಿದ್ದು, ಇದೇ ವೇಳೆ ಪಾಕಿಸ್ತಾನ್ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಅಬ್ರಾರ್ ಆಯ್ಕೆಯಾದರೆ ಅವರು ಸನ್​ರೈಸರ್ಸ್ ಲೀಡ್ಸ್​ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ.

ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು ರಿಪೋರ್ಟ್ ಮಾಡಿದ್ದ ಪರಿಣಾಮ ಎಸ್​ಆರ್​ಎಲ್​ ತಂಡದ ಸೋಷಿಯಲ್ ಮೀಡಿಯಾ ಖಾತೆಯು ತಾತ್ಕಾಲಿಕ ಸ್ಥಗಿತವಾಗಿತ್ತು.

ಇತ್ತ ಭಾರತ ಸೇರಿದಂತೆ ಎಲ್ಲೆಡೆಯಿಂದ ಎಸ್​ಆರ್​ಹೆಚ್​ ಅಭಿಮಾನಿಗಳ ಒತ್ತಡ ಹೆಚ್ಚಾಗುತ್ತಿರುವುದರಿಂದ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪಾಕ್ ಆಟಗಾರನನ್ನು ಕೈ ಬಿಡಲಿದ್ದಾರೆ ಎಂದು ವರದಿಯಾಗಿತ್ತು.

ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಏಕೆಂದರೆ ಅಬ್ರಾರ್ ಅಹ್ಮದ್​ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದರೆ, ದಿ ಹಂಡ್ರೆಡ್ ಲೀಗ್​ಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಜುಲೈ ತಿಂಗಳವರೆಗೆ ಎಸ್​ಆರ್​ಹೆಚ್ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯಿಲ್ಲ ಎಂದು ತಿಳಿದು ಬಂದಿದೆ.

ಪಾಕಿಸ್ತಾನ್-ವೆಸ್ಟ್ ಇಂಡೀಸ್ ಸರಣಿ ಯಾವಾಗ?

ಪಾಕಿಸ್ತಾನ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯು 2026ರ ಜುಲೈ 15 ರಿಂದ ಆಗಸ್ಟ್ 7 ರವರೆಗೆ ನಡೆಯಲಿದೆ. ಇತ್ತ ‘ದಿ ಹಂಡ್ರೆಡ್’ ಟೂರ್ನಿಯು ಜುಲೈ 21 ರಿಂದ ಆಗಸ್ಟ್ 16 ರವರೆಗೆ ನಡೆಯಲಿದೆ.

ಅಬ್ರಾರ್ ಅಹ್ಮದ್ ಅವರು ಆಗಸ್ಟ್ 7 ರವರೆಗೆ ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಪಂದ್ಯಗಳನ್ನು ಆಡಬೇಕಿರುವುದರಿಂದ, ಅವರು ಸನ್​ರೈಸರ್ಸ್​ ಲೀಡ್ಸ್ ತಂಡದ ಬಹುತೇಕ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಖಚಿತವಾಗಿದೆ.

ಇದೇ ನೆಪವಿಟ್ಟುಕೊಂಡು ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಅಬ್ರಾರ್ ಬದಲಿಗೆ ಮತ್ತೋರ್ವ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ನೇರವಾಗಿ ಕೈ ಬಿಡಲು ಯಾಕೆ ಸಾಧ್ಯವಿಲ್ಲ?

ಕಾನೂನು ಮತ್ತು ಆರ್ಥಿಕ ಸಮಸ್ಯೆ: ಅಬ್ರಾರ್ ಅಹ್ಮದ್ ಅವರನ್ನು ಹರಾಜಿನಲ್ಲಿ £190,000 (ಸುಮಾರು ₹2.34 ಕೋಟಿ) ನೀಡಿ ಅಧಿಕೃತವಾಗಿ ಖರೀದಿಸಲಾಗಿದೆ. ಯಾವುದೇ ಬಲವಾದ ಶಿಸ್ತುಕ್ರಮದ ಕಾರಣವಿಲ್ಲದೆ ಅವರನ್ನು ಕೈಬಿಟ್ಟರೆ, ಫ್ರಾಂಚೈಸಿ ಅವರಿಗೆ ಪೂರ್ಣ ಹಣವನ್ನು ನೀಡಬೇಕಾಗುತ್ತದೆ.

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿಯಮ: ‘ದಿ ಹಂಡ್ರೆಡ್’ ಟೂರ್ನಿಯು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ನಿಯಮದಡಿ ನಡೆಯುತ್ತದೆ. ಕೇವಲ ಸೋಶಿಯಲ್ ಮೀಡಿಯಾ ಆಕ್ರೋಶದ ಕಾರಣಕ್ಕೆ ಆಟಗಾರನನ್ನು ತೆಗೆದುಹಾಕಲು ಇಸಿಬಿ ಅನುಮತಿ ನೀಡುವುದಿಲ್ಲ.

ಹೀಗಾಗಿಯೇ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಅದರಂತೆ ಅಬ್ರಾರ್ ಅಹ್ಮದ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆಯಾದರೆ, ಸನ್​ರೈಸರ್ಸ್ ಲೀಡ್ಸ್ ತಂಡದಿಂದ ಹೊರಬೀಳುವುದು ಖಚಿತ.,

ಸನ್‌ರೈಸರ್ಸ್ ಲೀಡ್ಸ್ ತಂಡದ ಆಟಗಾರರು:

ವಿದೇಶಿ ಆಟಗಾರರು: ಅಬ್ರಾರ್ ಅಹ್ಮದ್ (ಪಾಕಿಸ್ತಾನ್), ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ), ನಾಥನ್ ಎಲ್ಲಿಸ್ (ಆಸ್ಟ್ರೇಲಿಯಾ), ಮತ್ತು ರಯಾನ್ ರಿಕೆಲ್ಟನ್ (ಸೌತ್ ಆಫ್ರಿಕಾ).

ಇನ್ನೂ ಓದಿ: ಕೆಎಲ್​ ರಾಹುಲ್​ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್

ಇಂಗ್ಲೆಂಡ್ ಆಟಗಾರರು: ಹ್ಯಾರಿ ಬ್ರೂಕ್ (ನಾಯಕ), ಝಾಕ್ ಕ್ರಾಲಿ, ಬೆನ್ ಹೌವೆಲ್, ಬ್ರೈಡನ್ ಕಾರ್ಸ್, ಡಾನ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೀಸ್ ಟೋಪ್ಲಿ, ಟಾಮ್ ಅಲ್ಸೊಪ್, ಎಡ್ ಬರ್ನಾರ್ಡ್, ಟಾಮ್ ಲಾಸ್, ಮತ್ತು ಲಿಯಾಮ್ ಪ್ಯಾಟರ್ಸನ್-ವೈಟ್.

Follow Us
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ