AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಸರಣಿಯಿಂದ ಹಿಂದೆ ಸರಿದ ಅಫ್ಘಾನ್: ಮತ್ತೊಂದು ತಂಡದ ಸೇರ್ಪಡೆ

Afghanistan vs Pakistan: ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ್ ಡುರಾಂಡ್ ಲೈನ್ ಬಾರ್ಡರ್​​ನಲ್ಲಿ 12 ಪಾಕಿಸ್ತಾನ್ ಸೈನಿಕರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದರು.

ಪಾಕಿಸ್ತಾನ್ ಸರಣಿಯಿಂದ ಹಿಂದೆ ಸರಿದ ಅಫ್ಘಾನ್: ಮತ್ತೊಂದು ತಂಡದ ಸೇರ್ಪಡೆ
Afg Vs Pak
ಝಾಹಿರ್ ಯೂಸುಫ್
| Updated By: Digi Tech Desk|

Updated on:Nov 11, 2025 | 12:41 PM

Share

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಟಿ20 ತ್ರಿಕೋನ ಸರಣಿಯಿಂದ ಅಫ್ಘಾನಿಸ್ತಾನ್ ಹಿಂದೆ ಸರಿದಿದೆ.  ನವೆಂಬರ್ 17 ರಿಂದ ಶುರುವಾಗಲಿರುವ ಈ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನ್, ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯಬೇಕಿತ್ತು. ಆದರೀಗ ಪಾಕ್ ವಿರುದ್ಧದ ಸರಣಿಯನ್ನು ಬಹಿಷ್ಕರಿಸಲು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ.

ಪಾಕಿಸ್ತಾನ್ ಸೇನೆಯು ಪಕ್ತಿಕಾ ಪ್ರಾಂತ್ಯದ ಗಡಿಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿದ್ದರು. ಈ ದಾಳಿಯನ್ನು ಖಂಡಿಸಿ ಪಾಕ್ ವಿರುದ್ಧದ ಸರಣಿ ಆಡುವುದಿಲ್ಲ ಎಂದು ಅಘ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಅಕ್ಟೋಬರ್ 17 ರಂದು ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ಪಾಕ್ ಏರ್​ಫೋರ್ಸ್​ ದಾಳಿ ನಡೆಸಿದ್ದು, ಇದರಿಂದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದರು.

ಪಾಕ್ ದಾಳಿಯಿಂದಾಗಿ ದೇಶೀಯ ಕ್ರಿಕೆಟ್​ನಲ್ಲಿ ಗುರುತಿಸಿಕೊಂಡಿದ್ದ ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಮೃತಪಟ್ಟಿದ್ದರು.  ಈ ದಾಳಿ ಬೆನ್ನಲ್ಲೇ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ದೃಢ ನಿರ್ಧಾರ ತೆಗೆದುಕೊಂಡಿದ್ದು, ಮುಂಬರುವ ಸರಣಿಯಲ್ಲಿ ಪಾಕ್ ಅಫ್ಘಾನ್ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: IPL 2026: ಲೈಂಗಿನ ದೌರ್ಜನ್ಯ ಪ್ರಕರಣ: RCB ಆಟಗಾರ ಕಿಕ್ ಔಟ್ ಖಚಿತ

ಮತ್ತೊಂದು ತಂಡ ಸೇರ್ಪಡೆ:

ಅಫ್ಘಾನಿಸ್ತಾನ್ ತಂಡವು ಪಿಸಿಬಿ ಆಯೋಜಿಸಲಿರುವ ತ್ರಿಕೋನ ಸರಣಿಯಿಂದ ಹಿಂದೆ ಸರಿದಿರುವ ಕಾರಣ ಇದೀಗ ಝಿಂಬಾಬ್ವೆ ತಂಡವನ್ನು ಈ ಸರಣಿಗೆ ಸೇರ್ಪಡೆಗೊಳಿಸಲಾಗಿದೆ. ಅದರಂತೆ ಪಾಕಿಸ್ತಾನ್, ಶ್ರೀಲಂಕಾ ಹಾಗೂ ಝಿಂಬಾಬ್ವೆ ನಡುವೆ ತ್ರಿಕೋನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಎಲ್ಲಾ ತಂಡಗಳು 4 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಅಂಕ ಪಟ್ಟಿಯಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ಎರಡು ತಂಡಗಳು ಫೈನಲ್ ಆಡಲಿವೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಟ್ರೈ-ಸೀರೀಸ್ 2025 ವೇಳಾಪಟ್ಟಿ:

  • ನವೆಂಬರ್ 17: ಪಾಕಿಸ್ತಾನ್ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 18: ಶ್ರೀಲಂಕಾ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 22: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 23: ಪಾಕಿಸ್ತಾನ್ vs ಝಿಂಬಾಬ್ವೆ (ಲಾಹೋರ್)
  • ನವೆಂಬರ್ 25: ಶ್ರೀಲಂಕಾ v ಝಿಂಬಾಬ್ವೆ (ಲಾಹೋರ್)
  • ನವೆಂಬರ್ 27: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 29: ಫೈನಲ್ (ಲಾಹೋರ್)

Published On - 12:17 pm, Tue, 11 November 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ