ಎಮರ್ಜಿಂಗ್​ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ್ ಮುಖಾಮುಖಿ

ACC T20 Emerging Asia Cup 2024: ಎಮರ್ಜಿಂಗ್ ಏಷ್ಯಾಕಪ್ ಟೂರ್ನಿ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ. ಈ ಟೂರ್ನಿಯಲ್ಲಿ ಆಯಾ ದೇಶಗಳ ಕಿರಿಯರ ತಂಡ ಅಥವಾ A ತಂಡಗಳು ಕಣಕ್ಕಿಳಿಯುತ್ತವೆ. ಈ ಹಿಂದೆ ಏಕದಿನ ಮಾದರಿಯಲ್ಲಿ ಆಯೋಜಿಸಲಾಗಿದ್ದ ಈ ಟೂರ್ನಿಯು ಈ ಬಾರಿ ಟಿ20 ಸ್ವರೂಪದಲ್ಲಿ ಜರುಗಲಿದೆ.

ಎಮರ್ಜಿಂಗ್​ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ್ ಮುಖಾಮುಖಿ
IND vs PAK
Follow us
|

Updated on: Oct 08, 2024 | 12:03 PM

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಒಮಾನ್​ನಲ್ಲಿ ನಡೆಯಲಿರುವ ಈ ಟೂರ್ನಿಯು ಅಕ್ಟೋಬರ್ 18 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 27 ರಂದು ನಡೆಯಲಿದೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಈ ಎಂಟು ತಂಡಗಳನ್ನು ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪೈಪೋಟಿ ನಡೆಯಲಿದೆ.

ಎಮರ್ಜಿಂಗ್​ ಏಷ್ಯಾ ಕಪ್ 2024ರ ತಂಡಗಳು:

  • ಗ್ರೂಪ್- A
  • ಶ್ರೀಲಂಕಾ ಎ
  • ಬಾಂಗ್ಲಾದೇಶ್ ಎ
  • ಅಫ್ಘಾನಿಸ್ತಾನ್ ಎ
  • ಹಾಂಗ್ ಕಾಂಗ್ ಎ

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಸಿಕ್ಸರ್​ಗೆ ಕೆಳಗೆ ಬಿದ್ದ ವಿರಾಟ್ ಕೊಹ್ಲಿಯ ದಾಖಲೆ

  • ಗ್ರೂಪ್-B
  • ಭಾರತ ಎ
  • ಪಾಕಿಸ್ತಾನ್ ಎ
  • ಯುಎಇ ಎ
  • ಒಮಾನ್ ಎ

ಭಾರತ vs ಪಾಕಿಸ್ತಾನ್ ಮುಖಾಮುಖಿ:

ಎಮರ್ಜಿಂಗ್ ಏಷ್ಯಾಕಪ್ ಟೂರ್ನಿಯ ಗ್ರೂಪ್ ಬಿ ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಂಡಿವೆ. ಹೀಗಾಗಿ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಅದರಂತೆ ಅಕ್ಟೋಬರ್ 19 ರಂದು ನಡೆಯಲಿರುವ 4ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಎದುರು ಬದುರಾಗಲಿದೆ.

ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:

  1. ಅಕ್ಟೋಬರ್ 18: ಬಾಂಗ್ಲಾದೇಶ್ ಎ vs ಹಾಂಗ್ ಕಾಂಗ್ ಎ
  2. ಅಕ್ಟೋಬರ್ 18: ಶ್ರೀಲಂಕಾ ಎ vs ಅಫ್ಘಾನಿಸ್ತಾನ ಎ
  3. ಅಕ್ಟೋಬರ್ 19: ಒಮಾನ್ vs ಯುಎಇ ಎ
  4. ಅಕ್ಟೋಬರ್ 19: ಭಾರತ ಎ vs ಪಾಕಿಸ್ತಾನ್ ಎ
  5. ಅಕ್ಟೋಬರ್ 20: ಶ್ರೀಲಂಕಾ ಎ vs ಹಾಂಗ್ ಕಾಂಗ್ ಎ
  6. ಅಕ್ಟೋಬರ್ 20: ಬಾಂಗ್ಲಾದೇಶ್ ಎ vs ಅಫ್ಘಾನಿಸ್ತಾನ್ ಎ
  7. ಅಕ್ಟೋಬರ್ 21: ಒಮಾನ್ vs ಪಾಕಿಸ್ತಾನ ಎ
  8. ಅಕ್ಟೋಬರ್ 21: ಭಾರತ ಎ vs ಯುಎಇ ಎ
  9. ಅಕ್ಟೋಬರ್ 22: ಅಫ್ಘಾನಿಸ್ತಾನ್ ಎ vs ಹಾಂಗ್ ಕಾಂಗ್ ಎ
  10. ಅಕ್ಟೋಬರ್ 22: ಶ್ರೀಲಂಕಾ ಎ vs ಬಾಂಗ್ಲಾದೇಶ್ ಎ
  11. ಅಕ್ಟೋಬರ್ 23: ಪಾಕಿಸ್ತಾನ್ ಎ vs ಯುಎಇ ಎ
  12. ಅಕ್ಟೋಬರ್ 23: ಒಮಾನ್ vs ಭಾರತ ಎ
  13. ಅಕ್ಟೋಬರ್ 25: ಸೆಮಿಫೈನಲ್ 1
  14. ಅಕ್ಟೋಬರ್ 25: ಸೆಮಿಫೈನಲ್ 2
  15. ಅಕ್ಟೋಬರ್ 27: ಫೈನಲ್
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್