AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಿನಿ ಹರಾಜಿಗೂ ಮುನ್ನ ಚೆನ್ನೈ ತಂಡದಿಂದ ಈ ನಾಲ್ಕು ಆಟಗಾರರಿಗೆ ಗೇಟ್​ಪಾಸ್..?

Chennai Super Kings: ಈ ವರ್ಷದ ಮಿನಿ ಹರಾಜಿಗೆ ಮುಂಚಿತವಾಗಿ ಚೆನ್ನೈ ಯಾವ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

IPL 2023: ಮಿನಿ ಹರಾಜಿಗೂ ಮುನ್ನ ಚೆನ್ನೈ ತಂಡದಿಂದ ಈ ನಾಲ್ಕು ಆಟಗಾರರಿಗೆ ಗೇಟ್​ಪಾಸ್..?
ಚೆನ್ನೈ ತಂಡ
TV9 Web
| Edited By: |

Updated on:Nov 09, 2022 | 2:31 PM

Share

ಟಿ20 ವಿಶ್ವಕಪ್ (T20 World Cup 2022) ಬಳಿಕ ಭಾರತದಲ್ಲಿ ಐಪಿಎಲ್ (IPL 2023) ಸದ್ದು ಮಾಡಲಿದೆ. ವಾಸ್ತವವಾಗಿ ಇದೇ ಡಿಸೆಂಬರ್​ನಲ್ಲಿಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಈ ಹರಾಜಿಗೂ ಮುನ್ನ ಎಲ್ಲಾ ತಂಡಗಳು ತಮ್ಮ ತಂಡದಲ್ಲಿ ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಮಂಡಳಿಗೆ ನೀಡಬೇಕಾಗಿದೆ. ಇದರ ಅಂಗವಾಗಿ ಚೆನ್ನೈ ಸೂಪರ್ ಕಿಂಗ್ಸ್ (Chennai Super King) ಫಾಂಚೈಸಿ ಕೂಡ ತಂಡದಿಂದ ಕೈಬಿಡುವ ಆಟಗಾರರ ಬಗ್ಗೆ ಒಂದು ತೀರ್ಮಾನಕ್ಕೆ ಬಂದಿದೆ ಎಂದು ವರದಿಯಾಗಿದೆ. ಈ ಹಿಂದೆ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರನ್ನು ತಂಡದಿಂದ ಕೈಬಿಡಲಾಗುತ್ತಿದೆ ಎಂದು ವರದಿಗಳು ಬಂದಿದ್ದವು. ಆದರೆ ಈ ಎಲ್ಲಾ ಊಹಾಪೋಹಗಳನ್ನು ಮಂಡಳಿ ಅಲ್ಲಗಳೆದಿತ್ತು. ಈಗ ಈ ವರ್ಷದ ಮಿನಿ ಹರಾಜಿಗೆ ಮುಂಚಿತವಾಗಿ ಚೆನ್ನೈ ಯಾವ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಕ್ರಿಸ್ ಜೋರ್ಡಾನ್

ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಇಂಗ್ಲೆಂಡ್ ವೇಗದ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 3.60 ಕೋಟಿ ರೂ.ಗೆ ಖರೀದಿಸಿತ್ತು. ಜೋರ್ಡಾನ್ ಐಪಿಎಲ್ 2022 ರಲ್ಲಿ ಚೆನ್ನೈ ಪರ ಒಟ್ಟು 4 ಪಂದ್ಯಗಳನ್ನು ಆಡಿ, ಅದರಲ್ಲಿ ಕೇವಲ 2 ವಿಕೆಟ್ ಮಾತ್ರ ಪಡೆದಿದ್ದರು. ಹಾಗೆಯೇ 10 ಕ್ಕಿಂತ ಹೆಚ್ಚು ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟು ತುಂಬಾ ದುಬಾರಿಯಾಗಿದ್ದರು. ಆದ್ದರಿಂದ ಈ ವರ್ಷದ ಮಿನಿ ಹರಾಜಿನ ಮೊದಲು CSK ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಆಡಮ್ ಮಿಲ್ನೆ..

2022 ರ ಮೆಗಾ ಹರಾಜಿನಲ್ಲಿ, ಕಿವೀಸ್ ವೇಗದ ಬೌಲರ್ ಆಡಮ್ ಮಿಲ್ನೆ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ರೂ. 1.90 ಕೋಟಿಗೆ ಖರೀದಿಸಿತ್ತು. ಐಪಿಎಲ್ 2022 ರಲ್ಲಿ, ಅವರು ಚೆನ್ನೈ ಪರ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದರು. ಅದರಲ್ಲಿ ಅವರು ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಈ ಬಾರಿ ಮಿನಿ ಹರಾಜಿಗೂ ಮುನ್ನ ಅವರನ್ನು ಬಿಡುಗಡೆ ಮಾಡಲು ಸಿಎಸ್​ಕೆ ಮುಂದಾಗಿದೆ.

ಇದನ್ನೂ ಓದಿ: Virat Kohli Injured: ಭಾರತಕ್ಕೆ ಮತ್ತೊಂದು ಆಘಾತ; ಅಭ್ಯಾಸದ ವೇಳೆ ಕೊಹ್ಲಿಗೆ ಗಾಯ..! ವಿಡಿಯೋ ನೋಡಿ

ನಾರಾಯಣ ಜಗದೀಶನ್

2022 ರ ಮೆಗಾ ಹರಾಜಿನಲ್ಲಿ, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ನಾರಾಯಣ ಜಗದೀಶನ್ ಅವರನ್ನು ರೂ. 20 ಲಕ್ಷಗಳ ಮೂಲ ಬೆಲೆಗೆ CSK ಖರೀದಿಸಿತ್ತು. ಕಳೆದ ವರ್ಷ ನಾರಾಯಣ್ ಚೆನ್ನೈ ಪರ ಒಟ್ಟು 2 ಪಂದ್ಯಗಳನ್ನು ಆಡಿದ್ದರು. ಅದರಲ್ಲಿ ಅವರು 40 ರನ್ ಗಳಿಸಿದರು. ಈ ವರ್ಷದ ಮಿನಿ ಹರಾಜಿಗೂ ಮುನ್ನ ನಾರಾಯಣ್ ಜಗದೀಶನ್ ಅವರನ್ನು ಬಿಡುಗಡೆ ಮಾಡಲು ಸಿಎಸ್‌ಕೆ ಯೋಜಿಸುತ್ತಿದೆಯಂತೆ.

ಮಿಚೆಲ್ ಸ್ಯಾಂಟ್ನರ್

ನ್ಯೂಜಿಲೆಂಡ್ ಬೌಲಿಂಗ್ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಅವರನ್ನು ಮೆಗಾ ಹರಾಜಿನಲ್ಲಿ 1.9 ಕೋಟಿ ರೂಗಳಿಗೆ ತೆಗೆದುಕೊಳ್ಳಲಾಗಿತ್ತು. 2022 ರಲ್ಲಿ ಚೆನ್ನೈ ಪರ ಒಟ್ಟು 6 ಪಂದ್ಯಗಳನ್ನು ಆಡಿದ್ದ ಅವರು 4 ವಿಕೆಟ್ಗಳನ್ನು ಪಡೆದಿದ್ದರು. ಆದರೆ ಈ ಬಾರಿ ಅವರನ್ನು ತಂಡದಿಂದ ಬಿಡುಗಡೆ ಮಾಡಲು ಚೆನ್ನೈ ಮುಂದಾಗಿದೆಯಂತೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Wed, 9 November 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!