AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಖರೀದಿಗೆ ಮುಂದಾದ ಪೂನವಾಲ

IPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್​ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಹೀಗಾಗಿ ಆರ್​ಸಿಬಿ ತಂಡದ ಖರೀದಿಗೆ ದೊಡ್ಡ ಉದ್ಯಮಿಗಳ ನಡುವೆ ಪೈಪೋಟಿ ನಡೆಯುವ ಸಾಧ್ಯತೆಯಿದೆ.

RCB ತಂಡದ ಖರೀದಿಗೆ ಮುಂದಾದ ಪೂನವಾಲ
Adar Poonawalla
ಝಾಹಿರ್ ಯೂಸುಫ್
|

Updated on: Oct 02, 2025 | 12:35 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಇದರ ಬೆನ್ನಲ್ಲೇ ರಾಯಲ್ ಫ್ರಾಂಚೈಸಿ ಖರೀದಿಗೆ ಖ್ಯಾತ ಉದ್ಯಮ ಆದಾರ್ ಪೂನಾವಾಲ ಆಸಕ್ತಿ ತೋರಿದ್ದಾರೆ ಎಂದು ವರದಿಯಾಗಿದೆ.

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ ಈ ಬಗ್ಗೆ ಡಿಯಾಜಿಯೋ ಕಂಪೆನಿ ಜೊತೆ ಮಾತುಕತೆ ನಡೆಸಿದ್ದು, ಈ ಮಾತುಕತೆ ಯಶಸ್ವಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಪುಣೆ ಮೂಲದ ಉದ್ಯಮಿ ಪಾಲಾಗಲಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದೆ.

ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ವರದಿಯಾಗಿತ್ತು. ಅದು ಕೂಡ ಸುಮಾರು 2 ಬಿಲಿಯನ್ ಡಾಲರ್​ಗೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ.ಗೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಖರೀದಿಸಲು ಖ್ಯಾತ ಉದ್ಯಮಿ ಆದಾರ್ ಪೂನಾವಾಲ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಮಾತುಕತೆ ಯಶಸ್ವಿಯಾದರೆ, ಐಪಿಎಲ್​ನ 19ನೇ ಆವೃತ್ತಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿಯು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಪಾಲಾಗಲಿದೆ.

ಸಂಪೂರ್ಣ ಶೇರು ಮಾರಾಟ:

ಐಪಿಎಲ್​ನ ಮಾಜಿ ಅಧ್ಯಕ್ಷರಾದ ಲಲಿತ್ ಮೋದಿ ಅವರ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಸಂಪೂರ್ಣ ಶೇರು ಮಾರಾಟ ಮಾಡಲಿದೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯನ್ನು 17 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: 15 ವರ್ಷಗಳ ಬಳಿಕ ದಿಗ್ಗಜರಿಲ್ಲದೇ ಕಣಕ್ಕಿಳಿದ ಟೀಮ್ ಇಂಡಿಯಾ

ಇತ್ತ ಹಾಲಿ ಐಪಿಎಲ್ ಚಾಂಪಿಯನ್ ಪಟ್ಟದೊಂದಿಗೆ ಅಪಾರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಖರೀದಿಗೆ ದೊಡ್ಡ ಉದ್ಯಮ ನಡುವೆ ಪೈಪೋಟಿ ನಡೆಯುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್