Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ಜೆರ್ಸಿ ವಿನ್ಯಾಸ ಅನಾವರಣ

Team India Jersey: ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ತೀನ್​ ಕಾ ಡ್ರೀಮ್ (ಮೂರರ ಕನಸು) ಘೋಷಣೆಯೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಈಗಾಗಲೇ 2 ಏಕದಿನ ವಿಶ್ವಕಪ್​ ಗೆದ್ದಿರುವ ಭಾರತ ತಂಡವು 3ನೇ ಬಾರಿ ವರ್ಲ್ಡ್ ಕಪ್ ಗೆಲ್ಲುವ ಉಮೇದಿನಲ್ಲಿದೆ. ಈ ಕನಸನ್ನು ಹುರಿದುಂಬಿಸುವಂತಹ ಶೀರ್ಷಿಕೆ ಹಾಡನ್ನು ಅಡಿಡಾಸ್ ಕಂಪೆನಿ ಬಿಡುಗಡೆ ಮಾಡಿರುವುದು ವಿಶೇಷ.

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ಜೆರ್ಸಿ ವಿನ್ಯಾಸ ಅನಾವರಣ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 20, 2023 | 5:47 PM

ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಧರಿಸಲಿರುವ ನೂತನ ಜೆರ್ಸಿಯ ವಿನ್ಯಾಸ ಅನಾವರಣಗೊಂಡಿದೆ. ಏಕದಿನ ವಿಶ್ವಕಪ್​ಗೂ ಮುನ್ನ ಅಡಿಡಾಸ್ ಕಂಪೆನಿಯು ಪ್ರಕಟಿಸಿರುವ ಥೀಮ್​ ಸಾಂಗ್​ನಲ್ಲಿ ನೂತನ ಜೆರ್ಸಿಯಲ್ಲಿ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಇದೇ ವಿನ್ಯಾಸದಲ್ಲಿರುವ ಜೆರ್ಸಿಯಲ್ಲಿ ಭಾರತ ತಂಡ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಖ್ಯಾತ ಗಾಯಕ ರಫ್ತಾರ್ ಹಾಡಿರುವ ಈ ಹಾಡಿನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಭಾರತ ತಂಡದ ಕೆಲ ಆಟಗಾರರು ಕಾಣಿಸಿಕೊಂಡಿದ್ದಾರೆ. ಏಷ್ಯಾಕಪ್​ನಲ್ಲಿ ಧರಿಸಿದ್ದ ಅದೇ ಬಣ್ಣದ ಜೆರ್ಸಿಯನ್ನು ಭಾರತೀಯ ಆಟಗಾರರು ತೊಟ್ಟಿದ್ದಾರೆ.

ಆದರೆ ಈ ಜೆರ್ಸಿಯ ಭುಜ ಭಾಗದಲ್ಲಿ ತ್ರಿವರ್ಣ ಧ್ವಜದ ಮೂರು ಬಣ್ಣಗಳನ್ನು ನೀಡಲಾಗಿರುವುದು ವಿಶೇಷ. ಹೀಗಾಗಿ ಇದೇ ಮಾದರಿಯ ಜೆರ್ಸಿಯಲ್ಲಿ ಭಾರತ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಇಲ್ಲಿ ಭಾರತದ ಜೆರ್ಸಿಯ ಭುಜ ಭಾಗದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಮುಂಭಾಗದಲ್ಲಿ ಡ್ರೀಮ್ 11 ಜಾಹೀರಾತು ಇದೆ. ಆದರೆ ಏಕದಿನ ವಿಶ್ವಕಪ್ ಜೆರ್ಸಿಯಲ್ಲಿ ಯಾವುದೇ ಕಂಪೆನಿಯ ಜಾಹೀರಾತು ಕಾಣಿಸಿಕೊಳ್ಳುವುದಿಲ್ಲ.

ಬದಲಾಗಿ ಏಕದಿನ ವಿಶ್ವಕಪ್ ಲೋಗೋ ಹಾಗೂ ಇಂಡಿಯಾ ಎಂಬ ಬರಹ ಮಾತ್ರ ಇರಲಿದೆ. ಹೀಗಾಗಿ ತ್ರಿವರ್ಣ ಪಟ್ಟಿಯೊಂದಿಗೆ ಈ ಬಾರಿ ಕೂಡ ಟೀಮ್ ಇಂಡಿಯಾ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಇದನ್ನೂ ಓದಿ: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ತೀನ್​ ಕಾ ಡ್ರೀಮ್:

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ತೀನ್​ ಕಾ ಡ್ರೀಮ್ (ಮೂರರ ಕನಸು) ಘೋಷಣೆಯೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಈಗಾಗಲೇ 2 ಏಕದಿನ ವಿಶ್ವಕಪ್​ ಗೆದ್ದಿರುವ ಭಾರತ ತಂಡವು 3ನೇ ಬಾರಿ ವರ್ಲ್ಡ್ ಕಪ್ ಗೆಲ್ಲುವ ಉಮೇದಿನಲ್ಲಿದೆ. ಈ ಕನಸನ್ನು ಹುರಿದುಂಬಿಸುವಂತಹ ಶೀರ್ಷಿಕೆ ಹಾಡನ್ನು ಅಡಿಡಾಸ್ ಕಂಪೆನಿ ಬಿಡುಗಡೆ ಮಾಡಿರುವುದು ವಿಶೇಷ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್