AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ಜೆರ್ಸಿ ವಿನ್ಯಾಸ ಅನಾವರಣ

Team India Jersey: ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ತೀನ್​ ಕಾ ಡ್ರೀಮ್ (ಮೂರರ ಕನಸು) ಘೋಷಣೆಯೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಈಗಾಗಲೇ 2 ಏಕದಿನ ವಿಶ್ವಕಪ್​ ಗೆದ್ದಿರುವ ಭಾರತ ತಂಡವು 3ನೇ ಬಾರಿ ವರ್ಲ್ಡ್ ಕಪ್ ಗೆಲ್ಲುವ ಉಮೇದಿನಲ್ಲಿದೆ. ಈ ಕನಸನ್ನು ಹುರಿದುಂಬಿಸುವಂತಹ ಶೀರ್ಷಿಕೆ ಹಾಡನ್ನು ಅಡಿಡಾಸ್ ಕಂಪೆನಿ ಬಿಡುಗಡೆ ಮಾಡಿರುವುದು ವಿಶೇಷ.

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ಜೆರ್ಸಿ ವಿನ್ಯಾಸ ಅನಾವರಣ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Sep 20, 2023 | 5:47 PM

Share

ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಧರಿಸಲಿರುವ ನೂತನ ಜೆರ್ಸಿಯ ವಿನ್ಯಾಸ ಅನಾವರಣಗೊಂಡಿದೆ. ಏಕದಿನ ವಿಶ್ವಕಪ್​ಗೂ ಮುನ್ನ ಅಡಿಡಾಸ್ ಕಂಪೆನಿಯು ಪ್ರಕಟಿಸಿರುವ ಥೀಮ್​ ಸಾಂಗ್​ನಲ್ಲಿ ನೂತನ ಜೆರ್ಸಿಯಲ್ಲಿ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಇದೇ ವಿನ್ಯಾಸದಲ್ಲಿರುವ ಜೆರ್ಸಿಯಲ್ಲಿ ಭಾರತ ತಂಡ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಖ್ಯಾತ ಗಾಯಕ ರಫ್ತಾರ್ ಹಾಡಿರುವ ಈ ಹಾಡಿನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಭಾರತ ತಂಡದ ಕೆಲ ಆಟಗಾರರು ಕಾಣಿಸಿಕೊಂಡಿದ್ದಾರೆ. ಏಷ್ಯಾಕಪ್​ನಲ್ಲಿ ಧರಿಸಿದ್ದ ಅದೇ ಬಣ್ಣದ ಜೆರ್ಸಿಯನ್ನು ಭಾರತೀಯ ಆಟಗಾರರು ತೊಟ್ಟಿದ್ದಾರೆ.

ಆದರೆ ಈ ಜೆರ್ಸಿಯ ಭುಜ ಭಾಗದಲ್ಲಿ ತ್ರಿವರ್ಣ ಧ್ವಜದ ಮೂರು ಬಣ್ಣಗಳನ್ನು ನೀಡಲಾಗಿರುವುದು ವಿಶೇಷ. ಹೀಗಾಗಿ ಇದೇ ಮಾದರಿಯ ಜೆರ್ಸಿಯಲ್ಲಿ ಭಾರತ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಇಲ್ಲಿ ಭಾರತದ ಜೆರ್ಸಿಯ ಭುಜ ಭಾಗದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಮುಂಭಾಗದಲ್ಲಿ ಡ್ರೀಮ್ 11 ಜಾಹೀರಾತು ಇದೆ. ಆದರೆ ಏಕದಿನ ವಿಶ್ವಕಪ್ ಜೆರ್ಸಿಯಲ್ಲಿ ಯಾವುದೇ ಕಂಪೆನಿಯ ಜಾಹೀರಾತು ಕಾಣಿಸಿಕೊಳ್ಳುವುದಿಲ್ಲ.

ಬದಲಾಗಿ ಏಕದಿನ ವಿಶ್ವಕಪ್ ಲೋಗೋ ಹಾಗೂ ಇಂಡಿಯಾ ಎಂಬ ಬರಹ ಮಾತ್ರ ಇರಲಿದೆ. ಹೀಗಾಗಿ ತ್ರಿವರ್ಣ ಪಟ್ಟಿಯೊಂದಿಗೆ ಈ ಬಾರಿ ಕೂಡ ಟೀಮ್ ಇಂಡಿಯಾ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಇದನ್ನೂ ಓದಿ: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ತೀನ್​ ಕಾ ಡ್ರೀಮ್:

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ತೀನ್​ ಕಾ ಡ್ರೀಮ್ (ಮೂರರ ಕನಸು) ಘೋಷಣೆಯೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಈಗಾಗಲೇ 2 ಏಕದಿನ ವಿಶ್ವಕಪ್​ ಗೆದ್ದಿರುವ ಭಾರತ ತಂಡವು 3ನೇ ಬಾರಿ ವರ್ಲ್ಡ್ ಕಪ್ ಗೆಲ್ಲುವ ಉಮೇದಿನಲ್ಲಿದೆ. ಈ ಕನಸನ್ನು ಹುರಿದುಂಬಿಸುವಂತಹ ಶೀರ್ಷಿಕೆ ಹಾಡನ್ನು ಅಡಿಡಾಸ್ ಕಂಪೆನಿ ಬಿಡುಗಡೆ ಮಾಡಿರುವುದು ವಿಶೇಷ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ