AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್
India A
ಝಾಹಿರ್ ಯೂಸುಫ್
|

Updated on: Oct 26, 2024 | 7:37 AM

Share

ಒಮಾನ್​​ನ ಅಲ್​ ಎಮಿರಾತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಮರ್ಜಿಂಗ್​ ಏಷ್ಯಾಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ತಂಡಕ್ಕೆ ಅಫ್ಘಾನಿಸ್ತಾನ್ ಸೋಲುಣಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ಎ ತಂಡ ಫೈನಲ್​ಗೆ ಪ್ರವೇಶಿಸಿದರೆ, ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಆರಂಭಿಕರಾಗಿ ಕಣಕ್ಕಿಳಿದ ಝುಬೈದ್ ಅಕ್ಬರಿ (64) ಹಾಗೂ ಸೆದಿಖುಲ್ಲಾ ಅಟಲ್ (83) ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡಿದರು. ಇನ್ನು ಕರೀಮ್ ಜನ್ನತ್ 20 ಎಸೆತಗಳಲ್ಲಿ 41 ರನ್ ಬಾರಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್​ ಕಲೆಹಾಕಿತು.

207 ರನ್​ಗಳ ಕಠಿಣ ಗುರಿ ಪಡೆದ ಭಾರತ ಎ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಪ್ರಭ್​ ಸಿಮ್ರಾನ್ ಸಿಂಗ್ (19) ಹಾಗೂ ಅಭಿಷೇಕ್ ಶರ್ಮಾ (7) ಬೇಗನೆ ವಿಕೆಟ್ ಒಪ್ಪಿಸಿದರೆ, ಆ ಬಳಿಕ ಬಂದ ತಿಲಕ್ ವರ್ಮಾ 16 ರನ್​ಗಳಿಸಿ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ಆಯುಷ್ ಬದೋನಿ 31 ರನ್ ಬಾರಿಸಿದರೆ, ನೆಹಾಲ್ ವಧೇರಾ 20 ರನ್​ಗಳ ಕೊಡುಗೆ ನೀಡಿದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಮಣ್​ದೀಪ್ ಸಿಂಗ್ ಸ್ಪೋಟಕ ಇನಿಂಗ್ಸ್ ಆಡಿದರು.

ಕೇವಲ 34 ಎಸೆತಗಳನ್ನು ಎದುರಿಸಿದ ರಮಣ್​ದೀಪ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 64 ರನ್​ ಚಚ್ಚಿದರು. ಇದಾಗ್ಯೂ ಅವರಿಗೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ ಎ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟದೊಂದಿಗೆ 186 ರನ್ ಬಾರಿಸಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತ ಎ ಪ್ಲೇಯಿಂಗ್ 11: ಪ್ರಭ್​ ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅಭಿಷೇಕ್ ಶರ್ಮಾ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ನೆಹಾಲ್ ವಧೇರಾ , ರಮಣ್​ದೀಪ್ ಸಿಂಗ್ , ನಿಶಾಂತ್ ಸಿಂಧು , ಅಂಶುಲ್ ಕಾಂಬೋಜ್ , ರಾಹುಲ್ ಚಹರ್ , ರಸಿಖ್ ದಾರ್ ಸಲಾಂ , ಆಕಿಬ್ ಖಾನ್.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ಅಫ್ಘಾನಿಸ್ತಾನ್ ಎ ಪ್ಲೇಯಿಂಗ್ 11: ಸೆದಿಖುಲ್ಲಾ ಅಟಲ್ , ಝುಬೈದ್ ಅಕ್ಬರಿ , ದರ್ವಿಶ್ ರಸೂಲಿ (ನಾಯಕ) , ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್) , ಕರೀಂ ಜನ್ನತ್ , ಶಾಹಿದುಲ್ಲಾ ಕಮಾಲ್ , ಶರಫುದ್ದೀನ್ ಅಶ್ರಫ್ , ಅಬ್ದುಲ್ ರೆಹಮಾನ್ , ಅಲ್ಲಾ ಗಜನ್ಫರ್ , ಖೈಸ್ ಅಹ್ಮದ್ , ಬಿಲಾಲ್ ಸಮಿ.

ಫೈನಲ್ ಪೈಪೋಟಿ ಯಾವಾಗ?

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ. ಅದರಂತೆ ಅಕ್ಟೋಬರ್ 27 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ