AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್
India A
ಝಾಹಿರ್ ಯೂಸುಫ್
|

Updated on: Oct 26, 2024 | 7:37 AM

Share

ಒಮಾನ್​​ನ ಅಲ್​ ಎಮಿರಾತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಮರ್ಜಿಂಗ್​ ಏಷ್ಯಾಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ತಂಡಕ್ಕೆ ಅಫ್ಘಾನಿಸ್ತಾನ್ ಸೋಲುಣಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ಎ ತಂಡ ಫೈನಲ್​ಗೆ ಪ್ರವೇಶಿಸಿದರೆ, ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಆರಂಭಿಕರಾಗಿ ಕಣಕ್ಕಿಳಿದ ಝುಬೈದ್ ಅಕ್ಬರಿ (64) ಹಾಗೂ ಸೆದಿಖುಲ್ಲಾ ಅಟಲ್ (83) ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡಿದರು. ಇನ್ನು ಕರೀಮ್ ಜನ್ನತ್ 20 ಎಸೆತಗಳಲ್ಲಿ 41 ರನ್ ಬಾರಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್​ ಕಲೆಹಾಕಿತು.

207 ರನ್​ಗಳ ಕಠಿಣ ಗುರಿ ಪಡೆದ ಭಾರತ ಎ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಪ್ರಭ್​ ಸಿಮ್ರಾನ್ ಸಿಂಗ್ (19) ಹಾಗೂ ಅಭಿಷೇಕ್ ಶರ್ಮಾ (7) ಬೇಗನೆ ವಿಕೆಟ್ ಒಪ್ಪಿಸಿದರೆ, ಆ ಬಳಿಕ ಬಂದ ತಿಲಕ್ ವರ್ಮಾ 16 ರನ್​ಗಳಿಸಿ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ಆಯುಷ್ ಬದೋನಿ 31 ರನ್ ಬಾರಿಸಿದರೆ, ನೆಹಾಲ್ ವಧೇರಾ 20 ರನ್​ಗಳ ಕೊಡುಗೆ ನೀಡಿದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಮಣ್​ದೀಪ್ ಸಿಂಗ್ ಸ್ಪೋಟಕ ಇನಿಂಗ್ಸ್ ಆಡಿದರು.

ಕೇವಲ 34 ಎಸೆತಗಳನ್ನು ಎದುರಿಸಿದ ರಮಣ್​ದೀಪ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 64 ರನ್​ ಚಚ್ಚಿದರು. ಇದಾಗ್ಯೂ ಅವರಿಗೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ ಎ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟದೊಂದಿಗೆ 186 ರನ್ ಬಾರಿಸಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತ ಎ ಪ್ಲೇಯಿಂಗ್ 11: ಪ್ರಭ್​ ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅಭಿಷೇಕ್ ಶರ್ಮಾ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ನೆಹಾಲ್ ವಧೇರಾ , ರಮಣ್​ದೀಪ್ ಸಿಂಗ್ , ನಿಶಾಂತ್ ಸಿಂಧು , ಅಂಶುಲ್ ಕಾಂಬೋಜ್ , ರಾಹುಲ್ ಚಹರ್ , ರಸಿಖ್ ದಾರ್ ಸಲಾಂ , ಆಕಿಬ್ ಖಾನ್.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ಅಫ್ಘಾನಿಸ್ತಾನ್ ಎ ಪ್ಲೇಯಿಂಗ್ 11: ಸೆದಿಖುಲ್ಲಾ ಅಟಲ್ , ಝುಬೈದ್ ಅಕ್ಬರಿ , ದರ್ವಿಶ್ ರಸೂಲಿ (ನಾಯಕ) , ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್) , ಕರೀಂ ಜನ್ನತ್ , ಶಾಹಿದುಲ್ಲಾ ಕಮಾಲ್ , ಶರಫುದ್ದೀನ್ ಅಶ್ರಫ್ , ಅಬ್ದುಲ್ ರೆಹಮಾನ್ , ಅಲ್ಲಾ ಗಜನ್ಫರ್ , ಖೈಸ್ ಅಹ್ಮದ್ , ಬಿಲಾಲ್ ಸಮಿ.

ಫೈನಲ್ ಪೈಪೋಟಿ ಯಾವಾಗ?

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ. ಅದರಂತೆ ಅಕ್ಟೋಬರ್ 27 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ.

Follow Us
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ