AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್
India A
ಝಾಹಿರ್ ಯೂಸುಫ್
|

Updated on: Oct 26, 2024 | 7:37 AM

Share

ಒಮಾನ್​​ನ ಅಲ್​ ಎಮಿರಾತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಮರ್ಜಿಂಗ್​ ಏಷ್ಯಾಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ತಂಡಕ್ಕೆ ಅಫ್ಘಾನಿಸ್ತಾನ್ ಸೋಲುಣಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ಎ ತಂಡ ಫೈನಲ್​ಗೆ ಪ್ರವೇಶಿಸಿದರೆ, ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಆರಂಭಿಕರಾಗಿ ಕಣಕ್ಕಿಳಿದ ಝುಬೈದ್ ಅಕ್ಬರಿ (64) ಹಾಗೂ ಸೆದಿಖುಲ್ಲಾ ಅಟಲ್ (83) ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡಿದರು. ಇನ್ನು ಕರೀಮ್ ಜನ್ನತ್ 20 ಎಸೆತಗಳಲ್ಲಿ 41 ರನ್ ಬಾರಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್​ ಕಲೆಹಾಕಿತು.

207 ರನ್​ಗಳ ಕಠಿಣ ಗುರಿ ಪಡೆದ ಭಾರತ ಎ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಪ್ರಭ್​ ಸಿಮ್ರಾನ್ ಸಿಂಗ್ (19) ಹಾಗೂ ಅಭಿಷೇಕ್ ಶರ್ಮಾ (7) ಬೇಗನೆ ವಿಕೆಟ್ ಒಪ್ಪಿಸಿದರೆ, ಆ ಬಳಿಕ ಬಂದ ತಿಲಕ್ ವರ್ಮಾ 16 ರನ್​ಗಳಿಸಿ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ಆಯುಷ್ ಬದೋನಿ 31 ರನ್ ಬಾರಿಸಿದರೆ, ನೆಹಾಲ್ ವಧೇರಾ 20 ರನ್​ಗಳ ಕೊಡುಗೆ ನೀಡಿದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಮಣ್​ದೀಪ್ ಸಿಂಗ್ ಸ್ಪೋಟಕ ಇನಿಂಗ್ಸ್ ಆಡಿದರು.

ಕೇವಲ 34 ಎಸೆತಗಳನ್ನು ಎದುರಿಸಿದ ರಮಣ್​ದೀಪ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 64 ರನ್​ ಚಚ್ಚಿದರು. ಇದಾಗ್ಯೂ ಅವರಿಗೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ ಎ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟದೊಂದಿಗೆ 186 ರನ್ ಬಾರಿಸಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತ ಎ ಪ್ಲೇಯಿಂಗ್ 11: ಪ್ರಭ್​ ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅಭಿಷೇಕ್ ಶರ್ಮಾ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ನೆಹಾಲ್ ವಧೇರಾ , ರಮಣ್​ದೀಪ್ ಸಿಂಗ್ , ನಿಶಾಂತ್ ಸಿಂಧು , ಅಂಶುಲ್ ಕಾಂಬೋಜ್ , ರಾಹುಲ್ ಚಹರ್ , ರಸಿಖ್ ದಾರ್ ಸಲಾಂ , ಆಕಿಬ್ ಖಾನ್.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ಅಫ್ಘಾನಿಸ್ತಾನ್ ಎ ಪ್ಲೇಯಿಂಗ್ 11: ಸೆದಿಖುಲ್ಲಾ ಅಟಲ್ , ಝುಬೈದ್ ಅಕ್ಬರಿ , ದರ್ವಿಶ್ ರಸೂಲಿ (ನಾಯಕ) , ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್) , ಕರೀಂ ಜನ್ನತ್ , ಶಾಹಿದುಲ್ಲಾ ಕಮಾಲ್ , ಶರಫುದ್ದೀನ್ ಅಶ್ರಫ್ , ಅಬ್ದುಲ್ ರೆಹಮಾನ್ , ಅಲ್ಲಾ ಗಜನ್ಫರ್ , ಖೈಸ್ ಅಹ್ಮದ್ , ಬಿಲಾಲ್ ಸಮಿ.

ಫೈನಲ್ ಪೈಪೋಟಿ ಯಾವಾಗ?

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ. ಅದರಂತೆ ಅಕ್ಟೋಬರ್ 27 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ